Saturday, October 26, 2024
Saturday, October 26, 2024

ಎಂ.ಜಿ.ಎಂ ಕಾಲೇಜು: ವಾರ್ಷಿಕೇೂತ್ಸವ; ಸಂಸ್ಥಾಪಕರ ದಿನಾಚರಣೆ

ಎಂ.ಜಿ.ಎಂ ಕಾಲೇಜು: ವಾರ್ಷಿಕೇೂತ್ಸವ; ಸಂಸ್ಥಾಪಕರ ದಿನಾಚರಣೆ

Date:

ಉಡುಪಿ, ಮೇ 28: ಶಿಕ್ಷಣ ಅಂದರೆ ಬರೇ ಅಂಕಗಳಿಗೆ ಮಾತ್ರವಲ್ಲ ಇದರ ಜೊತೆಗೆ ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವ ಇಚ್ಛಾ ಶಕ್ತಿ, ಕೌಶಲಾಶಕ್ತಿ, ಜ್ಞಾನ ಶಕ್ತಿ ವಿದ್ಯಾರ್ಥಿಗಳಲ್ಲಿ ಮೂಡಿಸುವುದೆ ನಿಜವಾದ ಶಿಕ್ಷಣ. ಇಂತಹ ಪರಿಪೂರ್ಣ ವ್ಯಕ್ತಿತ್ವದ ಬೆಳವಣಿಗೆಗೆ ಪೂರಕವಾದ ಶಿಕ್ಷಣ ನೀಡುವಲ್ಲಿ ಉಡುಪಿ ಎಂಜಿಎಂ ಕಾಲೇಜು ಮುಂಚೂಣಿಯಲ್ಲಿ ನಿಂತಿದೆ ಎಂದು ಬ್ರಹ್ಮಾವರ ಜಿ.ಎಂ.ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಎಂಜಿಎಂ ಕಾಲೇಜಿನ ಎಪ್ಪತ್ತೈದರ ವಾರ್ಷಿಕೋತ್ಸವ ಮತ್ತು ಸಂಸ್ಥಾಪಕರ ದಿನಾಚರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ ತನ್ನ ವಿದ್ಯಾರ್ಥಿಜೀವನವನ್ನು ನೆನಪಿಸಿಕೊಂಡರು. ಇಂಗ್ಲಿಷ್, ಕನ್ನಡ ಮಾಧ್ಯಮ ಅನ್ನುವ ಭಾಷಾ ಕೀಳರಿಮೆ ಬೇಡ. ಎರಡು ಭಾಷೆಗಳಲ್ಲಿ ಸುಲಲಿತವಾಗಿ ಮಾತನಾಡಬಲ್ಲ ಸಾಮರ್ಥ್ಯ ಇಂದಿನ ನಮ್ಮ ವಿದ್ಯಾರ್ಥಿಗಳಲ್ಲಿ ಇದೆ ಎಂದು ಅವರು ಹೇಳಿದರು. ಸಭಾಧ್ಯಕ್ಷತೆಯನ್ನು ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ.ಎಚ್.ಎಸ್.ಬಲ್ಲಾಳ್ ವಹಿಸಿ ಕಾಲೇಜಿನ ಸಂಸ್ಥಾಪಕರಾದ ದಿ. ಡಾ.ಟಿ.ಎಂ.ಪೈ ಅವರ ದೂರದರ್ಶಿತ್ವ ಮತ್ತು ಪರಿಶ್ರಮದ ಫಲವಾಗಿ ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜು ಉಡುಪಿ ಪರಿಸರದಲ್ಲಿ ಪ್ರಪ್ರಥಮವಾಗಿ ಸ್ಥಾಪನೆಯಾಗಲು ಸಾಧ್ಯವಾಯಿತು. ದಿ.ಡಾ.ಟಿ.ಎಂ.ಎ.ಪೈ ಅವರ ಬದುಕು, ಸಾಧನೆ, ಚಿಂತನೆ ನಮಗೆಲ್ಲರಿಗೂ ಆದರ್ಶಪ್ರಾಯ ಎಂದರು.

ಕಾಲೇಜಿನ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷೀನಾರಾಯಣ ಕಾರಂತ ವಾರ್ಷಿಕ ವರದಿ ವಾಚಿಸಿದರು. ಅತಿಥಿಗಳಾಗಿ ಪದವಿಪೂರ್ವ ವಿಭಾಗದ ಪ್ರಾಂಶುಪಾಲೆ ಮಾಲತಿದೇವಿ, ಕಾಲೇಜಿನ ಟಿ.ಮೇೂಹನದಾಸ ಪೈ ಸ್ಮಾರಕ ಕೌಶಲ್ಯಾಭಿವೃದ್ದಿ ಕೇಂದ್ರದ ನಿರ್ದೇಶಕ ಟಿ.ರಂಗ ಪೈ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ತ್ರಿಪತಿ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಅರುಣಕುಮಾರ್ ಬಿ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕಿ ಪ್ರೊ. ಮಮತ ಡಾ.ಟಿ.ಎಂ.ಎ.ಪೈ ಸಂಸ್ಮರಣಾ ಉಪನ್ಯಾಸ ನೀಡಿದರು. ಈ ಶೈಕ್ಷಣಿಕ ವರ್ಷದಲ್ಲಿ ವಿ.ವಿ.ಮಟ್ಟದಲ್ಲಿ ರೇಂಕ್ ವಿಜೇತರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಗಣಕವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಎಂ.ವಿಶ್ವನಾಥ ಪೈ ವಂದಿಸಿದರು. ವಿದ್ಯಾರ್ಥಿನಿ ದೀಪ್ತಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂದಿನ (25-10-2024) ಚಿನ್ನದ ದರ

Gold 22 CT- Rs. 7295 Gold 24 CT- Rs. 7808 Silver-...

ರಕ್ತದಾನ ಶ್ರೇಷ್ಠದಾನ: ಡಾ. ಗಣನಾಥ ಎಕ್ಕಾರು

ಉಡುಪಿ, ಅ.25: ಯಾವುದೇ ದಾನಕ್ಕಿಂತಲೂ ರಕ್ತದಾನ ಶ್ರೇಷ್ಠದಾನವಾಗಿದ್ದು, ಅಪಾಯದಲ್ಲಿರುವವರ ಅಮೂಲ್ಯ ಜೀವವನ್ನು...

ತ್ಯಾಜ್ಯ ನಿರ್ವಹಣೆಯಲ್ಲಿ ನಗರಸಭೆಯೊಂದಿಗೆ ಸಹಕರಿಸಿ

ಉಡುಪಿ, ಅ.25: ಉಡುಪಿ ನಗರಸಭೆಯು ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿವಿಧ...

ಕಟ್ಟಡಗಳ ಭಗ್ನ ಅವಶೇಷಗಳನ್ನು ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡಲು ಸೂಚನೆ

ಉಡುಪಿ, ಅ.25: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಕಟ್ಟಡಗಳ ಭಗ್ನ ಅವಶೇಷಗಳನ್ನು ಎಲ್ಲೆಂದರಲ್ಲಿ...
error: Content is protected !!