Sunday, October 6, 2024
Sunday, October 6, 2024

ಸೊಳ್ಳೆ ವಂಶವೃದ್ಧಿಯಿಂದ ದೇಶದ ಆರ್ಥಿಕತೆಗೆ ತೊಂದರೆ: ದೇವಪ್ಪ ಪಟಗಾರ್

ಸೊಳ್ಳೆ ವಂಶವೃದ್ಧಿಯಿಂದ ದೇಶದ ಆರ್ಥಿಕತೆಗೆ ತೊಂದರೆ: ದೇವಪ್ಪ ಪಟಗಾರ್

Date:

ಕೋಟ, ಜೂ.27: ಮಳೆಗಾಲದಲ್ಲಿ ಸಾಮಾನ್ಯವಾಗಿ ಮೆದಳು ಜ್ವರ, ಆನೆಕಾಲು ರೋಗ, ಚಿಕನ್ ಗೂನ್ಯ, ಡೆಂಗ್ಯೂ, ಮಲೇರಿಯದಂತ ಐದು ಖಾಯಿಲೆಗಳು ಹೆಚ್ಚಾಗುತ್ತದೆ. ಇದಕ್ಕೆ ಕಾರಣ ಸೊಳ್ಳೆಗಳು. ಈ ಸೊಳ್ಳೆಗಳು ಹರಡುವ ರೋಗಗಳಿಂದ ನರಳುವವರ ಹಾಗು ಸಾಯುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಸೊಳ್ಳೆಗಳು ಹರಡುವ ರೋಗಗಳಿಂದ ದೇಶದ ಆರ್ಥಿಕ ಸ್ಥಿತಿಗೆ ತೊಂದರೆಯಾಗಲಿದೆ. ಮನೆಯ ಸುತ್ತ ನೀರು ನಿಲ್ಲದಂತೆ ತೆಂಗಿನ ಬೊಂಡ, ಪ್ಲಾಸ್ಟಿಕ್ ಲೋಟ ಹಾಗೂ ಬಾಟಲಿಗಳಲ್ಲಿ ಹಾಗೂ ಚರಂಡಿಯಲ್ಲಿ ನಿಂತ ನೀರಿನಿಂದ ಸೊಳ್ಳೆಗಳ ಸಂತತಿ ಹೆಚ್ಚುತ್ತದೆ. ಹಾಗಾಗಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಜ್ವರ ಬಂದ ಕೂಡಲೇ ಸ್ವಯಂ ಚಿಕಿತ್ಸೆ ಮಾಡದೇ, ವೈದ್ಯರಿಗೆ ತೋರಿಸಬೇಕು ಎಂದು ಕೋಟ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ದೇವಪ್ಪ ಪಟಗಾರ್ ಹೇಳಿದರು. ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯ ವಿಜ್ಞಾನ ಸಂಘದ ಮಳೆಗಾಲದಲ್ಲಿ ಬರುವ ಖಾಯಿಲೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಆರೋಗ್ಯ ಆಧಿಕಾರಿ ಹರಿಶ್ಚಂದ್ರ, ವಿಜ್ಞಾನ ಸಂಘದ ಸಂಚಾಲಕಿ ನಾಗರತ್ನ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ ನಾವಡ ಸ್ವಾಗತಿಸಿ, ಹಿರಿಯ ಶಿಕ್ಷಕ ವೆಂಕಟೇಶ ಉಡುಪ ವಂದಿಸಿದರು. ವಿಜ್ಞಾನ ಸಂಘದ ಕಾರ್ಯದರ್ಶಿ ನಿಶಾಂತ ಕಿಣಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!