Sunday, September 29, 2024
Sunday, September 29, 2024

ಕೋಟ ಪಡುಕರೆ ಕಾಲೇಜು: ವಾರ್ಷಿಕೋತ್ಸವ ಸಂಭ್ರಮ

ಕೋಟ ಪಡುಕರೆ ಕಾಲೇಜು: ವಾರ್ಷಿಕೋತ್ಸವ ಸಂಭ್ರಮ

Date:

ಕೋಟ, ಜೂ.23: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಗೀತಾನಂದ ಫೌಂಡೇಶನ್‌ ಪ್ರವರ್ತಕರಾದ ಆನಂದ್‌ಸಿ ಕುಂದರ್‌ ಮಾತನಾಡಿ, ವಿದ್ಯಾರ್ಥಿಗಳು ತಾವು ಕಲಿತ ಜ್ಞಾನವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ, ಅನೇಕ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ ಹಾಗೂ ಪರಿಸರವನ್ನು ಪ್ರೀತಿಸಿ, ʼಹಸಿರೇ ಉಸಿರುʼ ಎಂಬ ತತ್ವವನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಪ್ರಧಾನ ಉಪನ್ಯಾಸವನ್ನು ನಿವೃತ್ತ ಇಂಗ್ಲೀಷ್‌ ಪ್ರಾಧ್ಯಾಪಕರು ಮತ್ತು ಲೇಖಕಿ ಡಾ. ಪಾರ್ವತಿ ಐತಾಳ್‌ ನೀಡಿದರು. ಪಠ್ಯ ಪುಸ್ತಕದಲ್ಲಿ ಪಡೆದ ಜ್ಞಾನದ ಕುರಿತು ಚಿಂತನೆ ಮಾಡುವುದು ಶಿಕ್ಷಣದ ಪ್ರಮುಖ ಉದ್ದೇಶವಾಗಿರಬೇಕು. ಅಂಕಗಳಿಗೆ ಮಹತ್ವ ಕೊಡುತ್ತಿರುವ ಈ ಸಮಾಜದಲ್ಲಿ ಜ್ಞಾನ, ಮೌಲ್ಯಗಳಿಗೆ ಪ್ರಾಮುಖ್ಯತೆ ಕೊಡುವ ಶಿಕ್ಷಣದ ಅವಶ್ಯಕತೆಯಿದೆ ಎಂದು ತಿಳಿಸಿದರು.

ಪ್ರಾಂಶುಪಾಲರಾದ ಡಾ ಸುನೀತ ವಿ ಕಾಲೇಜಿನ ವಾರ್ಷಿಕ ವರದಿಯನ್ನು 2023-24ರಲ್ಲಾದ ಶೈಕ್ಷಣಿಕ ಪ್ರಗತಿ ಮತ್ತು ಪಠ್ಯ-ಪಠ್ಯೇತರ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ 2022-23ರಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ 44 ವಿದ್ಯಾರ್ಥಿಗಳಿಗೆ ಮತ್ತು ಪ್ರಸ್ತುತ ತರಗತಿಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಹಾಗೂ ವಿಷಯವಾರು 100ರಲ್ಲಿ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್‌ ವತಿಯಿಂದ ನಗದು ಬಹುಮಾನವನ್ನು ನೀಡಲಾಯಿತು. ಸಾಂಸ್ಕ್ರತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶಂಕರ ನಾಯ್ಕ ಬಿ ಸ್ವಾಗತಿಸಿ, ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ. ಮನೋಜ್‌ ಕುಮಾರ್‌ಎಂ ವಂದಿಸಿದರು. ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾಜಣ್ಣ ಎಂ ನಿರೂಪಿಸಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸುರೇಶ್‌ ಪೂಜಾರಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಫಾತಿಮಾ, ಸಿಂಚನಾ, ದೀಕ್ಷಿತಾ, ಮೇಘನಾ ಮತ್ತು ಸುದೀಪ್‌, ಕಾಲೇಜಿನ ಬೋಧಕ-ಬೋಧಕೇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....
error: Content is protected !!