Friday, September 20, 2024
Friday, September 20, 2024

ಪೌರ ಕಾರ್ಮಿಕರ ವಿಶ್ರಾಂತಿ ಕೊಠಡಿಗೆ ಶಿಲಾನ್ಯಾಸ

ಪೌರ ಕಾರ್ಮಿಕರ ವಿಶ್ರಾಂತಿ ಕೊಠಡಿಗೆ ಶಿಲಾನ್ಯಾಸ

Date:

ಮಂಗಳೂರು, ಜ. 25: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 42ನೇ ಡೊಂಗರಕೇರಿ ವಾರ್ಡಿನ ಅಳಕೆ ವೆಟ್ ವೆಲ್ ಬಳಿ ಗೈಲ್ ಗ್ಯಾಸ್ ರವರ ಸಿ.ಎಸ್.ಆರ್ ಅನುದಾನದಡಿ 23 ಲಕ್ಷ ವೆಚ್ಚದಲ್ಲಿ ಪೌರ ಕಾರ್ಮಿಕರಿಗಾಗಿ ವಿಶ್ರಾಂತಿ ಕೊಠಡಿ ಮತ್ತು ಶೌಚಾಲಯದ ಕಟ್ಟಡ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಸೇರಿದಂತೆ ಪ್ರತೀ ನಗರಗಳ ನೈರ್ಮಲ್ಯ ಹಾಗೂ ಸುಂದರ ಪರಿಸರಕ್ಕೆ ಪೌರಕಾರ್ಮಿಕರ ಕೊಡುಗೆ ಬಹಳಷ್ಟಿದೆ. ಅಂತಹ ಕಾರ್ಮಿಕರಿಗೆ ನಿರಂತರ ಕಾರ್ಯದೊತ್ತಡದ ನಡುವೆ ಒಂದಷ್ಟು ವಿಶ್ರಾಂತಿಯ ಅಗತ್ಯವಿದೆ. ಇದನ್ನು ಮನಗಂಡು ಪ್ರಸ್ತುತ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಗೈಲ್ ಗ್ಯಾಸ್ ರವರಿಂದ ಸಿ.ಎಸ್.ಆರ್ ಅನುದಾನದಡಿಯಲ್ಲಿ ಈ ವಿಶೇಷ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಇಂತಹದೇ ಇನ್ನೂ ಮೂರ್ನಾಲ್ಕು ಯೋಜನೆಗಳು ಜಾರಿಯಾಗಲಿವೆ. ಅವೆಲ್ಲವೂ ಶೀಘ್ರದಲ್ಲಿ ಪೌರಕಾರ್ಮಿಕರ ಉಪಯೋಗಕ್ಕೆ ಸಿಗುವಂತಾಗಲಿ ಎಂದರು.

ಉಪಮೇಯರ್ ಸುನಿತಾ, ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯೆ ಜಯಶ್ರೀ ಕುಡ್ವ, ಪೂರ್ಣಿಮಾ, ರಾಜೇಂದ್ರ ಕುಮಾರ್, ರಮೇಶ್ ಹೆಗ್ಡೆ, ಗೈಲ್ ಗ್ಯಾಸ್ ಹಾಗೂ ಪಾಲಿಕೆ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!