Saturday, October 26, 2024
Saturday, October 26, 2024

ಮೂರ್ತೆದಾರರ ಸಹಕಾರಿ ಸಂಘ ಮಹಾಸಭೆ

ಮೂರ್ತೆದಾರರ ಸಹಕಾರಿ ಸಂಘ ಮಹಾಸಭೆ

Date:

ಕೋಟ, ಮೇ 30: ಮೂರ್ತೆದಾರರ ಸಹಕಾರಿ ಸಂಘವು 2023-24ನೇ ಸಾಲಿನಲ್ಲಿ 302 ಕೋಟಿ ರೂ. ವ್ಯವಹಾರ ನಡೆಸಿ ರೂ. 1.06 ಕೋಟಿ ನಿವ್ವಳ ಲಾಭ ಗಳಿಸಿದ್ದು, ಶೇ. 12 ಡಿವಿಡೆಂಡ್‌ನ್ನು ಸಂಘದ ಕೋಟದ ಪ್ರಧಾನ ಕಛೇರಿಯ ಸಭಾಂಗಣದಲ್ಲಿ ಜರುಗಿದ ಸಂಘದ 33ನೇ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಕೆ. ಕೊರಗ ಪೂಜಾರಿ ಘೋಷಿಸಿದರು. ಸಂಘವು ಕೋಟ, ಬಾರ್ಕೂರು, ಸಾಸ್ತಾನ, ಕೊಕ್ಕರ್ಣೆ, ಉಡುಪಿ-ಪುತ್ತೂರು, ಹೂಡೆ ಸೇರಿದಂತೆ ಸಂಘದ ಕಾರ್ಯವ್ಯಾಪ್ತಿಯಲ್ಲಿ 6 ಬ್ಯಾಂಕಿಂಗ್ ಶಾಖೆಗಳನ್ನು ಹೊಂದಿದ್ದು, ಶೀಘ್ರ ಬ್ಯಾಂಕಿಂಗ್ ಸೇವೆ ನೀಡುತ್ತಿದೆ. ಸಂಘವು 13124 ಸದಸ್ಯರ ಬಲ ಹೊಂದಿದ್ದು ರೂ. 1.35 ಕೋಟಿ ಪಾಲು ಬಂಡವಾಳ, 71.32 ಕೋಟಿ ರೂ. ಠೇವಣಿ, 54.04 ಕೋಟಿ ರೂ. ಹೊರಬಾಕಿ ಸಾಲ ಇದ್ದು, ಸಂಘದಿಂದ ರೂ. 27.06 ಕೋಟಿ ವಿವಿಧ ಸಹಕಾರಿ ಸಂಘ ಹಾಗೂ ಬ್ಯಾಂಕ್‌ನಲ್ಲಿ ವಿನಿಯೋಗಿಸಿದೆ. ಹಾಗೂ ವಿವಿಧ ನಿಧಿಗಳು ರೂ. 10.09 ಕೋಟಿ ಆಗಿರುತ್ತದೆ. ಸಂಘದ ದುಡಿಯುವ ಬಂಡವಾಳ 83.29 ಕೋಟಿಗೂ ಮೀರಿದೆ. ಸತತ 28 ವರ್ಷಗಳಿಂದ ‘ಎ’ ತರಗತಿ ಆಡಿಟ್ ವರ್ಗೀಕರಣ ಪಡೆದಿರುತ್ತದೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರಲ್ಲದೆ.ಸಂಘದಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಸೇಫ್ ಲಾಕರ್, ಆರ್.ಟಿ.ಜಿ.ಎಸ್, ನೆಫ್ಟ್, ಇ-ಸ್ಟಾಂಪಿಂಗ್ ಸೌಲಭ್ಯ ಹಾಗೂ ಆರ್.ಟಿ.ಸಿ ವಿತರಿಸಲಾಗುತ್ತಿದೆ. ಸಂಘವು ಕೋಟದಲ್ಲಿ ಸ್ವಂತ ಸುಸಜ್ಜಿತ ಕೇಂದ್ರ ಕಛೇರಿ ಹಾಗೂ ವಾಣಿಜ್ಯ ಸಂಕೀರ್ಣ ಹೊಂದಿದ್ದು, ಸಂಘದ ಸಾಸ್ತಾನ ಶಾಖೆ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಘವು ಮಹಿಳಾ ಸಶಕ್ತೀಕರಣಕ್ಕಾಗಿ 277 ಕಲ್ಪತರು ಮಹಿಳಾ ಸ್ವಸಹಾಯ ಗುಂಪುಗಳನ್ನು ಪ್ರಾಯೋಜಿಸಿದ್ದು ರೂ. 6.38 ಕೋಟಿ ಸಾಲ ಸೌಲಭ್ಯ ಒದಗಿಸಿದೆ ಎಂದರು.

