Sunday, October 27, 2024
Sunday, October 27, 2024

ನಗರಸಭೆ ವಾಣಿಜ್ಯ ಕಟ್ಟಡದ ಅಂಗಡಿ ಬಾಡಿಗೆದಾರರ ಸಭೆ

ನಗರಸಭೆ ವಾಣಿಜ್ಯ ಕಟ್ಟಡದ ಅಂಗಡಿ ಬಾಡಿಗೆದಾರರ ಸಭೆ

Date:

ಉಡುಪಿ, ಜ.12: ಉಡುಪಿ ನಗರಸಭೆಯ ಸಿಟಿ ಬಸ್ ನಿಲ್ದಾಣ, ಸರ್ವೀಸ್ ಬಸ್ ನಿಲ್ದಾಣ, ವಿಶ್ವೇಶ್ವರಯ್ಯ ಮಾರುಕಟ್ಟೆ ಕಟ್ಟಡದ ವಾಣಿಜ್ಯ ಕಟ್ಟಡದ ಅಂಗಡಿ ಬಾಡಿಗೆದಾರ ರೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಸಭೆ ನಡೆಸಿದರು. ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ಉಡುಪಿ ನಗರ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ನಗರದ ವಾಹನ ದಟ್ಟಣೆ, ಪಾರ್ಕಿಂಗ್ ಕೊರತೆಯಿಂದ ಜನಸಾಮಾನ್ಯರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದೆ.

ಈಗಾಗಲೇ ನಗರಸಭೆ ವತಿಯಿಂದ ವೈಜ್ಞಾನಿಕ ರೀತಿಯಲ್ಲಿ ಸಿಟಿ ಬಸ್ ನಿಲ್ದಾಣ, ಸರ್ವೀಸ್ ಬಸ್ ನಿಲ್ದಾಣವನ್ನು ಆಧುನಿಕ ಶೈಲಿಯಲ್ಲಿ ವೈಜ್ಞಾನಿಕ ರೀತಿಯಲ್ಲಿ ನಿರ್ಮಿಸಲು ಯೋಜನೆ ರೂಪಿಸುತ್ತಿದೆ. ಶೀಘ್ರದಲ್ಲೇ ಪರಿಣಿತರ ಮೂಲಕ ಈ ಬಗ್ಗೆ ನೀಲನಕ್ಷೆ ತಯಾರಿಸಿ ನೆಲ ಅಂತಸ್ತು ಸಹಿತ ಮಲ್ಟಿ ಲೆವೆಲ್ ಪಾರ್ಕಿಂಗ್ ವ್ಯವಸ್ಥೆ, ವಾಣಿಜ್ಯ ಅಂಗಡಿಗಳು ಹಾಗೂ ಸುಸಜ್ಜಿತ ಬಸ್ ನಿಲ್ದಾಣದ ನಿರ್ಮಾಣದ ಬಗ್ಗೆ ಕಾರ್ಯಪ್ರವೃತ್ತವಾಗಿದ್ದು ಇದಕ್ಕೆ ಅಂಗಡಿ ಬಾಡಿಗೆದಾರರ ಸಲಹೆ ಸಹಕಾರ ಕೋರಿದರು. ಸಭೆಯಲ್ಲಿ ಉಪಸ್ಥಿತರಿದ್ದ ಅಂಗಡಿ ಬಾಡಿಗೆದಾರರು ನಗರದ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರದ ಆಶಯ ವ್ಯಕ್ತಪಡಿಸಿದರು. ಪೌರಾಯುಕ್ತರಾದ ರಾಯಪ್ಪ, ನಗರಸಭಾ ಸದಸ್ಯರು, ಅಧಿಕಾರಿಗಳಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂದಿನ (ಅ.26) ಚಿನ್ನದ ದರ

GOLD 22KT- 7,360 8 GRAMS- 58,880

ಕೆ.ಎಂ.ಸಿ. ಮಣಿಪಾಲ: ಜಾಗೃತಿ ನಡಿಗೆ

ಮಣಿಪಾಲ, ಅ.26: ಪ್ರತಿವರ್ಷ ಅಕ್ಟೋಬರ್‌ನ ಎರಡನೇ ಶನಿವಾರದಂದು, ಉಪಶಾಮಕ ಆರೈಕೆ ಅಗತ್ಯಗಳೊಂದಿಗೆ...

ಹಂಗಾರಕಟ್ಟೆ ಕಲಾಕೇಂದ್ರ ವಿದ್ಯಾರ್ಥಿಗಳ ಸಮಾವೇಶ

ಕೋಟ, ಅ.26: ಐವತ್ತು ವರ್ಷದ ಇತಿಹಾಸವಿರುವ ಗುಂಡ್ಮಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ,...

ಸ್ನಾತಕೋತ್ತರ ಪದವಿಯ ಸಂಶೋಧನಾ ಮಾರ್ಗದರ್ಶಿಗಳ ಕ್ಷಮತೆ ವೃದ್ಧಿ ರಾಷ್ಟ್ರೀಯ ಕಾರ‍್ಯಗಾರ

ಮೂಡುಬಿದಿರೆ, ಅ.26: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಭಾರತೀಯ ಔಷಧ...
error: Content is protected !!