Tuesday, October 1, 2024
Tuesday, October 1, 2024

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

Date:

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಛೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ನಾಯಿಕಡಿತ ಹಾಗೂ ಇಲಿಜ್ವರದ ಕುರಿತ ಮಾಹಿತಿ ಕಾರ್ಯಕ್ರಮ ನಗರದ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆಯಿತು. ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ ಪ್ರಾಸ್ತಾವಿಕವಾಗಿ ಮಾತನಾಡಿ, ರೇಬೀಸ್ ಕಾಯಿಲೆ, ರೇಬೀಸ್‌ನಿಂದ ಉಂಟಾಗುವ ಮರಣ ಪ್ರಮಾಣ, ಇಲಿಜ್ವರ ಹಾಗೂ ಕಾಲರದಂತಹ ಸಾಂಕ್ರಮಿಕ ರೋಗಗಳ ಕುರಿತು ಮಾಹಿತಿಯನ್ನು ನೀಡುವುದರ ಜೊತೆಗೆ ರೋಗಗಳಿಂದ ರಕ್ಷಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ತಿಳಿಸಿದರು. ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಎಂ.ಸಿ.ರೆಡ್ಡಪ್ಪ ಮಾತನಾಡಿ, ರೇಬೀಸ್ ಕಾಯಿಲೆ ಮುನ್ನೆಚ್ಚರಿಕಾ ಕ್ರಮಗಳು, ಲಸಿಕೆಗಳು, ಬೀದಿನಾಯಿಗಳ ನಿಯಂತ್ರಣ ಕುರಿತು ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಮೈಕ್ರೋಬೈಯಾಲೋಜಿಸ್ಟ್ ಸುಮಾ ಹೆಗ್ಡೆ, ಎಪಿಡಮೊಲಜಿಸ್ಟ್ ಡಾ.ತೇಜಸ್ವಿನಿ ಇಲಿಜ್ವರ ಹಾಗೂ ರೇಬೀಸ್ ಕುರಿತು ಉಪನ್ಯಾಸ ನೀಡಿದರು. ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ.ರಾಮು ಎಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್, ಸಹಾಯಕ ಪ್ರಾಧ್ಯಾಪಕ ಡಾ.ಮಹೇಶ್ ಭಟ್, ಐ.ಕ್ಯೂ.ಎ.ಸಿ ನ ಸಂಯೋಜಕ ವಿನಯ ಕುಮಾರ್, ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ರಮೇಶ್ ಟಿ.ಎಸ್, ರೇಂರ‍್ಸ್ ಲೀಡರ್ ಜ್ಯೋತಿ ಆಚಾರ್ಯ, ಜಯಲಕ್ಷ್ಮಿ, ಪೂರ್ಣಪ್ರಜ್ಞ ಕಾಲೇಜಿನ ಬೋಧಕ ವೃಂದ, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...

ಜಿಲ್ಲೆಯಲ್ಲಿ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿ

ಉಡುಪಿ, ಸೆ.30: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ...
error: Content is protected !!