Friday, September 20, 2024
Friday, September 20, 2024

ಅಯೋಧ್ಯೆಯಲ್ಲಿ ವೈಭವದ ಪ್ರಾಣ ಪ್ರತಿಷ್ಠಾ ಸಮಾರಂಭ

ಅಯೋಧ್ಯೆಯಲ್ಲಿ ವೈಭವದ ಪ್ರಾಣ ಪ್ರತಿಷ್ಠಾ ಸಮಾರಂಭ

Date:

ಅಯೋಧ್ಯೆ, ಜ.22: ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭವು ಇಂದು ಅಯೋಧ್ಯೆಯಲ್ಲಿ ಸಕಲ ಧಾರ್ಮಿಕ ವಿಧಿವಿಧಾನಗಳಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯಿತು. ನೂತನವಾಗಿ ನಿರ್ಮಿಸಲಾದ ಭವ್ಯವಾದ ದೇವಾಲಯದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು. ದೇವಾಲಯದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯನ್ನು ಪ್ರಧಾನಿ ಅನಾವರಣಗೊಳಿಸಿದರು. 

ಪ್ರಾಣಪ್ರತಿಷ್ಠಾ ಸಮಾರಂಭದ ನಂತರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸಾವಿರಾರು ವರ್ಷಗಳ ನಂತರವೂ ಕೂಡ ಜನವರಿ 22ರ ದಿನವನ್ನು ಜನಮಾನಸದಲ್ಲಿ ಅಚ್ಚಾಗಿ ಉಳಿಯಲಿದೆ. ಇಂದಿನಿಂದ ನೂತನ ಕಾಲಚಕ್ರದ ಆರಂಭವಾಗಿದೆ. ರಾಮಮಂದಿರದ ನಿರ್ಮಾಣದಿಂದ ಜನರಲ್ಲಿ ಹೊಸ ಚೈತನ್ಯವನ್ನು ತುಂಬಿದೆ. ಶತಮಾನಗಳ ಕಾಯುವಿಕೆಯ ನಂತರ ಶ್ರೀರಾಮನು ತನ್ನ ನಿವಾಸಕ್ಕೆ ಆಗಮಿಸಿದ್ದಾನೆ. ಶತಮಾನಗಳ ಕಾಲ ನಾವು ತೋರಿದ ತಾಳ್ಮೆ ಮತ್ತು ನಾವು ಮಾಡಿದ ತ್ಯಾಗದ ನಂತರ, ನಮ್ಮ ಭಗವಂತ ಬಂದಿದ್ದಾನೆ. ರಾಮನ ಪರಮ ಪಾವನ ಆಶೀರ್ವಾದಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ. ಭಗವಾನ್ ರಾಮನು ಭಾರತೀಯರ ಆತ್ಮದಲ್ಲಿದ್ದಾನೆ ಮತ್ತು ಇಡೀ ದೇಶವು ಇಂದು ದೀಪಾವಳಿಯನ್ನು ಆಚರಿಸುತ್ತಿದೆ.

ನಮ್ಮ ಪ್ರೀತಿ ಮತ್ತು ತಪಸ್ಸಿನಲ್ಲಿ ಏನಾದರೂ ಕೊರತೆಯಿದ್ದಿರಬಹುದು. ಅದಕ್ಕಾಗಿ ಇಂದು ನಾನು ಭಗವಾನ್ ರಾಮನಲ್ಲಿ ಕ್ಷಮೆಯಾಚಿಸುತ್ತೇನೆ, ಏಕೆಂದರೆ ಈ ಕೆಲಸ (ರಾಮ ಮಂದಿರ ನಿರ್ಮಾಣ) ಹಲವು ವರ್ಷಗಳಿಂದ ನಡೆಯಲಿಲ್ಲ. ರಾಮನ ಅಸ್ತಿತ್ವವನ್ನೇ ಪ್ರಶ್ನಿಸಲಾಗಿತ್ತು.. ನ್ಯಾಯ ಒದಗಿಸಿದ ಸುಪ್ರೀಂ ಕೋರ್ಟ್‌ಗೆ ನನ್ನ ಧನ್ಯವಾದಗಳನ್ನು ತಿಳಿಸಲು ಬಯಸುತ್ತೇನೆ, ಕಾನೂನಿನ ಪ್ರಕಾರ ಮಂದಿರವನ್ನು ನಿರ್ಮಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕೆನೆ ಬಣ್ಣದ ಕುರ್ತಾ ಮತ್ತು ಕೆನೆ ಬಣ್ಣದ ಧೋತಿಯನ್ನು ಧರಿಸಿದ ಪ್ರಧಾನಿ ಪ್ರಾಣಪ್ರತಿಷ್ಠಾಪನೆಯ ಕಾರ್ಯ ನೆರವೇರಿಸಿದರು.

ಸಮಾರಂಭದಲ್ಲಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲ ಆನಂದಿಬೆನ್ ಪಟೇಲ್ ಸೇರಿದಂತೆ ಇತರ ಗಣ್ಯರು ಪ್ರಾರ್ಥನೆ ಸಲ್ಲಿಸಿದರು. ರಘುಪತಿ ರಾಘವ ರಾಜಾ ರಾಮ್ ಅವರ ಭಜನೆಯ ನಡುವೆ, ಶ್ರೀರಾಮ ಜನ್ಮಭೂಮಿ ದೇವಸ್ಥಾನದ ಆವರಣದ ಮೇಲೆ ಹೆಲಿಕಾಪ್ಟರ್ ಮೂಲಕ ಹೂವಿನ ದಳಗಳನ್ನು ಸುರಿಸಲಾಯಿತು.

ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ, ಸುನಿಲ್ ಮಿತ್ತಲ್ ಮತ್ತು ಅನಿಲ್ ಅಂಬಾನಿ, ನಟರಾದ ಅಮಿತಾಭ್ ಬಚ್ಚನ್, ರಜನಿಕಾಂತ್, ರಣಬೀರ್ ಕಪೂರ್, ಚಿರಂಜೀವಿ, ಮಾಧುರಿ ದೀಕ್ಷಿತ್, ಕತ್ರಿನಾ ಕೈಫ್, ಆಲಿಯಾ ಭಟ್ ಮತ್ತು ಕಂಗನಾ ರನೌತ್, ಕ್ರೀಡಾ ಸಾಧಕರಾದ ಸಚಿನ್ ತೆಂಡೂಲ್ಕರ್, ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್, ಸೈನಾ ನೆಹ್ವಾಲ್, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಸೇರಿದಂತೆ ಹಲವಾರು ಗಣ್ಯರಿದ್ದರು. ದೇಶದ ಎಲ್ಲಾ ಪ್ರಮುಖ ಆಧ್ಯಾತ್ಮಿಕ ಮತ್ತು ಧಾರ್ಮಿಕ ಪಂಥಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಪ್ರಾಣ ಪ್ರತಿಷ್ಟಾ ಕಾರ್ಯಕ್ರಮಕ್ಕೂ ಮುನ್ನ ಗಾಯಕರಾದ ಸೋನು ನಿಗಮ್, ಅನುರಾಧಾ ಪುಡ್ವಾಲ್ ಮತ್ತು ಶಂಕರ್ ಮಹಾದೇವನ್ ಅವರು ರಾಮ ಭಜನೆಯೊಂದಿಗೆ ಭಕ್ತರನ್ನು ಮಂತ್ರಮುಗ್ಧರನ್ನಾಗಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!