Friday, September 20, 2024
Friday, September 20, 2024

ಸಾಧಿಸುವ ಛಲವಿದ್ದರೆ ಸಾಧನೆಯ ದಾರಿ ಸುಲಭ: ಆನಂದ್ ಸಿ ಕುಂದರ್

ಸಾಧಿಸುವ ಛಲವಿದ್ದರೆ ಸಾಧನೆಯ ದಾರಿ ಸುಲಭ: ಆನಂದ್ ಸಿ ಕುಂದರ್

Date:

ಕೋಟ, ಜು.29: ಬದುಕು ನಿಂತ ನೀರಾಗಿರದೇ ಸಾಧಿಸುವ ಛಲವಿರಬೇಕು, ಜೊತೆಗೆ ಪ್ರಯತ್ನದಿಂದ ಸಾಧನೆಯ ಮೆಟ್ಟಿಲುಗಳು ಹತ್ತಲು ಸುಲಭವಾಗುತ್ತದೆ. ಯುವಕರು ಸಮಾಜಕ್ಕೆ ಸಹಾಯವಾಗುವಂತಹ ಕಾರ್ಯ ಚಟುವಟಿಕೆಗಳಿಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗಬೇಕು ಎಂದು ಡಾ. ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಕೊಡಮಾಡುವ ಚಿತ್ರನಟ ಡಾ.ರಮೇಶ್ ಅರವಿಂದ್ ಪ್ರಾಯೋಜಿತ ದತ್ತಿ ಪುರಸ್ಕಾರವನ್ನು ಪ್ರಥ್ವೀಶ್ ಭಟ್ ಹಾಗೂ ರವೀಂದ್ರ ಶೆಟ್ಟಿ ತಂತ್ರಾಡಿ ಅವರಿಗೆ ಪ್ರದಾನ ಮಾಡಿ ಮಾತನಾಡುತ್ತಿದ್ದರು.

ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್, ಯಕ್ಷಗಾನ ಪ್ರಸಂಗಕರ್ತ ವಿಷ್ಣುಮೂರ್ತಿ ನಾಯಕ್ ಬೇಳೂರು, ಗೋವಿಗಾಗಿ ಮೇವು ಅಭಿಯಾನ ಸಂಚಾಲಕ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ(ರಿ)ಕೋಟದ ಅಧ್ಯಕ್ಷ ಸದಾನಂದ ಜಿ, ಕೋಟ ಗ್ರಾಮ ಪಂಚಾಯತ್ ಸದಸ್ಯ ಚಂದ್ರ ಪೂಜಾರಿ, ಗುತ್ತಿಗೆದಾರ ಸುರೇಶ್ ಗಾಣಿಗ ಶೇವಧಿ, ಉದ್ಯಮಿ ಕಿರಣ್ ತೆಕ್ಕಟ್ಟೆ, ಬಾಳೆಬೆಟ್ಟು ಫ್ರೆಂಡ್ಸ್ (ರಿ) ಬಾಳೆಬೆಟ್ಟು ಅಧ್ಯಕ್ಷ ರತ್ನಾಕರ ಪೂಜಾರಿ, ಯಕ್ಷಸುಮನಸ ಕಲಾರಂಗದ ಅಧ್ಯಕ್ಷ ಪ್ರಸಾದ್ ಬಿಲ್ಲವ ಉಪಸ್ಥಿತರಿದ್ದರು. ಶಿಕ್ಷಕ ಸತೀಶ್ ವಡ್ಡರ್ಸೆ ಕಾರ್ಯಕ್ರಮ ನಿರೂಪಿಸಿದರು. ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಟತಟ್ಟು ಗ್ರಾಮ ಪಂಚಾಯತ್ ಪಿ.ಡಿ.ಓ ರವೀಂದ್ರ ರಾವ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!