Sunday, September 29, 2024
Sunday, September 29, 2024

ಕೆ.ಎಂ.ಸಿ ಮಣಿಪಾಲ: ವಿಶ್ವ ರಕ್ತದಾನಿಗಳ ದಿನ

ಕೆ.ಎಂ.ಸಿ ಮಣಿಪಾಲ: ವಿಶ್ವ ರಕ್ತದಾನಿಗಳ ದಿನ

Date:

ಮಣಿಪಾಲ, ಜೂ.14: ಸುರಕ್ಷಿತ ರಕ್ತ ಮತ್ತು ರಕ್ತ ವರ್ಗಾವಣೆಗಾಗಿ ಉತ್ಪನ್ನಗಳ ಅಗತ್ಯದ ಬಗ್ಗೆ ಜಾಗೃತಿ ಮೂಡಿಸಲು ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ರಕ್ತ ಸಂಬಂಧಿತ ಉತ್ಪನ್ನಗಳು ಜಗತ್ತಿನಾದ್ಯಂತ ಸಾರ್ವಜನಿಕ ಆರೋಗ್ಯಕ್ಕೆ ನಿರ್ಣಾಯಕವಾಗಿವೆ. ಈ ದಿನವು ಸ್ವಯಂಸೇವಕರು ಮತ್ತು ರಕ್ತದಾನಿಗಳಿಗೆ ಅವರ ಕೊಡುಗೆಗಳಿಗಾಗಿ ಧನ್ಯವಾದ ಹೇಳುವ ಅವಕಾಶವನ್ನು ಸೂಚಿಸುತ್ತದೆ. ರಶ್ಮಿ ಎಸ್‌ಆರ್ ಕೆಎಎಸ್, ಸಹಾಯಕ ಆಯುಕ್ತರು, ಕುಂದಾಪುರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೆಎಂಸಿ ಮಣಿಪಾಲದ ಡೀನ್ ಡಾ ಪದ್ಮರಾಜ್ ಹೆಗ್ಡೆ, ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಯ ಸಿಒಒ ಡಾ ಆನಂದ್ ವೇಣುಗೋಪಾಲ್ ಕಾರ್ಯಕ್ರಮದ ಗೌರವ ಅತಿಥಿಗಳಾಗಿದ್ದರು. ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ರಕ್ತ ಕೇಂದ್ರದ ಮುಖ್ಯಸ್ಥ ಡಾ.ಶಮೀ ಶಾಸ್ತ್ರಿ, ರಕ್ತ ಕೇಂದ್ರದ ಸಹ ಪ್ರಾಧ್ಯಾಪಕ ಡಾ.ಗಣೇಶ್ ಮೋಹನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಶ್ಮಿ ಎಸ್.ಆರ್. ಮಾತನಾಡಿ, ಒಂದು ಯುನಿಟ್ ರಕ್ತವು 3 ಜೀವಗಳನ್ನು ಉಳಿಸುತ್ತದೆ. ಭಾರತದಲ್ಲಿ ಯಾವಾಗಲೂ 1 ಮಿಲಿಯನ್ ಯುನಿಟ್ ರಕ್ತದ ಕೊರತೆಯಿದೆ. ರಕ್ತಕ್ಕೆ ಜಾತಿ, ಧರ್ಮ ಅಂತ ಇಲ್ಲ ಮತ್ತು ರಕ್ತಕ್ಕೆ ಪರ್ಯಾಯ ವ್ಯವಸ್ಥೆ ಇಲ್ಲ. ಅದನ್ನು ದಾನದ ಮೂಲಕವೇ ಅವಶ್ಯವಿದ್ದವರಿಗೆ ಪೂರೈಸಬೇಕಾಗಿದೆ. ಆದ್ದರಿಂದ ಎಲ್ಲಾ ಅರ್ಹ ದಾನಿಗಳು ರಕ್ತ ದಾನ ಮಾಡುವುದರ ಮೂಲಕ ಇತರರ ಜೀವ ಉಳಿಸಲು ಸಹಕರಿಸಬೇಕು ಎಂದು ಹೇಳಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಡಾ. ಪದ್ಮರಾಜ್ ಹೆಗ್ಡೆ ಪ್ರತೀ ಎರಡು ಸೆಕೆಂಡ್ಸ್ ಗೆ ಒಬ್ಬರಿಗೆ ರಕ್ತದ ಅವಶ್ಯಕತೆ ಇದೆ. ಒಬ್ಬ ಆರೋಗ್ಯವಂತ 18ನೇ ವರ್ಷಕ್ಕೆ ರಕ್ತ ದಾನ ಮಾಡಲು ಆರಂಭಿಸಿ ವರ್ಷಕ್ಕೆ 3 ಬಾರಿ ದಾನ ಮಾಡಿದರೆ, ಅವನಿಗೆ 60 ವರ್ಷ ಆಗುವಾಗ 30 ಗ್ಯಾಲನ್ ನಷ್ಟು ರಕ್ತ ದಾನ ಮಾಡಿರುತ್ತಾರೆ. ಇದರಿಂದ ಕಡಿಮೆ ಪಕ್ಷ 500 ಜನರ ಜೀವ ಉಳಿಸಬಹುದು. ಆದ್ದರಿಂದ ತಾವೂ ರಕ್ತ ದಾನ ಮಾಡುವುದರೊಂದಿಗೆ ಇತರರಿಗೂ ದಾನ ಮಾಡುವಂತೆ ಪ್ರೇರೇಪಿಸಬೇಕು ಎಂದರು.

ರಕ್ತದಾನಿಗಳ ಪ್ರೇರಕರನ್ನು, ಕಸ್ತೂರ್ಬಾ ಆಸ್ಪತ್ರೆ ರಕ್ತ ಕೇಂದ್ರದ ಅತ್ಯುತ್ತಮ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು . ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆ ಹಾಗೂ ಕೆಎಂಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸ್ಲೋಗನ್ ಬರೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಡಾ ಅವಿನಾಶ್ ಶೆಟ್ಟಿ ಅವರು ಸಭೆಯನ್ನು ಸ್ವಾಗತಿಸಿ, ವಿಶ್ವ ರಕ್ತದಾನಿಗಳ ದಿನಾಚರಣೆಯ ಮಹತ್ವವನ್ನು ಒತ್ತಿ ಹೇಳಿದರು. ಡಾ.ಶಮೀ ಶಾಸ್ತ್ರಿ ಕಾರ್ಯಕ್ರಮದ ಅವಲೋಕನ ನೀಡಿದರು . ಡಾ.ಗಣೇಶ್ ಮೋಹನ್ ವಂದಿಸಿದರು. ವಿಶ್ವೇಶ ಎನ್ ಅವರು ರಕ್ತದಾನಿಗಳ ಪ್ರೇರಕರನ್ನು ಗೌರವಿಸಿದ ಪಟ್ಟಿಯನ್ನು ಓದಿದರು. ಡಾ. ಚೆನ್ನ ದೀಪಿಕಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...
error: Content is protected !!