Sunday, September 22, 2024
Sunday, September 22, 2024

ನದಿ, ಸಮುದ್ರಗಳಲ್ಲಿ ತ್ಯಾಜ್ಯ ಎಸೆಯುವ ಮನಸ್ಥಿತಿ ತೊಲಗಬೇಕು: ರೇವತಿ ತೆಕ್ಕಟ್ಟೆ

ನದಿ, ಸಮುದ್ರಗಳಲ್ಲಿ ತ್ಯಾಜ್ಯ ಎಸೆಯುವ ಮನಸ್ಥಿತಿ ತೊಲಗಬೇಕು: ರೇವತಿ ತೆಕ್ಕಟ್ಟೆ

Date:

ಕೋಟ, ಆ.15: ಪ್ರತಿಯೊಬ್ಬರಲ್ಲೂ ಸ್ವಚ್ಛಗೃಹಿ ಮನಸ್ಸು ಸೃಷ್ಠಿಯಾದಾಗ ಪರಿಸರ ತನ್ನಿಂತಾನೆ ಸ್ವಚ್ಛವಾಗುತ್ತದೆ ಎಂದು ತೆಕ್ಕಟ್ಟೆ ಗ್ರಾಮ ಪಂಚಾಯತ್ ಎಸ್‌ಎಲ್‌ಆರ್‌ಎಂ ಘಟಕ ಮುಖ್ಯಸ್ಥೆ ರೇವತಿ ತೆಕ್ಕಟ್ಟೆ ಅಭಿಪ್ರಾಯಪಟ್ಟರು. ತೆಕ್ಕಟ್ಟೆ ಗ್ರಾ.ಪಂ ವ್ಯಾಪ್ತಿಯ ಕೊಮೆ ಬೀಚ್ ನಲ್ಲಿ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ತೆಕ್ಕಟ್ಟೆ ಗ್ರಾಮ ಪಂಚಾಯತ್ ಎಸ್‌ಎಲ್‌ಆರ್‌ಎಂ ಘಟಕ ತೆಕ್ಕಟ್ಟೆ ಪಂಚಾಯತ್ ಇದರ ನೇತೃತ್ವದಲ್ಲಿ ಸ್ವಚ್ಛ ಕಡಲಕಿನಾರೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ತ್ಯಾಜ್ಯ ಎಸೆಯುವ ಮನಸ್ಥಿತಿ ಮೊದಲು ತೊಲಗಬೇಕು, ಪ್ರಸ್ತುತ ಅತಿಯಾದ ಪ್ಲಾಸ್ಟಿಕ್ ತ್ಯಾಜ್ಯ ಸಮುದ್ರದ ಪಾಲಾಗುತ್ತಿದೆ ಇದಕ್ಕೆ ನಮ್ಮ ಮನುಕುಲದ ಮನೋದೌರ್ಬಲ್ಯವೇ ಕಾರಣ. ಈ ಹಿನ್ನಲ್ಲೆಯಲ್ಲಿ ಸಾಕಷ್ಟು ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿದೆ ಎಂದು ಹೇಳಿದರು.

ಮೈತ್ರೇಯ ಆಯುರ್ವೇದ ಆಶ್ರಮ ಕೊಮೆ ಇದರ ಮುಖ್ಯಸ್ಥ ಡಾ. ತನ್ಮಯ್ ಗೋಸ್ವಾಮಿ, ವೇವ್ಸ್ ಬೀಚ್ ಹೌಸ್ ಮುಖ್ಯಸ್ಥ ಮಹೇಶ್ ಮಟ್ಟಿ, ತೆಕ್ಕಟ್ಟೆ ಗ್ರಾಮ ಪಂಚಾಯತ್ ಎಸ್.ಎಲ್.ಆರ್.ಎಂ ಘಟಕದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!