Friday, October 18, 2024
Friday, October 18, 2024

ರೋಡ್ಕುಂದ: ಬಾದಾಮಿ ಚಾಲುಕ್ಯ ಇಮ್ಮಡಿ ಕೀರ್ತಿವರ್ಮನ ಅಪ್ರಕಟಿತ ಶಾಸನ ಪತ್ತೆ

ರೋಡ್ಕುಂದ: ಬಾದಾಮಿ ಚಾಲುಕ್ಯ ಇಮ್ಮಡಿ ಕೀರ್ತಿವರ್ಮನ ಅಪ್ರಕಟಿತ ಶಾಸನ ಪತ್ತೆ

Date:

ಉಡುಪಿ, ಜ.7: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ರೋಡ್ಕುಂದ ಗ್ರಾಮದಲ್ಲಿನ ಅಪ್ರಕಟಿತ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿಗಳಾದ ಹೆಚ್. ಕಾಡಸಿದ್ದ ಮತ್ತು ಹೊನ್ನರವಲಿ ಪತ್ತೆ ಮಾಡಿದ್ದು, ಈ ಶಾಸನವನ್ನು ಓದುವಲ್ಲಿ ಎಸ್. ನಾಗರಾಜಪ್ಪ (ಮೈಸೂರಿನ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಶಾಸನತಜ್ಞ), ಮಂದರ್ಕೆ ನಿತ್ಯಾನಂದ ಪೈ (ಭಾರತೀಯ ನಾಣ್ಯಶಾಸ್ತ್ರಜ್ಞ) ಹಾಗೂ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಸಹಕಾರ ನೀಡಿರುತ್ತಾರೆ.

ಸ್ವಸ್ತಿಶ್ರೀ ಎಂಬ ಶುಭಸೂಚಕದಿಂದ ಪ್ರಾರಂಭವಾಗುವ ಈ ಶಾಸನವನ್ನು 8ನೆಯ ಶತಮಾನದ ಕನ್ನಡ ಲಿಪಿ ಮತ್ತು ಭಾಷೆಯಲ್ಲಿ ಬರೆಯಲಾಗಿದ್ದು, 5 ಸಾಲುಗಳನ್ನು ಒಳಗೊಂಡಿದೆ.

ಶಾಸನದ ಮಹತ್ವ: ಬಾದಾಮಿ ಚಾಲುಕ್ಯ ದೊರೆ ಇಮ್ಮಡಿ ಕೀರ್ತಿವರ್ಮನ ಆಳ್ವಿಕೆಯಲ್ಲಿ (ಸಾ.ಶ.ವ 744-757) ಪ್ರಾಯಶಃ ಮಗೆಯರ ಕುಲಕ್ಕೆ ಸೇರಿದ ಬಿಜಕಾರಿ ಎಂಬುವವನು ಸಾಲಿಗುನ್ದೆ (ಪ್ರಸ್ತುತ ಸಾಲುಗುಂದ) ಗ್ರಾಮವನ್ನು ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಗೆದ್ದು, ಸತ್ತ ವಿಷಯವನ್ನು ಶಾಸನವು ತಿಳಿಸುತ್ತದೆ. ರೋಡ್ಕುಂದ ಗ್ರಾಮದಲ್ಲಿ ಬಾದಾಮಿ‌ ಚಾಲುಕ್ಯ ಇಮ್ಮಡಿ ಕೀರ್ತಿವರ್ಮನ ಉಲ್ಲೇಖವಿರುವ ಪ್ರಥಮ ಶಾಸನ ಇದಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!