Thursday, September 19, 2024
Thursday, September 19, 2024

ಭಾರತ- ಸಿಂಗಾಪುರ ಆರ್ಥಿಕ ಸಂಬಂಧ ಮತ್ತಷ್ಟು ಸದೃಢ; 4 ಒಪ್ಪಂದಗಳಿಗೆ ಸಹಿ

ಭಾರತ- ಸಿಂಗಾಪುರ ಆರ್ಥಿಕ ಸಂಬಂಧ ಮತ್ತಷ್ಟು ಸದೃಢ; 4 ಒಪ್ಪಂದಗಳಿಗೆ ಸಹಿ

Date:

ಯು.ಬಿ.ಎನ್.ಡಿ., ಸೆ.5: ಆರೋಗ್ಯ ಮತ್ತು ಔಷಧ, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ, ಡಿಜಿಟಲ್ ತಂತ್ರಜ್ಞಾನಗಳು ಮತ್ತು ಭಾರತ-ಸಿಂಗಾಪುರ ಸೆಮಿಕಂಡಕ್ಟರ್ ಇಕೋಸಿಸ್ಟಮ್ ಪಾಲುದಾರಿಕೆ ಕ್ಷೇತ್ರಗಳಲ್ಲಿ ಸಹಕಾರಕ್ಕಾಗಿ ಭಾರತ ಮತ್ತು ಸಿಂಗಾಪುರ ನಾಲ್ಕು ತಿಳುವಳಿಕಾ ಒಪ್ಪಂದಗಳನ್ನು ವಿನಿಮಯ ಮಾಡಿಕೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಂಗಾಪುರದ ಪ್ರಧಾನಿ ಲಾರೆನ್ಸ್ ವಾಂಗ್ ನಡುವಿನ ನಿಯೋಗ ಮಟ್ಟದ ಮಾತುಕತೆಯ ನಂತರ ಇದನ್ನು ನಿರ್ಧರಿಸಲಾಯಿತು. ಸಿಂಗಾಪುರದಲ್ಲಿ ನಡೆದ ಮಾತುಕತೆಯಲ್ಲಿ ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ಪ್ರಗತಿಯನ್ನು ಪರಿಶೀಲಿಸಿದರು. ಉಭಯ ದೇಶಗಳ ನಡುವಿನ ವ್ಯಾಪಾರ ಮತ್ತು ಹೂಡಿಕೆಯ ಹರಿವನ್ನು ಮತ್ತಷ್ಟು ವಿಸ್ತರಿಸಲು ಎರಡೂ ಕಡೆಗಳಿಂದ ಸಹಕಾರದ ಭರವಸೆ ವ್ಯಕ್ತವಾಯಿತು.

ಭಾರತದ ಆರ್ಥಿಕತೆಯಲ್ಲಿ ಸುಮಾರು 160 ಬಿಲಿಯನ್ ಯುಎಸ್ ಡಾಲರ್ ಹೂಡಿಕೆಯೊಂದಿಗೆ ಸಿಂಗಾಪುರ ಭಾರತದ ಪ್ರಮುಖ ಆರ್ಥಿಕ ಪಾಲುದಾರ ಎಂದು ಪ್ರಧಾನಿ ಮೋದಿ ಹೇಳಿದರು. ಭಾರತದಲ್ಲಿ ತ್ವರಿತ ಮತ್ತು ನಿರಂತರ ಬೆಳವಣಿಗೆಯು ಸಿಂಗಾಪುರದ ಘಟಕಗಳಿಗೆ ಅಪಾರ ಹೂಡಿಕೆ ಅವಕಾಶಗಳನ್ನು ತೆರೆದಿದೆ. ರಕ್ಷಣಾ ಮತ್ತು ಭದ್ರತೆ, ಕಡಲ ಡೊಮೇನ್ ಜಾಗೃತಿ, ಶಿಕ್ಷಣ, ಎಐ, ಫಿನ್‌ಟೆಕ್, ಹೊಸ ತಂತ್ರಜ್ಞಾನ ಕ್ಷೇತ್ರಗಳು, ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಜ್ಞಾನ ಪಾಲುದಾರಿಕೆ ಕ್ಷೇತ್ರಗಳಲ್ಲಿ ಅಸ್ತಿತ್ವದಲ್ಲಿರುವ ಸಹಕಾರವನ್ನು ಉಭಯ ಪ್ರಧಾನಿಗಳು ಪರಿಶೀಲಿಸಿದರು. ಉಭಯ ನಾಯಕರು ಆರ್ಥಿಕ ಮತ್ತು ಜನರ ನಡುವಿನ ಸಂಬಂಧವನ್ನು ಹೆಚ್ಚಿಸಲು ದೇಶಗಳ ನಡುವಿನ ಸಂಪರ್ಕವನ್ನು ಬಲಪಡಿಸಲು ಕರೆ ನೀಡಿದರು. ಹಸಿರು ಕಾರಿಡಾರ್ ಯೋಜನೆಗಳ ವೇಗವರ್ಧನೆಗೆ ಇದೇ ಸಂದರ್ಭದಲ್ಲಿ ಕರೆ ನೀಡಿದರು. ಕಳೆದ ತಿಂಗಳು ಸಿಂಗಾಪುರದಲ್ಲಿ ನಡೆದ 2ನೇ ಭಾರತ-ಸಿಂಗಾಪುರ ಸಚಿವರ ದುಂಡುಮೇಜಿನ ಫಲಿತಾಂಶದ ಕುರಿತು ಉಭಯ ನಾಯಕರು ಚರ್ಚಿಸಿದರು. ಸಭೆಯಲ್ಲಿ, ಭಾರತ-ಆಸಿಯಾನ್ ಸಂಬಂಧಗಳು ಮತ್ತು ಇಂಡೋ-ಪೆಸಿಫಿಕ್‌ಗೆ ಭಾರತದ ದೃಷ್ಟಿ ಸೇರಿದಂತೆ ಪರಸ್ಪರ ಹಿತಾಸಕ್ತಿಯ ಪ್ರಮುಖ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ಸಿಂಗಾಪುರದಲ್ಲಿ ನೆಲೆಸಿರುವ ಭಾರತೀಯ ಮೂಲದ 3,50,000 ಜನರು ಉಭಯ ದೇಶಗಳ ನಡುವಿನ ಬಾಂಧವ್ಯಕ್ಕೆ ಭದ್ರ ಬುನಾದಿಯಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸಿಂಗಾಪುರದಲ್ಲಿ ಭಾರತದ ಮೊದಲ ತಿರುವಳ್ಳುವರ್ ಸಾಂಸ್ಕೃತಿಕ ಕೇಂದ್ರವನ್ನು ತೆರೆಯಲಾಗುವುದು ಎಂದು ಅವರು ಘೋಷಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...
error: Content is protected !!