Friday, October 18, 2024
Friday, October 18, 2024

ಬಜೆಟ್ ಕಾರ್ಯಗತ ಮಾಡುವುದರ ಮೇಲೆ ಇದರ ಯಶಸ್ಸು ನಿಂತಿದೆ

ಬಜೆಟ್ ಕಾರ್ಯಗತ ಮಾಡುವುದರ ಮೇಲೆ ಇದರ ಯಶಸ್ಸು ನಿಂತಿದೆ

Date:

ಉಡುಪಿ, ಜು.23: ಕೇಂದ್ರೀಯ ಬಜೆಟ್ ತುಂಬಾ ಚೆನ್ನಾಗಿದೆ ಆದರೆ ಇದನ್ನು ಕಾರ್ಯಗತ ಮಾಡುವುದರ ಮೇಲೆ ಇದರ ಯಶಸ್ಸು ನಿಂತಿದೆ ಅನ್ನುವುದು ಅಷ್ಟೇ ಸತ್ಯ. ಹಿಂದೆ ಸ್ಮಾರ್ಟ್ ಸಿಟಿ ಪ್ಲ್ಯಾನ್ ಬಂತು, ಅದು ಎಷ್ಟರ ಮಟ್ಟಿಗೆ ಯಶಸ್ವಿಯಾಗಿದೆ ಅನ್ನುವುದು ಇಂದಿಗೂ ನಮ್ಮನ್ನು ಕಾಡುತ್ತಿರುವ ಮೊದಲ ಪ್ರಶ್ನೆ. ಈ ಬಜೆಟ್ನಲ್ಲಿ ಸಮಿಶ್ರ ಸರಕಾರದ ಛಾಯೇ ಎದ್ದುಕಾಣುವಂತಿದೆ. ನಮ್ಮಲ್ಲಿ 28 ರಾಜ್ಯಗಳಿವೆ 8 ಕೇಂದ್ರಾಡಳಿತ ಪ್ರದೇಶಗಳು ಇವೆ. ಆದರೆ ಬಜೆಟ್ ಉದ್ದಕ್ಕೂ ಧ್ವನಿಸಿದ ಮಾತು ಬಿಹಾರ ಮತ್ತು ಆಂದ್ರಪ್ರದೇಶ. ಇವುಗಳಿಗೆ ಈ ಬಜೆಟ್ ಹೆಚ್ಚಿನ ಅನುದಾನ ನೀಡಲಾಗಿದೆ. ತೆರಿಗೆ ಸರಳೀಕೃತಗೊಳಿಸಿರುವುದು ಉತ್ತಮ ನಿರ್ಣಯ. ಉದ್ಯೋಗ ಸೃಷ್ಟಿ ಮಾಡಲು ಅನುಕೂಲಕರ ಬಜೆಟ್ ಎಂದು ವ್ಯಾಖ್ಯಾನಿಸಲಾಗಿದೆ. ಈ ಬಾರಿಯಾದರೂ ಕನಸು ನನಸಾಗಬಹುದಾ ಕಾದು ನೇೂಡಬೇಕು. ಒಂದಂತು ಸತ್ಯ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಉತ್ತಮ ಹೊಂದಾಣಿಕೆ ಸೃಷ್ಟಿಯಾದಾಗ ಮಾತ್ರ ಈ ಬಜೆಟ್ ನ ಪ್ರತಿಫಲ ಜನರಿಗೆ ಸಮರ್ಪಕವಾಗಿ ತಲುಪಲು ಸಾಧ್ಯ.

-ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಉಡುಪಿ, ನಿವೃತ್ತ ರಾಜ್ಯಶಾಸ್ತ್ರ ಮುಖ್ಯಸ್ಥರು, ಎಂಜಿಎಂ. ಕಾಲೇಜು ಉಡುಪಿ.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸಂಪನ್ನ; ೧೩೦ ಯೂನಿಟ್ ರಕ್ತ ಸಂಗ್ರಹ

ಕುಂದಾಪುರ, ಅ.18: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನದ ಪ್ರಯುಕ್ತ ಅಭಯಹಸ್ತ...
error: Content is protected !!