Friday, October 18, 2024
Friday, October 18, 2024

ಕೆ.ಎಂ.ಸಿ ಮಣಿಪಾಲ: ನವೀನ ಮಾದರಿಯ ಎಂಡೋಸ್ಕೋಪಿಕ್ ಕಾರ್ಯವಿಧಾನ

ಕೆ.ಎಂ.ಸಿ ಮಣಿಪಾಲ: ನವೀನ ಮಾದರಿಯ ಎಂಡೋಸ್ಕೋಪಿಕ್ ಕಾರ್ಯವಿಧಾನ

Date:

ಮಣಿಪಾಲ, ಜು.23: ಗಮನಾರ್ಹವಾದ ವೈದ್ಯಕೀಯ ಪ್ರಗತಿಯಲ್ಲಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಎಂಡೋಲ್ಟ್ರಾಸೌಂಡ್-ಗೈಡೆಡ್ ಗ್ಯಾಸ್ಟ್ರೋಜೆಜುನೋಸ್ಟೊಮಿ ಎಂದು ಕರೆಯಲ್ಪಡುವ ನವೀನ ಎಂಡೋಸ್ಕೋಪಿಕ್ ವಿಧಾನವನ್ನು ಯಶಸ್ವಿಯಾಗಿ ನಿರ್ವಹಿಸಿದೆ. ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಈ ವಿಧಾನವನ್ನು ನಡೆಸಲಾಯಿತು, ಅವರು ತೀವ್ರ ತೆರನಾದ ಗ್ಯಾಸ್ಟ್ರಿಕ್ ಔಟ್ಲೆಟ್ ಅಡಚಣೆಯಿಂದ ಬಳಲುತ್ತಿದ್ದರು, ಇದರಿಂದಾಗಿ ಅವರಿಗೆ ಆಹಾರ ಸೇವಿಸಲು ಸಾಧ್ಯವಾಗುತ್ತಿರಲಿಲ್ಲ.

ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿಯ ಪ್ರಾಧ್ಯಾಪಕರಾದ ಡಾ.ಶಿರನ್ ಶೆಟ್ಟಿ ನೇತೃತ್ವದ ವೈದ್ಯಕೀಯ ತಂಡವು ಕನಿಷ್ಟ ಅರಿವಳಿಕೆಯಲ್ಲಿ ಈ ಅತ್ಯಾಧುನಿಕ ವಿಧಾನವನ್ನು ಕೈಗೊಳ್ಳಲು ನಿರ್ಧರಿಸಿತು. ಇದು ಜಪಾನಿನ ಎಂಡೋಸ್ಕೋಪಿಸ್ಟ್‌ಗಳ ಆವಿಷ್ಕಾರವಾಗಿದೆ. ಈ ಕಾರ್ಯವಿಧಾನದ ಮೂಲಕ ಹೊಟ್ಟೆಯನ್ನು ಸಣ್ಣ ಕರುಳಿಗೆ ಸಂಪರ್ಕಿಸಲು ಸಾದ್ಯವಾಗತ್ತದೆ. ಇದರಿಂದಾಗಿ ಆಹಾರ ಸೇವಿಸಲು ಇದ್ದ ಅಡಚಣೆಯನ್ನು ತಪ್ಪಿಸಲಾಗುತ್ತದೆ ಮತ್ತು ರೋಗಿಯು ಮೌಖಿಕವಾಗಿ ಆಹಾರವನ್ನು ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ಡಾ.ಶಿರನ್ ಶೆಟ್ಟಿ ವಿವರಿಸಿದ್ದಾರೆ.

ರೋಗಿಯು ಈ ನವೀನ ಕಾರ್ಯವಿಧಾನಕ್ಕೆ ಉತ್ತಮವಾಗಿ ಸ್ಪಂದಿಸಿದರು, ಮೌಖಿಕವಾಗಿ ಆಹಾರವನ್ನು ತೆಗೆದುಕೊಳ್ಳಲು ಪ್ರಾರಂಭಿಸಿದರು ಮತ್ತು ಕೇವಲ 48 ಗಂಟೆಗಳಲ್ಲಿ ಆಸ್ಪತ್ರಯಿಂದ ಬಿಡುಗಡೆ ಮಾಡಲಾಯಿತು. ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಗಣೇಶ್ ಭಟ್ ಅವರು, ಈ ಕನಿಷ್ಠ ಆಕ್ರಮಣಕಾರಿ ಕಾರ್ಯವಿಧಾನದ ಪ್ರಯೋಜನಗಳನ್ನು ಎತ್ತಿ ತೋರಿಸಿದರು, ಇದು ಕನಿಷ್ಟ ಅರಿವಳಿಕೆಯಲ್ಲಿ ಮಾಡಲ್ಪಟ್ಟಿರುವುದರಿಂದ, ಆಸ್ಪತ್ರೆಯ ವಾಸ್ತವ್ಯವು ತುಂಬಾ ಕಡಿಮೆಯಾಗಿದೆ, ನಂತರ ಎರಡು ದಿನಗಳಲ್ಲಿ ಆಸ್ಪತ್ರಯಿಂದ ಬಿಡುಗಡೆ ಮಾಡಲು ಅವಕಾಶ ನೀಡುತ್ತದೆ. ಈ ವಿಧಾನವನ್ನು ನಮ್ಮ ಹೊಸ ಅತ್ಯಾಧುನಿಕ ಎಂಡೋಸ್ಕೋಪಿ ಕೋಣೆಯಲ್ಲಿ ನಡೆಸಲಾಯಿತು ಎಂದಿದ್ದಾರೆ.

ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅವರು, ಆಸ್ಪತ್ರೆಯ ಈ ಸಾಧನೆ ಕುರಿತು ಹೆಮ್ಮೆ ವ್ಯಕ್ತಪಡಿಸಿದರು. ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಈ ಭಾಗದಲ್ಲಿ ತರಬೇತಿ ಪಡೆದ ವೈದ್ಯರ ತಂಡದೊಂದಿಗೆ ಈ ಸುಧಾರಿತ ಸೌಲಭ್ಯವನ್ನು ಒದಗಿಸಿದ ಕರ್ನಾಟಕದ ಮೊದಲ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಾಗಿದೆ. ಈ ಕಾರ್ಯವಿಧಾನವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಕ್ಕಾಗಿ ಡಾ. ಶಿರನ್ ಶೆಟ್ಟಿ ಮತ್ತು ಅವರ ತಂಡವನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ. ಈ ಯಶಸ್ವಿ ಕಾರ್ಯವಿಧಾನದ ಮೂಲಕ ಕಸ್ತೂರ್ಬಾ ಆಸ್ಪತ್ರೆ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ, ಸುಧಾರಿತ ವೈದ್ಯಕೀಯ ಚಿಕಿತ್ಸೆಗಳು ಮತ್ತು ತರಬೇತಿ ಪಡೆದ ತಜ್ಞ ವೈದ್ಯರುಗಳಿಂದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಈ ಭಾಗದಲ್ಲಿ ರೋಗಿಗಳ ಆರೈಕೆಯಲ್ಲಿ ಉನ್ನತ ಸೇವೆ ಸಲ್ಲಿಸುತ್ತಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!