Wednesday, October 23, 2024
Wednesday, October 23, 2024

ಮಾಹೆ: ಛಾಯಾಚಿತ್ರ ಪ್ರದರ್ಶನ, ಕಾರ್ಯಾಗಾರ

ಮಾಹೆ: ಛಾಯಾಚಿತ್ರ ಪ್ರದರ್ಶನ, ಕಾರ್ಯಾಗಾರ

Date:

ಮಣಿಪಾಲ, ಸೆ.2: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ನ ಸಾರ್ವಜನಿಕ ಸಂಪರ್ಕ, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮ ವಿಭಾಗವು ಸದ್ಭಾವ ಕೇಂದ್ರ, ಮಣಿಪಾಲ್‌ ಸ್ಕೂಲ್‌ ಆಫ್‌ ಆರ್ಕಿಟೆಕ್ಚರ್‌ ಆ್ಯಂಡ್‌ ಪ್ಲ್ಯಾನಿಂಗ್‌ ವಿಭಾಗಗಳ ಸಹಭಾಗಿತ್ವದಲ್ಲಿ ವಿಶ್ವ ಛಾಯಾಗ್ರಹಣ ದಿನ-2024 ಪ್ರಯುಕ್ತ ‘ಮಾಹೆ ಆವರಣದ ಬದುಕು’ ಎಂಬ ವಿಷಯ ಕೇಂದ್ರಿತವಾಗಿ ವಿವಿಧ ಕಾರ್ಯಕ್ರಮಗಳು ಮತ್ತು ಛಾಯಾಚಿತ್ರ ಪ್ರದರ್ಶನಗಳು ಜರಗಿದವು. ಈ ಉಪಕ್ರಮಕ್ಕೆನಿಕಾನ್‌- ಇಂಡಿಯ ಸಹಯೋಗ ನೀಡಿತ್ತು. ‘ನಿಕಾನ್‌ ಇಂಡಿಯ’ದ ಪ್ರಾಯೋಜಕತ್ವದಲ್ಲಿ ನಿಕಾನ್‌ ಕೆಮರಾದ ಬಳಕೆದಾರರಿಗಾಗಿ ಉಚಿತ ಸೇವಾ ಸೌಲಭ್ಯದ ಶಿಬಿರವನ್ನು ಆಯೋಜಿಸುವುದರೊಂದಿಗೆ ಸರಣಿ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಈ ಶಿಬಿರವು ನಿಕಾನ್‌ ಕೆಮರಾ ಬಳಸುವ ವಿದ್ಯಾರ್ಥಿಗಳಿಗೆ ಮತ್ತು ಸಿಬಂದಿಗಳಿಗೆ ಪ್ರಯೋಜನಕಾರಿಯಾಯಿತು.

ನೂರಕ್ಕಿಂತಲೂ ಅಧಿಕ ಮಂದಿ ಈ ತರಬೇತಿ ಶಿಬಿರದ ಲಾಭವನ್ನು ಪಡೆದುಕೊಂಡರು. ‘ನಿಕಾನ್‌ ಇಂಡಿಯ’ದ ವತಿಯಿಂದ ಛಾಯಾಚಿತ್ರ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಆವಶ್ಯಕ ಛಾಯಾಚಿತ್ರಗ್ರಹಣ ತಂತ್ರಗಾರಿಕೆ, ಉಪಕರಣಗಳ ನಿಭಾವಣೆ, ಸೃಜನಶೀಲತೆಯೊಂದಿಗೆ ಬಳಕೆ, ಛಾಯಾಗ್ರಹಣದ ಕೌಶಲ ಇತ್ಯಾದಿಗಳ ಬಗ್ಗೆ ಮಾರ್ಗದರ್ಶನ ನೀಡಲಾಯಿತು. ಮಾಹೆ ಕ್ಯಾಂಪಸ್‌ನ ಸುತ್ತಮುತ್ತಲಿನ ಬದುಕಿಗೆ ಸಂಬಂಧಿಸಿದ ಛಾಯಾಚಿತ್ರ ಪ್ರದರ್ಶನ ಗಮನ ಸೆಳಯಿತು.

ಸಮಾರೋಪ ಸಮಾರಂಭದಲ್ಲಿ ಮಣಿಪಾಲ್‌ ಸ್ಕೂಲ್‌ ಆಫ್‌ ಆರ್ಕಿಟೆಕ್ಚರ್‌ನ ನಿರ್ದೇಶಕ ಡಾ. ಕಲ್ಯಾಣ್‌ ಕುಮಾರ್‌ ಮುಖರ್ಜಿ, ಸಾರ್ವಜನಿಕ ಸಂಪರ್ಕ, ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ಉಪನಿರ್ದೇಶಕ ಸಚಿನ್‌ ಕಾರಂತ್‌, ಸುರೇಶ್‌ ಕೋಟ್ಯಾನ್‌, ಮಿಥುನ್‌ರಾಜ್‌, ಟಿ. ಎನ್‌. ತ್ರಿವಿಕ್ರಮ್‌, ನಿಕಾನ್‌ ಇಂಡಿಯದ ಅರುಣ್‌ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!