Sunday, September 29, 2024
Sunday, September 29, 2024

ಅಜ್ಜರಕಾಡು ಭುಜಂಗ ಪಾರ್ಕಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ

ಅಜ್ಜರಕಾಡು ಭುಜಂಗ ಪಾರ್ಕಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ

Date:

ಉಡುಪಿ, ಜೂ.17: ಉಡುಪಿ ನಗರಸಭೆಯ ಅಜ್ಜರಕಾಡು ವಾರ್ಡಿನ ಭುಜಂಗ ಪಾರ್ಕ್ ಅವ್ಯವಸ್ಥೆ ಹಾಗೂ ನಿರ್ವಹಣೆಯ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಹೃದಯ ಭಾಗದಲ್ಲಿರುವ ಏಕೈಕ ಪಾರ್ಕನ್ನು ಸಾರ್ವಜನಿಕರ ಉಪಯೋಗಕ್ಕೆ ಅನುಕೂಲವಾಗುವಂತೆ ಉತ್ತಮ ನಿರ್ವಹಣೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಮರ್ಪಕ ದಾರಿ ದೀಪ, ಪಾರ್ಕಿನ ಸ್ವಚ್ಛತೆ, ಪ್ರವಾಸೋದ್ಯಮ ಇಲಾಖೆ ಅನುದಾನದಿಂದ ಪ್ರಗತಿಯಲ್ಲಿರುವ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸಂಬಂಧಿಸಿದ ಅನುಷ್ಠಾನ ಸಂಸ್ಥೆಗೆ ನಿರ್ದೇಶನ ನೀಡಿದರು. ವಾಕಿಂಗ್ ಹಾಗೂ ವಾಯುವಿಹಾರಕ್ಕೆ ಆಗಮಿಸುವ ಸಾರ್ವಜನಿಕರಿಗೆ ಕುಡಿಯುವ ನೀರಿನ ಘಟಕ ಅಳವಡಿಕೆ ಹಾಗೂ ಪಾರ್ಕಿನ ರಂಗಮಂದಿರ ಹಾಗೂ ಮಕ್ಕಳ ಕ್ರೀಡಾ ಸಲಕರಣೆಗಳನ್ನು ಸಮರ್ಪಕ ನಿರ್ವಹಣೆಗೆ ಕ್ರಮ ವಹಿಸುವಂತೆ ಹೇಳಿದರು.

ಅಜ್ಜರಕಾಡು ವಾರ್ಡ್ ನಗರಸಭಾ ಸದಸ್ಯರಾದ ರಶ್ಮಿ ಸಿ. ಭಟ್, ನಗರಸಭೆಯ ಎ.ಇ.ಇ. ದುರ್ಗಾ ಪ್ರಸಾದ್, ಇಂಜಿನಿಯರ್ ಕಾರ್ತಿಕ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....
error: Content is protected !!