Tuesday, September 17, 2024
Tuesday, September 17, 2024

ಬಾರಕೂರು: ಗಾಳಿ ಮಳೆಗೆ ವಿದ್ಯುತ್ ಕಂಬಗಳ ಮೇಲೆ ಉರುಳಿದ ಮರ; ಸಂಚಾರ ಅಸ್ತವ್ಯಸ್ತ

ಬಾರಕೂರು: ಗಾಳಿ ಮಳೆಗೆ ವಿದ್ಯುತ್ ಕಂಬಗಳ ಮೇಲೆ ಉರುಳಿದ ಮರ; ಸಂಚಾರ ಅಸ್ತವ್ಯಸ್ತ

Date:

ಬಾರಕೂರು, ಜು. 26: (ಉಡುಪಿ ಬುಲೆಟಿನ್ ವರದಿ) ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿ ಭಾರೀ ಗಾಳಿ ಮಳೆಯಾಗುತ್ತಿದ್ದು, ಶುಕ್ರವಾರ ಬೆಳಿಗ್ಗೆ ಗಾಳಿಗೆ ಬಾರಕೂರು ಮಂದಾರ್ತಿ ರಸ್ತೆ ಬದಿಯಲ್ಲಿ ಬೃಹತ್ ಮರಗಳು ವಿದ್ಯುತ್ ಕಂಬಗಳ ಮೇಲೆ ಉರುಳಿ ಬಿದ್ದ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ಈ ಭಾಗದಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಬಾರಕೂರು ರೈಲು ನಿಲ್ದಾಣದ ಬಳಿ ಘಟನೆ ಸಂಭವಿಸಿದ್ದು ಸ್ಥಳೀಯ ಸಂಘಟನೆಯ ಸದಸ್ಯರು ಮತ್ತು ಮೆಸ್ಕಾಂ ಸಿಬ್ಬಂದಿ ರಸ್ತೆಯಲ್ಲಿ ಉರುಳಿದ ಮರಗಳನ್ನು ತೆರವುಗೊಳಿಸಿ ಸಂಚಾರ ಆರಂಭಗೊಳ್ಳಲು ಸಹಕರಿಸಿದರು.

ಏನಾಗಿತ್ತು?: ಸ್ಥಳೀಯ ಪ್ರತ್ಯಕ್ಷದರ್ಶಿಗಳ ಪ್ರಕಾರ ಶುಕ್ರವಾರ ಬೆಳಿಗ್ಗೆ ಸುಮಾರು 6 ಗಂಟೆಗೆ ಜೋರಾಗಿ ಬೀಸಿದ ಗಾಳಿಗೆ ಬಾರಕೂರು ರೈಲು ನಿಲ್ದಾಣದ ಬಳಿಯ ಮಂದಾರ್ತಿ ರಸ್ತೆಯ ಬಳಿ ಹಲವಾರು ಮರಗಳು ವಿದ್ಯುತ್ ಕಂಬಗಳ ಮೇಲೆ ಉರುಳಿದ ಪರಿಣಾಮ ಸಂಚಾರ ಅಸ್ತವ್ಯಸ್ತವಾಯಿತು.

ತಪ್ಪಿದ ದುರಂತ: ರಸ್ತೆಯ ಮೇಲೆ ವಿದ್ಯುತ್ ತಂತಿ ಸಮೇತ ಮರಗಳು ಉರುಳಿ ಬೀಳುವ ಸಮಯದಲ್ಲಿ ಮುಖ್ಯ ರಸ್ತೆಯಲ್ಲಿ ಯಾವುದೇ ವಾಹನ ಸಂಚರಿಸದ ಪರಿಣಾಮ ಯಾವುದೇ ಜೀವಹಾನಿ ಆಗಲಿಲ್ಲ ಎನ್ನುತ್ತಾರೆ ಸ್ಥಳೀಯರು.

ಸುರಿಯುವ ಮಳೆಯಲ್ಲೇ ತೆರವು ಕಾರ್ಯಾಚರಣೆ: ರಸ್ತೆಗೆ ತಂತಿಗಳ ಜತೆ ಉರುಳಿದ ಮರಗಳನ್ನು ತೆರವುಗೊಳಿಸಲು ಸ್ಥಳೀಯ ಸಂಘಟನೆಯ ಸದಸ್ಯರು ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರು ಜತೆಗೂಡಿ ಸುರಿಯುವ ಮಳೆಯಲ್ಲೇ ತೆರವು ಕಾರ್ಯಾಚರಣೆ ನಡೆಸಿ ಸಂಚಾರ ಆರಂಭವಾಗಲು ಸಹಕರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!