Friday, September 20, 2024
Friday, September 20, 2024

ಶಾಲಾ ಶೌಚಾಲಯ ಸ್ವಚ್ಛತೆಗೆ ಸ್ವಚ್ಛತಾ ಸಿಬ್ಬಂದಿಗಳ ನಿಯೋಜನೆ ಮಾಡಲು ಶಾಸಕ ಯಶ್ಪಾಲ್ ಸುವರ್ಣ ಮನವಿ

ಶಾಲಾ ಶೌಚಾಲಯ ಸ್ವಚ್ಛತೆಗೆ ಸ್ವಚ್ಛತಾ ಸಿಬ್ಬಂದಿಗಳ ನಿಯೋಜನೆ ಮಾಡಲು ಶಾಸಕ ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ, ಜು.18: ಸರಕಾರಿ ಶಾಲಾ ಕಾಲೇಜುಗಳಲ್ಲಿ ಶೌಚಾಲಯಗಳ ಸ್ವಚ್ಚತೆ ನಿರ್ವಹಣೆಗೆ ಸೂಕ್ತ ಸಿಬ್ಬಂದಿಗಳ ಕೊರತೆಯಿಂದ ಸಮಸ್ಯೆ ಉಂಟಾಗುತ್ತಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಬೋಧನೆಯ ಜೊತೆಗೆ ಶೌಚಾಲಯ ನೈರ್ಮಲ್ಯದ ಹೊಣೆಗಾರಿಕೆಯನ್ನು ವಹಿಸಬೇಕಾದ ಸನ್ನಿವೇಶ ಸೃಷ್ಟಿಯಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಶಾಲೆಗಳ ಶೌಚಾಲಯ ಸ್ವಚ್ಚತೆಗೆ ಸ್ಥಳೀಯಾಡಳಿತದ ಮೂಲಕ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕ ಮಾಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ರವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಪತ್ರ ಬರೆದು ಮನವಿ ಮಾಡಿದ್ದಾರೆ

.ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಶಾಲಾ ಶೌಚಾಲಯಗಳ ಸ್ವಚ್ಚತೆ ಅತೀ ಅವಶ್ಯವಾಗಿದ್ದು, ಇತ್ತೀಚೆಗೆ ಕೆಲವು ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತಾ ಕಾರ್ಯವನ್ನು ವಿದ್ಯಾರ್ಥಿಗಳು ನಿರ್ವಹಿಸಿದ ಘಟನೆಗಳು ಆಗಾಗ ಮಾಧ್ಯಮಗಳಲ್ಲಿ ವರದಿಯಾಗಿದೆ.
ಶೌಚಾಲಯಗಳ ಸ್ವಚ್ಛತೆಯನ್ನು ಶಾಲಾ ಮಕ್ಕಳ ಮೂಲಕ ಮಾಡಿಸುವುದು ಸಮಂಜಸವಾಗಿರುವುದಿಲ್ಲ. ಅಲ್ಲದೇ, ವಿದ್ಯಾರ್ಥಿಗಳಿಗೆ ಪಠ್ಯ ಭೋಧನೆ, ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆ ಮತ್ತು ಉತ್ತಮ ಫಲಿತಾಂಶ ಹಾಗೂ ಮತ್ತಿತರ ಮಹತ್ತರ ಜವಾಬ್ದಾರಿ ಹೊಂದಿರುವ ಶಿಕ್ಷಕರಿಗೆ ಸ್ವಚ್ಛತಾ ಕಾರ್ಯದ ಜವಾಬ್ದಾರಿ ನೀಡುವುದು ಸರಿಯಲ್ಲ.

ಶಾಲಾ ಶೌಚಾಲಯಗಳ ಸ್ವಚ್ಛತೆಯನ್ನು ನಿರಂತರವಾಗಿ ಕಾಪಾಡಿಕೊಳ್ಳುವ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರ ಸಭೆಗಳ ಮುಖಾಂತರ ಹೊರ ಗುತ್ತಿಗೆ ಸಿಬ್ಬಂದಿಗಳ ಮೂಲಕ ಸೂಕ್ತ ಅನುದಾನ ನೀಡಿ ಸ್ವಚ್ಛತಾ ಕಾರ್ಯವನ್ನು ನಿರ್ವಹಿಸಲು ಯೋಜನೆ ರೂಪಿಸಿ ಸ್ವಚ್ಛತೆಗೆ ಶಾಶ್ವತ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!