Sunday, September 29, 2024
Sunday, September 29, 2024

ಬಿಲ್ವಪತ್ರ ಅಭಿಯಾನಕ್ಕೆ ಚಾಲನೆ

ಬಿಲ್ವಪತ್ರ ಅಭಿಯಾನಕ್ಕೆ ಚಾಲನೆ

Date:

ಕಟಪಾಡಿ, ಜೂ.14: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ದ್ವಾರಕಾಮಯಿ ಮಠ ಇದರ ಮುಖ್ಯಸ್ಥರಾದ ಶ್ರೀ ಸಾಯಿ ಈಶ್ವರ ಗುರೂಜಿಯವರ ಸಂಕಲ್ಪದಂತೆ 108 ದಿನಗಳಲ್ಲಿ 108 ದೇವಾಲಯಗಳಿಗೆ ಭೇಟಿ ನೀಡಿ ಬಿಲ್ವ ಪತ್ರ ಗಿಡ ನೆಡುವ ಅಭಿಯಾನಕ್ಕೆ ಶ್ರೀ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ದ್ವಾರಕಾಮಯಿ ಮಠ ಇದರ ಪೀಠಾಧೀಶರಾದ ಶ್ರೀ ಸಾಯಿ ಈಶ್ವರ ಗುರೂಜಿ 108 ದೇವಾಲಯಗಳಿಗೆ ಭೇಟಿ ನೀಡಿ ಅಲ್ಲಿ ಹಿಂದೂ ಧರ್ಮದ ರಕ್ಷಣೆ ಸೈನಿಕರಿಗೆ ಬೆಂಬಲ ಮತ್ತು ಮಹಿಳಾ ಜಾಗೃತಿಯ ಬಗ್ಗೆ ಜನ ಅಭಿಪ್ರಾಯ ಮೂಡಿಸಲಾಗುವುದು ಅಲ್ಲವೇ ಪ್ರತಿ ದೇವಸ್ಥಾನದಲ್ಲಿ ಬಿಲ್ವಪತ್ರೆ ಗಿಡವನ್ನು ನೆಡುವ ಕಾರ್ಯ ನಡೆಯಲಿರುವುದು ಎಂದು ತಿಳಿಸಿದರು

ಜಯಂಟ್ಸ್ ಗ್ರೂಪ್ ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂದನ್ ಹೇರೂರು ಮಾತನಾಡಿ, ಬಿಲ್ವಪತ್ರೆ ಗಿಡವು ಕೇವಲ ಧಾರ್ಮಿಕ ಅಲ್ಲದೆ ಆರೋಗ್ಯದ ದೃಷ್ಟಿಯಿಂದಲೂ ಕೂಡ ಬಹಳ ಉತ್ತಮವಾಗಿದೆ ಸಾಕಷ್ಟು ಗಿಡಗಳನ್ನು ಪ್ರಕೃತಿಗೆ ಸಂತಸ ತರುವ ಕಾರ್ಯ ನಾವೆಲ್ಲರೂ ಮಾಡಬೇಕು ಈ ನಿಟ್ಟಿನಲ್ಲಿ ಸಾಯಿ ಈಶ್ವರ ಗುರೂಜಿ ಈ ಕಲ್ಪನೆ ಉತ್ತಮವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬಿಲ್ವಪತ್ರೆ ಗಿಡಗಳನ್ನು ಹಸ್ತಾಂತರಿಸಯಿತು. ಮಾಜಿ ಜಿ.ಪಂ ಸದಸ್ಯೆ ಗೀತಾಂಜಲಿ ಸುವರ್ಣ, ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಅಧ್ಯಕ್ಷರಾದ ಸುಂದರ ಪೂಜಾರಿ ಮೂಡುಕುಕ್ಕುಡೆ, ಮಾಜಿ ಮಹಿಳಾ ಮೋಚಾ೯ ಅಧ್ಯಕ್ಷರಾದ ವೀಣಾ ಶೆಟ್ಟಿ, ವಾರಿಜಾ ಕಲ್ಮಾಡಿ ,ಸತೀಶ್ ಮುಂತಾದವರು ಉಪಸ್ಥಿತರಿದ್ದರು. ಗಿಡಗಳನ್ನು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಮತ್ತು ಸುವರ್ಣ ಎಂಟರ್ಪ್ರೈಸ್ ರವರ ವತಿಯಿಂದ ನೀಡಲಾಯಿತು. ರಾಘವೇಂದ್ರ ಕರ್ವಾಲು ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...
error: Content is protected !!