Thursday, September 19, 2024
Thursday, September 19, 2024

ಕುಡಿಯುವ ನೀರಿನ ಘಟಕ ಉದ್ಘಾಟನೆ

ಕುಡಿಯುವ ನೀರಿನ ಘಟಕ ಉದ್ಘಾಟನೆ

Date:

ಉಡುಪಿ, ಜ.21: ಶಂಕರನಾರಾಯಣದ ಬಸ್ ನಿಲ್ದಾಣದ ಪ್ರಯಾಣಿಕರ ತಂಗುದಾಣದಲ್ಲಿ ಬಹುದಿನಗಳ ಬೇಡಿಕೆಯ ಕುಡಿಯುವ ನೀರಿನ ಘಟಕದ ಉದ್ಘಾಟನೆ ಮತ್ತು ಹಸ್ತಾಂತರ ಕಾರ್ಯಕ್ರಮ ನಡೆಯಿತು. ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್‌ನ ರಾಷ್ಟ್ರೀಯ ನಿರ್ದೇಶಕರಾದ ಸೀನಿಯರ್ ಚಿತ್ರ ಕುಮಾರ್ ಅವರು ನೀರಿನ ಘಟಕವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಉದ್ಘಾಟನೆಯ ನಂತರ ಅದರ ನಿರ್ವಹಣೆಗಾಗಿ ಗ್ರಾಮ ಪಂಚಾಯತ್‌ಗೆ ನೀಡುವರೇ ಸಾಂಕೇತಿಕವಾಗಿ ಅದನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಮೇಶ ಶೆಟ್ಟಿ ಕಲ್ಗದ್ದೆಯವರಿಗೆ ಹಸ್ತಾಂತರಿಸಲಾಯಿತು. ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್ ಶಂಕರನಾರಾಯಣ ಲೀಜನ್‌ನ ಸ್ಥಾಪಕಾಧ್ಯಕ್ಷರಾದ ರಾಘವೇಂದ್ರ ಶೇಟ್ ಮಾತನಾಡಿ, ಹಲವು
ವರ್ಷಗಳಿಂದಲೂ ಪ್ರಯಾಣಿಕರಿಗೆ ಇಲ್ಲಿ ಕುಡಿಯುವ ನೀರಿನ ಸೂಕ್ತ ವ್ಯವಸ್ಥೆ ಇಲ್ಲದೇ ಇರುವುದನ್ನು ಮನಗಂಡು ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್ ಶಂಕರನಾರಾಯಣ ಲೀಜನ್ ನ ಸರ್ವಸದಸ್ಯರ ಒಮ್ಮತದ ನಿರ್ಣಯದಂತೆ ಸುಮಾರು 35000.00 ರೂ ವೆಚ್ಚದ ಈ ಶುದ್ಧ ಕುಡಿಯುವ ನೀರಿನ ಘಟಕವನ್ನು ತಮ್ಮ ಸಂಸ್ಥೆಯ ವತಿಯಿಂದ ನೀಡಲಾಗಿದೆ ಎಂದರು. ಸೀನಿಯರ್ ಚೇಂಬರ್‌ನ ಕಾರ್ಯದರ್ಶಿ ರಾಮಚಂದ್ರ ದೇವಾಡಿಗ, ಖಜಾಂಚಿ ಎ. ಪಿ. ಶೆಟ್ಟಿ, ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ರಾಜೀವ ಶೆಟ್ಟಿ ಶಾಡಿಗುಂಡಿ, ಸೀನಿಯರ್ ಚೇಂಬರ್‌ನ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!