Thursday, September 19, 2024
Thursday, September 19, 2024

ಪತ್ರಿಕೆಗಳ ಓದು ಜ್ಞಾನ ವೃದ್ದಿಗೆ ಪೂರಕ: ಪ್ರಸಾದ್ ಶೆಟ್ಟಿ

ಪತ್ರಿಕೆಗಳ ಓದು ಜ್ಞಾನ ವೃದ್ದಿಗೆ ಪೂರಕ: ಪ್ರಸಾದ್ ಶೆಟ್ಟಿ

Date:

ಮೂಡುಬಿದಿರೆ, ಜು.27: ಪ್ರತಿದಿನ ಪತ್ರಿಕೆಗಳನ್ನು ಓದುವುದರಿಂದ ಸಮಾಜದ ಆಗುಹೋಗುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ಪರಿಣಾಮಕಾರಿ ಸಂವಹನ, ಶಬ್ದ ಸಂಪತ್ತಿನ ವೃದ್ಧಿ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಘಟಕ ಹಾಗೂ ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ‍್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ವಿವಿಧ ನವ ಮಾಧ್ಯಮಗಳು ನಕಾರತ್ಮಕ, ಅತಿರಂಜಿತ ಸುದ್ದಿಗಳಿಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿವೆ. ಆದರೆ ಪತ್ರಿಕೆಗಳ ಮೂಲಕ ದೊರೆಯುವ ಸಕಾರಾತ್ಮಕ ಮತ್ತು ಮಹತ್ವಪೂರ್ಣ ದಾಖಲೆಗಳು ಜ್ಞಾನದ ಜೊತೆ ಓದಿನ ಸುಖವನ್ನು ನೀಡುತ್ತವೆ ಎಂದರು. ವಿದ್ಯಾರ್ಥಿಗಳು ಪತ್ರಿಕೆಗಳಲ್ಲಿ ಪ್ರಕಟವಾಗುವ ಸಂಪಾದಕೀಯ ಪುಟ, ಸ್ಥಳೀಯ, ರಾಜ್ಯ, ರಾಷ್ಟ್ರಮಟ್ಟದ ಸುದ್ದಿಗಳ ಜೊತೆಗೆ ವಿದ್ಯಾರ್ಥಿಗಳಿಗಾಗಿ ಮೀಸಲಿಟ್ಟ ಆಸಕ್ತಿದಾಯಕ ಸಂಗತಿಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ತಿಳಿಸಿದರು.

ಶ್ರೀ ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ರಾಧಾಕೃಷ್ಣ ಶೆಟ್ಟಿ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕ ಸಾ ಪ ಮೂಡುಬಿದಿರೆ ತಾಲೂಕು ಘಟಕ ಅಧ್ಯಕ್ಷ ಕೆ ವೇಣುಗೋಪಾಲ್ ಶೆಟ್ಟಿ, ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಬೇರೆ ಬೇರೆ ಮಾತೃಭಾಷೆಗಳನ್ನು ಹೊಂದಿದ್ದರು ಕನ್ನಡಕ್ಕೆ ವಿಶೇಷ ಸ್ಥಾನಮಾನ ನೀಡುತ್ತಾ ಅದನ್ನು ನಮ್ಮ ಜೀವನದ ಅಂಗವನ್ನಾಗಿ ಮಾಡಿಕೊಂಡಿದ್ದು ಉಲ್ಲೇಖನೀಯ ಎಂದರು. ವಿದ್ಯಾರ್ಥಿನಿ ಖ್ಯಾತಿ ಪ್ರಾರ್ಥಿಸಿ, ಶ್ರೀ ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಸಾಪ ತಾಲೂಕು ಘಟಕದ ಕಾರ್ಯದರ್ಶಿ ಸದಾನಂದ ನಾರಾವಿ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ವಿಜಯಲಕ್ಷ್ಮಿ ಮಾರ್ಲಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!