Tuesday, September 17, 2024
Tuesday, September 17, 2024

ಕೆರ್ಗಾಲು: ಸಂವಿಧಾನ ಜಾಗೃತಿ ರಥಕ್ಕೆ ಅದ್ಧೂರಿ ಸ್ವಾಗತ

ಕೆರ್ಗಾಲು: ಸಂವಿಧಾನ ಜಾಗೃತಿ ರಥಕ್ಕೆ ಅದ್ಧೂರಿ ಸ್ವಾಗತ

Date:

ಉಡುಪಿ, ಜ.31: ಸಂವಿಧಾನ ಮಹತ್ವ ಮತ್ತು ಸಂವಿಧಾನದ ಕುರಿತು ಅರಿವು ಮೂಡಿಸುವ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಬುಧವಾರ ಕೆರ್ಗಾಲು ಗ್ರಾಮ ಪಂಚಾಯತ್ ವತಿಯಿಂದ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಕೆರ್ಗಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ರೇವತಿ ಪೂಜಾರಿ ಮಾತನಾಡಿ, ಸಂವಿಧಾನ ಜಾಗೃತಿ ಜಾಥಾವು ಜಿಲ್ಲೆಯಾದ್ಯಂತ ಸಂಚರಿಸಿ, ಸಾರ್ವಜನಿಕರಲ್ಲಿ ಸಂವಿಧಾನದ ಆಶಯ ಹಾಗೂ ಮೌಲ್ಯಗಳ ಕುರಿತು ಮಾಹಿತಿ ನೀಡುತ್ತಾ ಸಾಗುತ್ತದೆ. ಸಮಾನತೆಯನ್ನು ಆಡಳಿತದ ತತ್ವವಾಗಿ ಸ್ವೀಕರಿಸಬೇಕು. ಮಕ್ಕಳಿಗೆ ಧಾರ್ಮಿಕತೆಯನ್ನು ಬೋಧಿಸುವುದರೊಂದಿಗೆ ಮೂಢನಂಬಿಕೆಯಿಂದ ಹೊರಬಂದು ಉನ್ನತ ಮಟ್ಟದ ಶಿಕ್ಷಣ ಪಡೆಯಬೇಕು ಎಂದರು. ಶಿಕ್ಷಕ ಪ್ರದೀಪ್ ಸಂವಿಧಾನ ಮಹತ್ವ ಕುರಿತು ಉಪನ್ಯಾಸ ನೀಡಿದರು.

ಗ್ರಾಮ ಪಂಚಾಯತ್ ಸದಸ್ಯರು, ನೋಡೆಲ್ ಅಧಿಕಾರಿ ನಾಗೇಶ್ ನಾಯ್ಕ್, ಸಮಾಜ ಕಲ್ಯಾಣ ಅಧಿಕಾರಿ ರಾಘವೇಂದ್ರ ವೆರ್ಣೇಕರ್, ಸಂಜೀವಿನಿ ಸಂಘದ ಅಧ್ಯಕ್ಷರು, ಸದಸ್ಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕಂಬದಕೋಣೆ ಸರಕಾರಿ ಪದವಿಪೂರ್ವ ಕಾಲೇಜಿನಿಂದ ಗ್ರಾಮ ಪಂಚಾಯತ್ ವರೆಗೆ ಸಂವಿಧಾನ ಜಾಗೃತಿ ಜಾಥಾವು ಸಾಗಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!