Thursday, September 19, 2024
Thursday, September 19, 2024

ಬಾಲ್ಯ ವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯ್ದೆ ಮಾಹಿತಿ ಕಾರ್ಯಾಗಾರ

ಬಾಲ್ಯ ವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯ್ದೆ ಮಾಹಿತಿ ಕಾರ್ಯಾಗಾರ

Date:

ಮಂಗಳೂರು, ಜು. 16: ಮಕ್ಕಳ ಮೇಲೆ ಆಗುವ ಯಾವುದೇ ರೀತಿಯ ಲೈಂಗಿಕ‌ ದೌರ್ಜನ್ಯವು ಶಿಕ್ಷಾರ್ಹವಾಗಿದೆ. ಅಂತಹ ತಪ್ಪುಗಳು ಸಂಭವಿಸಿದೆ ಎಂದು ಗೊತ್ತಾದ ಕೂಡಲೇ ಮಕ್ಕಳು ತಮ್ಮ ಪೋಷಕರ ಗಮನಕ್ಕೆ ತಂದು ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಮಾಡಬಹುದಾಗಿದೆ ಎಂದು ದಕ್ಷಿಣ ಕನ್ನಡ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಪ್ರಧಾನ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಹಾಗೂ ಪ್ರಸಕ್ತ ಖಾಯಂ ಲೋಕ ಅದಾಲತ್ ಅಧ್ಯಕ್ಷ ಅಭಯ್ ಧನಪಾಲ್ ಚೌಗುಲೆ ತಿಳಿಸಿದರು.

ಅವರು ಮುಲ್ಕಿಯ ಕಿಲ್ಪಡಿಯ ಎಂ. ಸಿ. ಟಿ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಬಾಲ್ಯ ವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯ್ದೆ ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ಶಾಲೆಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದಕ್ಕಾಗಿಯೇ ಭಾರತ ಸರಕಾರವು 2012 ರಲ್ಲಿ ಪೋಕ್ಸೋ ಕಾಯ್ದೆ ಜಾರಿಗೆ ತಂದಿದೆ. ಈ ಮೂಲಕ ಅಪ್ರಾಪ್ತ ವಯಸ್ಕರ ಮೇಲೆ ಆಗುವ ಲೈಂಗಿಕ ದೌರ್ಜನ್ಯಕ್ಕೆ ತಪ್ಪಿತಸ್ಥರಿಗೆ ಗರಿಷ್ಠ ಶಿಕ್ಷೆ ವಿಧಿಸುವ ಅವಕಾಶವಿದೆ. ಮಕ್ಕಳು ಇಂತಹ ಕಾಯ್ದೆ ಬಗ್ಗೆ ಅರಿತು ತಮ್ಮ ಮೇಲಾಗುವ ದೌರ್ಜನ್ಯವನ್ನು ತಡೆಗಟ್ಟಿದರೆ ಇದರಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯವಿದೆ ಎಂದರು.

ಇನ್ನು ಬಾಲ್ಯವಿವಾಹ ಅನ್ನೋದು ಬಹುದೊಡ್ಡ ಸಾಮಾಜಿಕ ಪಿಡುಗು ಆಗಿದ್ದು, ಮಕ್ಕಳ ಭವಿಷ್ಯಕ್ಕೆ ಆತಂಕವಾಗಿದೆ. ಎಳೆಯ ಪ್ರಾಯದಲ್ಲಿಯೇ ಮಕ್ಕಳನ್ನು ಮದುವೆಗೆ ಒಪ್ಪಿಸುವುದು ಕೂಡಾ ಶಿಕ್ಷಾರ್ಹ ಅಪರಾಧ. ಇಂತಹ ಘಟನೆ ನಡೆಯುತ್ತಿದೆ ಎಂದು ಗೊತ್ತಾದ ಕೂಡಲೇ ಸಂಬಂಧಪಟ್ಟವರ ಗಮನಕ್ಕೆ ತಂದು ಇಂತಹ ಪಿಡುಗನ್ನು ಸಮಾಜದಿಂದ ನಿರ್ಮೂಲನೆ ಮಾಡಲು ಕೈ ಜೋಡಿಸಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ವಕೀಲ ಹಾಗೂ ಖಾಯಂ ಲೋಕ ಅದಾಲತ್ ಸದಸ್ಯರಾದ ಫಝಲ್ ರಹಿಮಾನ್, ಮಂಗಳೂರಿನ ವಕೀಲರದ ಮಹಮ್ಮದ್ ಅಸ್ಗರ್ ಮುಡಿಪು, ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಎಂ. ಬಿ ಖಾನ್, ಉಪಾಧ್ಯಕ್ಷರಾದ ಅಡ್ವೋಕೇಟ್ ಓಮರ್ ಫಾರೂಕ್ ಮುಲ್ಕಿ, ಸಂಚಾಲಕ ಹಾಜಿ ಎಚ್ ಅಬೂಬಕ್ಕರ್, ಕಾರ್ಯದರ್ಶಿ ಅಬುಸಲಿ ಹಾಜಿ, ಶಾಲಾ ಮುಖ್ಯ ಶಿಕ್ಷಕರಾದ ಹರೀಶ್ ಬಂಗೇರ ಉಪಸ್ಥಿತರಿದ್ದರು. ಕೃತಿಕಾ ಸ್ವಾಗತಿಸಿದರು, ಸನಾ ವಂದಿಸಿದರು. ಪ್ರಿಯಾಂಕ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!