Sunday, September 29, 2024
Sunday, September 29, 2024

ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸ.ಪ್ರ.ದ.ಕಾಲೇಜು ಬಾರ್ಕೂರು: ಅಂತರ್ ಕಾಲೇಜು ಕ್ರಿಕೆಟ್ ಪಂದ್ಯಾಕೂಟ

ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸ.ಪ್ರ.ದ.ಕಾಲೇಜು ಬಾರ್ಕೂರು: ಅಂತರ್ ಕಾಲೇಜು ಕ್ರಿಕೆಟ್ ಪಂದ್ಯಾಕೂಟ

Date:

ಬಾರಕೂರು, ಜೂ.19: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾರ್ಕೂರು ವತಿಯಿಂದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದಲ್ಲಿ ಮೊದಲ ಬಾರಿಗೆ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳನ್ನು ಒಳಗೊಂಡ ವಿಭಿನ್ನ ರೀತಿಯ ಒಂದು ದಿನದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಕೂಟ ಜೂನ್ 16 ರಂದು ಕಾಲೇಜಿನ ಮೈದಾನದಲ್ಲಿ ನಡೆಯಿತು. ಉದ್ಯಮಿ ಗುರುಪ್ರಸಾದ್ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಮಾತನಾಡುತ್ತಾ, ಈ ರೀತಿಯ ವಿಭಿನ್ನ ಕ್ರೀಡಾಕೂಟವು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ನಡುವೆ ಆರೋಗ್ಯಕರ ಉತ್ತಮ ಬಾಂಧವ್ಯವನ್ನು ವೃದ್ಧಿಸುವಲ್ಲಿ ಸಹಕಾರಿಯಾಗುತ್ತದೆ ಎಂದರು.

ಸಂಯೋಜಕರಾದ ರಾಧಾಕೃಷ್ಣ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಆರೋಗ್ಯ ರಕ್ಷಣೆಯಲ್ಲಿ ಕ್ರೀಡೆಯ ಮಹತ್ವ ಮತ್ತು ಈ ಕ್ರೀಡಾಕೂಟದ ಉದ್ದೇಶದ ಬಗ್ಗೆ ಬೆಳಕು ಚೆಲ್ಲಿದರು. ಪ್ರಾಂಶುಪಾಲರಾದ ಡಾ. ರಮೇಶ್ ಆಚಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ, ವಿಭಿನ್ನ ಮಾದರಿಯ ಕ್ರಿಕೆಟ್ ಪಂದ್ಯವನ್ನು ಆಯೋಜನೆ ಮಾಡಿರುವುದು ಶ್ಲಾಘನೀಯ. ಇಂತಹ ಪಂದ್ಯಾಕೂಟಗಳು ಶೈಕ್ಷಣಿಕ ಸಂಸ್ಥೆಗಳ ನಡುವಿನ ಬಾಂಧವ್ಯವನ್ನು ವೃದ್ಧಿಸುವುದು ಮಾತ್ರವಲ್ಲದೇ ಸೌಹಾರ್ದಯುತ ವಾತಾವರಣ ನಿರ್ಮಿಸಲು ಮಹತ್ವದ ಪಾತ್ರ ವಹಿಸುತ್ತದೆ ಎಂದರು. ಡಾ. ಮಧು ಏನ್. ಎಂ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರಾದ ಆಶಿಶ್ ಶೆಟ್ಟಿ, ಗುಣಪ್ರಿಯ ಉಪಸ್ಥಿತರಿದ್ದರು.

 

ವಿವಿಧ ಕಾಲೇಜಿನ ಒಟ್ಟು ಎಂಟು ತಂಡಗಳು ಭಾಗವಹಿಸಿದ್ದು, ಪ್ರಥಮ ಬಹುಮಾನವನ್ನು ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಮತ್ತು ದ್ವಿತೀಯ ಬಹುಮಾನವನ್ನು ಎಸ್ಎಂಎಸ್ ಪ್ರಥಮ ದರ್ಜೆ ಕಾಲೇಜು ಬ್ರಹ್ಮಾವರ ಮುಡಿಗೇರಿಸಿಕೊಂಡರು. ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿಶ್ವ ಬೆಸ್ಟ್ ಬೌಲರ್ ಪ್ರಶಸ್ತಿಯನ್ನು ಪಡೆದರು. ಎಸ್ಎಂಎಸ್ ಕಾಲೇಜಿನ ಸೂರಜ್ ಬೇಲೂರು ಬೆಸ್ಟ್ ಬ್ಯಾಟ್ಸ್ ಮ್ಯಾನ್ ಮತ್ತು ಇಮ್ರಾನ್ ಪ್ಲೇಯರ್ ಆಫ್ ದ ಟೂರ್ನಮೆಂಟ್ ಪ್ರಶಸ್ತಿಯನ್ನು ಪಡೆದುಕೊಂಡರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...
error: Content is protected !!