Wednesday, October 23, 2024
Wednesday, October 23, 2024

ಸೆಪ್ಟೆಂಬರ್ ತಿಂಗಳಲ್ಲಿ ಶ್ರೀಕಂಠಪ್ಪನವರ ಸ್ಮಾರಕ ಲೋಕಾರ್ಪಣೆ: ಪ್ರಮೋದ್ ಮಧ್ವರಾಜ್

ಸೆಪ್ಟೆಂಬರ್ ತಿಂಗಳಲ್ಲಿ ಶ್ರೀಕಂಠಪ್ಪನವರ ಸ್ಮಾರಕ ಲೋಕಾರ್ಪಣೆ: ಪ್ರಮೋದ್ ಮಧ್ವರಾಜ್

Date:

ಉಡುಪಿ, ಸೆ.2: 2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದು ಅದಕ್ಕೆ ಪೂರ್ವಭಾವಿಯಾಗಿ ವಿಶೇಷವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಜಿಲ್ಲೆಯ ಸಮಸ್ಯೆಗಳನ್ನು ತಿಳಿಯಲು ಮತ್ತು ಅಲ್ಲಿನ ಜನರ ಸಂಪರ್ಕ ಮಾಡುವ ಉದ್ದೇಶದಿಂದ ಚಿಕ್ಕಮಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರದ ಗ್ರಾಮಸ್ಥರನ್ನು, ಬಿಜೆಪಿಯ ಮುಖಂಡರುಗಳನ್ನು ಸುಮಾರು ಚುನಾವಣೆಗೆ ಒಂದು ವರ್ಷ ಪೂರ್ವಭಾವಿಯಾಗಿ ಭೇಟಿ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭ ಮಾಡಿದ್ದೆ. ಆ ಸಂದರ್ಭದಲ್ಲಿ ಸುಮಾರು 15 ವರ್ಷಗಳ ಹಿಂದೆ ಲೋಕಸಭಾ ಸದಸ್ಯರಾಗಿದ್ದ ದೇಶಕ್ಕೆ ಮಾದರಿ ಸಂಸದರಾಗಿದ್ದ ಡಿ.ಸಿ ಶ್ರೀಕಂಠಪ್ಪನವರು ಮಾಡಿರತಕ್ಕಂತಹ ಜನಸ್ನೇಹಿ ಕೆಲಸಗಳನ್ನು ಕೇಳಲ್ಪಟ್ಟೆ. ನನಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರತೆ ಕಂಡಿದ್ದು ಅವರನ್ನು ಸ್ಮರಿಸುವಂತಹ ಯಾವುದೇ ಶಾಶ್ವತವಾದ ಸ್ಮಾರಕಗಳು ಇಲ್ಲದಿರುವುದು ನನ್ನ ಗಮನಕ್ಕೆ ಬಂದಾಗ ನನಗೆ ಟಿಕೆಟ್ ಸಿಗಲಿ ಸಿಗದೇ ಇರಲಿ ಅಧಿಕಾರ ಸಿಗಲಿ ಸಿಗದೇ ಇರಲಿ ನನ್ನ ಸ್ವಂತ ಖರ್ಚಿನಲ್ಲಿ ಶ್ರೀಕಂಠಪ್ಪನವರ ಒಂದು ಸ್ಮಾರಕವನ್ನು ರಚಿಸಬೇಕೆನ್ನುವ ಉದ್ದೇಶದಿಂದ ನಗರಸಭೆಗೆ ಅರ್ಜಿಯನ್ನು ಸಲ್ಲಿಸಿ ಚಿಕ್ಕಮಗಳೂರಿನ ಹೃದಯ ಭಾಗದಲ್ಲಿ ವೃತ್ತವನ್ನು ನಿರ್ಮಿಸಬೇಕೆಂಬ ತೀರ್ಮಾನ ಮಾಡಿದ್ದೆ. ಈಗಾಗಲೇ ಕಾಮಗಾರಿ ಅಂತಿಮ ಹಂತ ತಲುಪಿದ್ದು ಇದೇ ಸೆಪ್ಟೆಂಬರ್ ತಿಂಗಳಲ್ಲಿ ಶ್ರೀಕಂಠಪ್ಪನವರ ಕುಟುಂಬದ ಸದಸ್ಯರ ಮೂಲಕ ಅತ್ಯಂತ ಸರಳವಾಗಿ ಉದ್ಘಾಟನೆ ಮಾಡಬೇಕೆಂಬ ಸಂಕಲ್ಪವನ್ನು ಮಾಡಿದ್ದೇನೆ. ಡಿ.ಸಿ ಶ್ರೀಕಂಠಪ್ಪ ಎನ್ನುವ ಒಬ್ಬ ಸರಳ ವ್ಯಕ್ತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಜನತೆ ಯಾವತ್ತು ಸ್ಮರಿಸುವಂತಾಗಲಿ ಎನ್ನುವುದೇ ನನ್ನ ಹಾರೈಕೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!