ವಾರ್ಷಿಕ ಮಹಾಸಭೆಯಲ್ಲಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕೆಮ್ಮಣ್ಣು ಮಾಹಿತಿ ನೀಡಿ ಸಂಘ ಕೇಂದ್ರ ಕಛೇರಿ ಕೋಟದಲ್ಲಿ ರೂ. 1 ಕೋಟಿ ವೆಚ್ಚದಲ್ಲಿ ಸಂಪೂರ್ಣ ಹವಾನಿಯಂತ್ರಿತ ಸಭಾಭವನ ನಿರ್ಮಿಸಿದ್ದು ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ಶಿಫಾರಸ್ಸಿನಂತೆ ರೂ. 50 ಲಕ್ಷ ಅನುದಾನ ದೊರೆತಿದ್ದು ಸಭಾಭವನ ನಿರ್ಮಾಣ ಪೂರ್ಣಗೊಂಡ ಮಾಹಿತಿ ನೀಡಿದರು. ಸಂಘವು ರೂ. 8.50 ಕೋಟಿ ಸ್ಥಿರಾಸ್ತಿ ಮತ್ತು ಕಟ್ಟಡ, ರೂ. 5.10 ಕೋಟಿ ಚರಾಸ್ತಿ ಹೊಂದಿದ್ದು ಕೋಟದಲ್ಲಿ ಕೇಂದ್ರ ಕಛೇರಿಯ ಸ್ವಂತ ಕಟ್ಟಡ ರೂ. 4.00 ಕೋಟಿ ವೆಚ್ಚದಲ್ಲಿ ವಿಸ್ತರಣೆಗೊಂಡಿದ್ದು, ತಳಅಂತಸ್ತಿನ ಪಾರ್ಕಿಂಗ್, ವಾಣಿಜ್ಯ ಸಂಕೀರ್ಣ ಸದ್ಯದಲ್ಲಿ ಉದ್ಘಾಟನೆಗೊಳ್ಳಲಿದೆ. ಸಂಘದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ, ಸದಸ್ಯರ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ, ಉನ್ನತ ವ್ಯಾಸಂಗ ನಿಧಿಯಿಂದ ಧನ ಸಹಾಯ, ಸಂಘದ ಸದಸ್ಯರಿಗೆ ಸಾಮೂಹಿಕ ವಿಮೆ, ಮರಣ ನಿಧಿ, ಸದಸ್ಯರ ಸಹಾಯಕ ನಿಧಿ ಮೂಲಕ ಅನಾರೋಗ್ಯಕ್ಕೆ ಒಳಗಾದ ಸದಸ್ಯರಿಗೆ ಸಹಾಯಹಸ್ತ, ಸದಸ್ಯರ ಕ್ಷೇಮಾಭಿವೃದ್ಧಿ ನಿಧಿಯಿಂದ ರೂ. 1 ಲಕ್ಷ ವೈಯಕ್ತಿಕ ಸಾಲ ಹಾಗೂ ಸ್ವಸಹಾಯ ಗುಂಪಿನ ಸಾಲ ಪಡೆದ ಸದಸ್ಯರು ಮೃತರಾದಲ್ಲಿ ಬಾಕಿ ಸಾಲದ ಮೊತ್ತದ ಶೇಕಡಾ 25 ರಷ್ಟನ್ನು ಕ್ಷೇಮಾಭಿವೃದ್ಧಿ ನಿಧಿಯಿಂದ ಭರಿಸಲಾಗುತ್ತಿದೆ ಎಂದು ವಾರ್ಷಿಕ ಮಹಾಸಭೆಯ ವರದಿಯಲ್ಲಿ ಜಗದೀಶ್ ಕೆಮ್ಮಣ್ಣು ತಿಳಿಸಿದರು.

ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷ ಜಯರಾಮ ಪೂಜಾರಿ ಬಾರ್ಕೂರು, ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ, ಪಿ.ಕೃಷ್ಣ ಪೂಜಾರಿ ಪಾರಂಪಳ್ಳಿ, ನಿರ್ದೇಶಕರಾದ ಜಿ. ಸಂಜೀವ ಪೂಜಾರಿ ಕೋಡಿ, ರಾಮ ಪೂಜಾರಿ, ಮಂಜುನಾಥ ಪೂಜಾರಿ ಬಾರ್ಕೂರು, ಕೃಷ್ಣ ಪೂಜಾರಿ ಪಿ ಕೋಡಿ ಕನ್ಯಾಣ, ಪ್ರಭಾವತಿ ಡಿ. ಬಿಲ್ಲವ ಕೋಟ, ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಕೃಷ್ಣ, ಭಾರತಿ ಎಸ್. ಪೂಜಾರಿ ಕರಿಕಲ್ ಕಟ್ಟೆ, ಉಪಸ್ಥಿತರಿದ್ದರು. ಸಂಘದ ಬಾರ್ಕೂರು ಶಾಖಾ ವ್ಯವಸ್ಥಾಪಕಿ ಶ್ರೀದೇವಿ ಕಲ್ಕೂರ ಪ್ರಾರ್ಥಿಸಿದರು. ಕೋಟ ಶಾಖೆಯ ವ್ಯವಸ್ಥಾಪಕ ದಿನೇಶ್ ಪೂಜಾರಿ ಬಾರ್ಕೂರು ಸ್ವಾಗತಿಸಿ, ಲೋಹಿತ್ ಜಿ. ಬಿ ವಂದಿಸಿದರು. ಶಾಖಾ ವ್ಯವಸ್ಥಾಪಕರುಗಳಾದ ಉದಯ ಪೂಜಾರಿ ಕೋಡಿ, ರಮೇಶ್ ಪೂಜಾರಿ ಬಾರ್ಕೂರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂದಿನ (25-10-2024) ಚಿನ್ನದ ದರ

Gold 22 CT- Rs. 7295 Gold 24 CT- Rs. 7808 Silver-...

ರಕ್ತದಾನ ಶ್ರೇಷ್ಠದಾನ: ಡಾ. ಗಣನಾಥ ಎಕ್ಕಾರು

ಉಡುಪಿ, ಅ.25: ಯಾವುದೇ ದಾನಕ್ಕಿಂತಲೂ ರಕ್ತದಾನ ಶ್ರೇಷ್ಠದಾನವಾಗಿದ್ದು, ಅಪಾಯದಲ್ಲಿರುವವರ ಅಮೂಲ್ಯ ಜೀವವನ್ನು...

ತ್ಯಾಜ್ಯ ನಿರ್ವಹಣೆಯಲ್ಲಿ ನಗರಸಭೆಯೊಂದಿಗೆ ಸಹಕರಿಸಿ

ಉಡುಪಿ, ಅ.25: ಉಡುಪಿ ನಗರಸಭೆಯು ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ವಿವಿಧ...

ಕಟ್ಟಡಗಳ ಭಗ್ನ ಅವಶೇಷಗಳನ್ನು ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡಲು ಸೂಚನೆ

ಉಡುಪಿ, ಅ.25: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಕಟ್ಟಡಗಳ ಭಗ್ನ ಅವಶೇಷಗಳನ್ನು ಎಲ್ಲೆಂದರಲ್ಲಿ...
error: Content is protected !!