Thursday, September 19, 2024
Thursday, September 19, 2024

ಆಜ್ರಿ ಗೋಪಾಲ್ ಗಾಣಿಗರಿಗೆ ಹಾರಾಡಿ ಮಹಾಬಲ ಗಾಣಿಗ ಯಕ್ಷಪ್ರಶಸ್ತಿ ಪ್ರದಾನ

ಆಜ್ರಿ ಗೋಪಾಲ್ ಗಾಣಿಗರಿಗೆ ಹಾರಾಡಿ ಮಹಾಬಲ ಗಾಣಿಗ ಯಕ್ಷಪ್ರಶಸ್ತಿ ಪ್ರದಾನ

Date:

ಕೋಟ, ಜು.‌16: ಗಾಣಿಗ ಯುವ ಸಂಘಟನೆ ಕೋಟ ಘಟಕ ಆಶ್ರಯದಲ್ಲಿ, ಗಾಣಿಗ ಮಹಿಳಾ ಸಂಘಟನೆ ಹಾಗೂ ಹಾರಾಡಿ ಮಹಾಬಲ ಗಾಣಿಗರ ಕುಟುಂಬ ಸಹಕಾರದೊಂದಿಗೆ 2024ನೇ ಸಾಲಿನ ದಿ. ಹಾರಾಡಿ ಮಹಾಬಲ ಗಾಣಿಗ ಸಂಸ್ಮರಣೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಯುವ ಸಂಗಮ ಸಾಲಿಗ್ರಾಮದ ಗಿರಿಜಾ ಕಲ್ಯಾಣ ಮಂಟಪದಲ್ಲಿ ಜರಗಿತು.

ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ಯಕ್ಷಗಾನ ಕ್ಷೇತ್ರಕ್ಕೆ ಗಾಣಿಗ ಸಮಾಜದ ಕೊಡುಗೆ ಅಪಾರವಾಗಿದೆ.
ಅದರಲ್ಲೂ ಹಾರಾಡಿ ಮನೆತನ ಯಕ್ಷಗಾನ ಕ್ಷೇತ್ರದಲ್ಲಿ ಚಿರಸ್ಥಾಯಿಯಾದ ಹೆಸರಾಗಿದೆ. ಹಾರಾಡಿ ದಿ.ಮಹಾಬಲ ಗಾಣಿಗರ ಸಂಸ್ಮರಣೆಗಾಗಿ ಸ್ಥಾಪಿಸಿರುವ ಈ ಪ್ರಶಸ್ತಿ ಗೌರವಯುತವಾಗಿದೆ ಎಂದರು. ಹಿರಿಯ ಯಕ್ಷಗಾನ ವಿದ್ವಾಂಸ ಗುಂಡ್ಮಿ ಸದಾನಂದ ಐತಾಳ ಮಾತನಾಡಿ, ಯಕ್ಷಗಾನ ಕ್ಷೇತ್ರದಲ್ಲಿ ಜೋಡೆ ಕೋರೆ ಮುಂಡಾಸು ಮಹಾಬಲ ಗಾಣಿಗರಿಗೇ ಮೀಸಲಾಗಿತ್ತು. ಅವರ ನಿಧನದ ಅನಂತರ ವೃತ್ತಿ ರಂಗದಲ್ಲಿ ಈ ವಿಶೇಷ ಸಂಪೂರ್ಣ ಮರೆಯಾಯಿತು. ಹಿರಿಯ ಕಲಾವಿದರನ್ನು ನೆನಪಿಸಿಕೊಳ್ಳುವ ಇಂತಹ ಕಾರ್ಯಕ್ರಮಗಳು ಶ್ಲಾಘನೀಯ ಎಂದರು. ಮಂದಾರ್ತಿ ಮೇಳದ ಎರಡನೇ ವೇಷಧಾರಿ, ಹಿರಿಯ ಕಲಾವಿದ ಆಜ್ರಿ ಗೋಪಾಲ ಗಾಣಿಗರಿಗೆ ಹಾರಾಡಿ ಮಹಾಬಲ ಗಾಣಿಗ ಸಂಸ್ಮರಣೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗಾಣಿಗ ಯುವ ಸಂಘಟನೆ ಕೋಟ ಘಟಕದ ಅಧ್ಯಕ್ಷ ಗಿರೀಶ್ ಗಾಣಿಗ ಬೆಟ್ಲಕ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕರಾದ ಚಂದ್ರಶೇಖರ್ ಗಾಣಿಗ ಹಂದಟ್ಟು, ಸಾಸ್ತಾನ ಸಹಕಾರಿ ಸಂಘದ ನಿರ್ದೇಶಕ ಆನಂದ ಗಾಣಿಗ ಮಾಬುಕಳ ಹಾಗೂ ಗಾಣಿಗ ಸಮಾಜದಲ್ಲಿ ಎಸೆಸೆಲ್ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಮ್ಮಾನ, ದಿ.ವಸಂತಿ ಹಾಗೂ ದಿ. ಸುಬ್ಬ ಗಾಣಿಗ ಐರೋಡಿ ಸ್ಮರಣಾರ್ಥ ಸಂತೋಷ್ ಕುಮಾರ್ ಮತ್ತು ಶೇವಾದಿ ಸುರೇಶ್ ಗಾಣಿಗ ಕೊಡಮಾಡಿದ ಶೈಕ್ಷಣಿಕ ಪರಿಕರಗಳ ವಿತರಣೆ ನಡೆಯಿತು.

ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಅಧ್ಯಕ್ಷ ಸೂರ್ಯನಾರಾಯಣ ಗಾಣಿಗ ಮಟಪಾಡಿ, ಉಪಾಧ್ಯಕ್ಷ ಉದಯ ಕುಮಾರ್ ಕೆ., ಸುರೇಶ್ ಗಾಣಿಗ, ಉದ್ಯಮಿ ನಿತೀನ್ ನಾರಾಯಣ, ಜಿಲ್ಲಾ ಯುವ ಸಂಘಟನೆ ಅಧ್ಯಕ್ಷ ದಿನೇಶ್ ಗಾಣಿಗ ಕೋಟ, ಕೋಟ ಘಟಕದ ಗೌರವಾಧ್ಯಕ್ಷ ಪ್ರಶಾಂತ್ ಗಾಣಿಗ ಕಾರ್ಕಡ, ಮಹಿಳಾ ಸಂಘಟನೆ ಅಧ್ಯಕ್ಷೆ ರೇಖಾ ಗಣೇಶ್, ಮಹಾಬಲ ಗಾಣಿಗ ಮಕ್ಕಳಾದ ವಿಶ್ವನಾಥ ಕಾರ್ತಟ್ಟು, ಜನಾರ್ಧನ ಬ್ರಹ್ಮಾವರ, ವಸಂತಿರಾಜು
ಕಾರ್ತಟ್ಟು ಮತ್ತು ಕುಟುಂಬ ಸದಸ್ಯರು ಇದ್ದರು.

ಸಂಘಟನೆಯ ಕಾರ್ಯದರ್ಶಿ ಆರ್.ಕೆ. ಬ್ರಹ್ಮಾವರ ಸ್ವಾಗತಿಸಿ, ನಾಗರಾಜ್ ಗಾಣಿಗ ಸಾಲಿಗ್ರಾಮ ಪ್ರಾಸ್ತಾವಿಕ ಮಾತನಾಡಿದರು. ವಿಶ್ವನಾಥ ಗಾಣಿಗ ಅತಿಥಿಗಳನ್ನು ಪರಿಚಯಿಸಿ, ರಾಜೇಶ್ ಕಾರ್ಯಕ್ರಮ ನಿರೂಪಿಸಿ, ಖಜಾಂಚಿ ಆನಂದ ಮಾಬುಕಳ ವಂದಿಸಿದರು. ಸಭಾ ಕಾರ್ಯಕ್ರಮದ ಅನಂತರ ಯಕ್ಷಗಾನದ ಇತಿಹಾಸದಲ್ಲೇ ಅಪರೂಪಕ್ಕೆ ಸಮಗ್ರ ಗಾಣಿಗ ಕಲಾವಿದರಿಂದ ಕೂಡಿದ ಭೀಷ್ಮವಿಜಯ ಯಕ್ಷಗಾನ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!