Tuesday, September 17, 2024
Tuesday, September 17, 2024

ಉಡುಪಿ ಜಿಲ್ಲೆಯನ್ನು ಶೈಕ್ಷಣಿಕವಾಗಿ ಪ್ರಥಮ ಸ್ಥಾನಿಯಾಗಿಸುವ ಪಣ ತೊಡೋಣ: ಯಶ್ಪಾಲ್ ಸುವರ್ಣ

ಉಡುಪಿ ಜಿಲ್ಲೆಯನ್ನು ಶೈಕ್ಷಣಿಕವಾಗಿ ಪ್ರಥಮ ಸ್ಥಾನಿಯಾಗಿಸುವ ಪಣ ತೊಡೋಣ: ಯಶ್ಪಾಲ್ ಸುವರ್ಣ

Date:

ಉಡುಪಿ, ಫೆ.8: ಉಡುಪಿ ಜಿಲ್ಲೆಯ ಸರಕಾರಿ ಶಾಲೆಯ ಶಿಕ್ಷಕರು ಹಲವು ಸಮಸ್ಯೆ ಸವಾಲುಗಳ ನಡುವೆಯೂ ತಮ್ಮ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿಶೇಷ ಮುತುವರ್ಜಿ ವಹಿಸಿ ಕಾರ್ಯೋನ್ಮುಖವಾಗಿ ಸೇವೆ ಸಲ್ಲಿಸುತ್ತಿದ್ದು, ಈ ಬಾರಿ ಮತ್ತೊಮ್ಮೆ ಎಸ್.ಎಸ್. ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸುವ ಮೂಲಕ ಉಡುಪಿ ಜಿಲ್ಲೆಯನ್ನು ರಾಜ್ಯದಲ್ಲಿಯೇ ಪ್ರಥಮ ಸ್ಥಾನಿಯಾಗಿಸುವ ಪಣ ತೊಡುವಂತೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಕರೆ ನೀಡಿದರು. ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಉಡುಪಿ ಇದರ ಸಭಾಂಗಣದಲ್ಲಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಅಭಿವೃದ್ದಿ ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಪರೀಕ್ಷಾ ಪೂರ್ವ ತಯಾರಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಸಮಾರಂಭದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ಭಾಸ್ಕರ್ ಶೆಟ್ಟಿ ಮಾತನಾಡಿ ಜಿಲ್ಲೆಯ ಸರ್ಕಾರಿ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಅಡಿಪಾಯವಾಗಿರುವ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಸಂಕಲ್ಪ ಮಾಡಿದ್ದು, ಪೋಷಕರು ಹಾಗೂ ವಿದ್ಯಾರ್ಥಿಗಳ ಜೊತೆ ಸಮನ್ವಯ ಸಾಧಿಸುವ ಮೂಲಕ ಸರಕಾರಿ ಶಾಲೆಯಲ್ಲಿ ಉತ್ತಮ ಫಲಿತಾಂಶಕ್ಕೆ ಒತ್ತು ನೀಡುವಂತೆ ಶಿಕ್ಷಕರಿಗೆ ಪ್ರೇರಣೆಯ ಮಾತುಗಳನ್ನಾಡಿದರು.

ಸಮಾರಂಭದಲ್ಲಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರುಗಳಾದ ಮಾರುತಿ, ಗಣಪತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಡಾ. ಯಲ್ಲಮ್ಮ, ಶಬನಾ ಅಂಜುಮ್, ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ವರ್ಗೀಸ್, ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷರಾದ ನಿರುಪಮಾ ಪ್ರಸಾದ್ ಶೆಟ್ಟಿ, ಹೈಸ್ಕೂಲ್ ವಿಭಾಗದ ಮುಖ್ಯೋಪಾಧ್ಯಾಯರಾದ ಇಂದಿರಾ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯರಾದ ಸುಮಾ ಎಸ್. ಸ್ವಾಗತಿಸಿದರು. ಉಪನ್ಯಾಸಕರಾದ ದಯಾನಂದ ಡಿ. ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!