Sunday, September 29, 2024
Sunday, September 29, 2024

ಪರಿಸರಕ್ಕೆ ಪೂರಕವಾದ ಕಾರ್ಯ ಮಾಡಬೇಕಾಗಿದೆ: ಡಾ. ವಿರೂಪಾಕ್ಷ ದೇವರಮನೆ

ಪರಿಸರಕ್ಕೆ ಪೂರಕವಾದ ಕಾರ್ಯ ಮಾಡಬೇಕಾಗಿದೆ: ಡಾ. ವಿರೂಪಾಕ್ಷ ದೇವರಮನೆ

Date:

ಬ್ರಹ್ಮಾವರ, ಜೂ.23: ಸಮಾಜದಲ್ಲಿ ನಾವೆಲ್ಲರೂ ಹೊಸ ಚಿಂತನೆಗಳನ್ನು ಬೆಳೆಸಿಕೊಂಡು ಪರಿಸರಕ್ಕೆ ಪೂರಕವಾದ ಕಾರ್ಯ ಮಾಡಬೇಕಾಗಿದೆ ಎಂದು ಡಾ. ಎ.ವಿ ಬಾಳಿಗಾ ಆಸ್ಪತ್ರೆಯ ಖ್ಯಾತ ಮನೋರೋಗ ತಜ್ಞರಾದ ಡಾ. ವಿರೂಪಾಕ್ಷ ದೇವರಮನೆ ಹೇಳಿದರು. ಅವರು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರದ ವತಿಯಿಂದ ಸಿಟಿ ಸೆಂಟರ್ ನಲ್ಲಿ ನಡೆದ ವಾರ್ಷಿಕ ಮಹಾಸಭೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಸೇವಾ ಕಾರ್ಯಗಳನ್ನು ಮಾಡಿದಾಗ ಮನಸ್ಸಿನ ಮೇಲೆ ಉತ್ತಮ ಪರಿಣಾಮ ಬೀರಿ ಮಾನಸಿಕ ಆರೋಗ್ಯ ಕೂಡ ಉತ್ತಮಗೊಳ್ಳುತ್ತದೆ ಎಂದರು. ಜಯಂಟ್ಸ್ ಫೆಡರೇಶನ್ 6 ರ ಅಧ್ಯಕ್ಷ ಎಲ್.ಬಿ ದೊಡ್ಡಮನಿ ಜಯಂಟ್ಸ್ ನ ಮುಂದಿನ ಕಾರ್ಯಕ್ರಮಗಳ ವಿವರ ನೀಡಿದರು.

ವೇದಿಕೆಯಲ್ಲಿ ಫೆಡರೇಶನ್ ಪೂರ್ವ ಅಧ್ಯಕ್ಷ ಮಧುಸೂಧನ್ ಹೇರೂರು, ಉಪಾಧ್ಯಕ್ಷ ತೇಜೇಶ್ವರ ರಾವ್, ಯೂನಿಟ್ ಡೈರೆಕ್ಟರ್ ವಿವೇಕಾನಂದ ಕಾಮತ್, ಮುಂತಾದವರು ಉಪಸ್ಥಿತರಿದ್ದರು. ಅದ್ಯಕ್ಷತೆಯನ್ನು ಜಯಂಟ್ಸ್ ಅದ್ಯಕ್ಷ ಸುಂದರ ಪೂಜಾರಿ ಮೂಡುಕುಕ್ಕುಡೆ ವಹಿಸಿದ್ದರು. ಖ್ಯಾತ ಮಿಯಾವಾಕಿ ತಜ್ಞ ಕೆ.ಮಹೇಶ್ ಶೆಣೈ, ಈಜುಪಟು ಲಿಮ್ಕಾ ದಾಖಲೆಗಾರ ರೋನಾನ್ ಲೂವಿಸ್ ರವರನ್ನು ಸನ್ಮಾನಿಸಲಾಯಿತು. ಇತ್ತೀಚೆಗೆ ನಿಧನರಾದ ಜಯಂಟ್ಸ್ ಉಡುಪಿ ಮಾಜಿ ಅಧ್ಯಕ್ಷ ಜಯರಾಂ ರಾವ್, ಡಾ. ಎ.ರಾಜಾ ರವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಡಾ. ಜೀವನ್ ಕೃಷ್ಣ ಯುಎಸ್ಐ ರವರ ಪ್ರಾಯೋಜಕತ್ವದಲ್ಲಿ ಅನಾಥಶ್ರಮಗಳಿಗೆ ಗಾಲಿಕುರ್ಚಿಗಳನ್ನು ಹಸ್ತಾಂತರಿಸಲಾಯಿತು. ಕಾರ್ಯದರ್ಶಿ ಮಿಲ್ಟನ್ ಒಲಿವರ್ ವರದಿ ವಾಚಿಸಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು. ಶ್ರೀನಾಥ ಕೋಟ, ರೊನಾಲ್ಡ್ ಸಹಕರಿಸಿದರು. ಎಜಿ ಸುವರ್ಣ ಮುಂಬಯಿ, ಡಾ.ಅಜಿತ್ ಕುಮಾರ್, ಡಾ. ವಿಶ್ವನಾಥ್, ಜಯಂಟ್ಸ್ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...
error: Content is protected !!