Sunday, September 29, 2024
Sunday, September 29, 2024

ಕನ್ನಡ ಜಾನಪದ ಪರಿಷತ್: ಪದಪ್ರದಾನ ಸಮಾರಂಭ

ಕನ್ನಡ ಜಾನಪದ ಪರಿಷತ್: ಪದಪ್ರದಾನ ಸಮಾರಂಭ

Date:

ಉಡುಪಿ, ಜೂ. 24: ಕನ್ನಡ ಜಾನಪದ ಪರಿಷತ್ ಬೆಂಗಳೂರು, ಉಡುಪಿ ಜಿಲ್ಲಾ ಘಟಕ ಇವರ ಉಡುಪಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ಶಾಂತಿನಗರ ಮಣಿಪಾಲ ಸಾರ್ವಜನಿಕ ಗಣೇಶ ಸಮಿತಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಜಾನಪದ ಪರಿಷತ್ ಬೆಂಗಳೂರು ಇದರ ರಾಜ್ಯಾಧ್ಯಕ್ಷ ಡಾ. ಎಸ್ ಬಾಲಾಜಿ, ಜನಪದ ಸಾಹಿತ್ಯವು ಧರ್ಮಾತೀತವಾಗಿದೆ. ಜಾನಪದದಿಂದ ಹಲವಾರು ಸಂಸ್ಕೃತಿಯ ಪರಿಚಯ ನಮಗೆ ದೊರೆಯುತ್ತದೆ, ಈ ನಿಟ್ಟಿನಲ್ಲಿ ಜನಪದ ಸಾಹಿತ್ಯ ಮತ್ತು ಅದರ ದಾಖಲೀಕರಣ ಅಗತ್ಯವಾಗಿದೆ. ಜಾನಪದ ಪರಿಷತ್ ಮೂಲಕ ಮುಂದಿನ ದಿನಗಳಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾನಪದ ಪರಿಷತ್ ಜಿಲ್ಲಾ ಅಧ್ಯಕ್ಷ ಡಾ. ಗಣೇಶ್ ಗಂಗೊಳ್ಳಿ ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಮೂಡುಸಗ್ರಿಯ ಧರ್ಮದರ್ಶಿ ಭಾಸ್ಕರ್ ಗುಂಡಿಬೈಲು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಉಪೇಂದ್ರ ನಾಯಕ್, ಮಹಿಳಾ ಪ್ರತಿನಿಧಿ ಅಹಲ್ಯ ಹೆಗ್ಡೆ, ಮಹಾಮಾಯಿ ಭಜನಾ ಮಂಡಳಿಯ ಸಂಸ್ಥಾಪಕಿ ಮೋಹಿನಿ ಭಟ್, ಆಶ್ಲೇಷ ಹೋಟೆಲಿನ ಮಾಲಕರಾದ ಶ್ರುತಿ ಜಿ.ಶಣೈ, ಜಿಲ್ಲಾ ಘಟಕದ ಖಜಾಂಚಿ ಚಂದ್ರ ಹಂಗಾರಕಟ್ಟೆ ಮುಂತಾದವರು ಉಪಸ್ಥಿತರಿದ್ದರು. ಹಿರಿಯ ಜಾನಪದ ಕಲಾವಿದೆ ಸರಸ್ವತಿ ಪಿತ್ರೋಡಿಯವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ವತಿಯಿಂದ ರಾಜಾಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರನ್ನು ಗೌರವಿಸಲಾಯಿತು.

ನೂತನ ಅಧ್ಯಕ್ಷೆ ಮಾಯಾ ಕಾಮತ್ ಮತ್ತು ಅವರ ತಂಡಕ್ಕೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಪ್ರ.ಕಾರ್ಯದರ್ಶಿ ಕುಸುಮ ಕಾಮತ್ ವಂದಿಸಿದರು. ಜಿಲ್ಲಾ ಸಂ.ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು. ನಾಗರಾಜ್ ಆಚಾರ್ಯ, ಲಲಿತಾ ಮಲ್ಹೆ, ಸುಜಾತಾ ಪೂಜಾರಿ, ಪ್ರಭಾ ರಾವ್, ದೇವದಾಸ ಕಾಮತ್, ಮುಕ್ತ ಶ್ರೀನಿವಾಸ ಭಟ್, ಸವಿತಾ ಶೆಟ್ಟಿ, ಶಿವಪ್ರಸಾದ್, ಗಜೇಂದ್ರ ಶೇಟ್, ನಿತ್ಯಾನಂದ ನಾಯಕ್ ಮುಂತಾದವರು ಉಪಸ್ಥಿತರಿದ್ದರು. ನಂತರ ಭಜನಾ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....
error: Content is protected !!