Friday, October 4, 2024
Friday, October 4, 2024

ಕರಾವಳಿ ಭದ್ರತಾ ತರಬೇತಿ ಸಂಪನ್ನ

ಕರಾವಳಿ ಭದ್ರತಾ ತರಬೇತಿ ಸಂಪನ್ನ

Date:

ಉಡುಪಿ, ಅ.3: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 8 ನೇಯ ತಂಡದ ತರಬೇತಿಯ ಸಮಾರೋಪ ಸಮಾರಂಭ ಮಲ್ಪೆಯ ಸಿ.ಎಸ್.ಪಿ ಕೇಂದ್ರ ಕಛೇರಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಪ್ರತಿಯೊಂದು ಇಲಾಖೆಯಲ್ಲಿ ಸಿಬ್ಬಂದಿಗಳು ಕಾಲಕಾಲಕ್ಕೆ ಇಲಾಖೆಯ ಆಧುನಿಕ ವ್ಯವಸ್ಥೆಗಳ ಬಗ್ಗೆ ಮಾಹಿತಿಯನ್ನು ಹೊಂದಿಲು ತರಬೇತಿ ಮತ್ತು ಕೌಶಲ್ಯ ಅಗತ್ಯವಿದೆ. ದೇಶದ ರಕ್ಷಣೆಯಲ್ಲಿ ಕರಾವಳಿ ಕಾವಲು ಪೊಲೀಸ್ ಘಟಕದ ಪಾತ್ರ ಮಹತ್ವದಾಗಿದ್ದು, ಈ ನಿಟ್ಟಿನಲ್ಲಿ ಪಡೆದ ತರಬೇತಿಯ ಅಂಶಗಳನ್ನು ಸಾರ್ವಜನಿಕರ ಮತ್ತು ದೇಶದ ರಕ್ಷಣೆಗೆ ಉಪಯೋಗಿಸಬೇಕು ಎಂದರು. ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಮಿಥುನ್ ಹೆಚ್. ಎನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಪೊಲೀಸ್ ಉಪಾಧೀಕ್ಷಕ ಟಿ.ಎಸ್ ಸುಲ್ಫಿ, ಸಿ.ಎಸ್.ಪಿ ಕೇಂದ್ರದ ಸಹಾಯಕ ಆಡಳಿತಾಧಿಕಾರಿ ಮಂಜುಳಾ ಗೌಡ, ಪಿ.ಎಸ್.ಐ ಡಿಎನ್ ಕುಮಾರ್, .ಆರ್‌ಜಿ ಬಿರಾದಾರ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪೊಲೀಸ್ ನಿರೀಕ್ಷಕ ಪ್ರಮೋದ ಕುಮಾರ್ ಸ್ವಾಗತಿಸಿ, ಸುಮಾ ನಿರೂಪಿಸಿ, ಗಣಕಯಂತ್ರ ವಿಭಾಗದ ಪಿಎಸ್‌ಐ ಮುಕ್ತಾ ಬಾಯಿ ವಂದಿಸಿದರು.

ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದ ಗಂಗೊಳ್ಳಿ ಠಾಣೆಯ ಸಿಎಸ್‌ಪಿ ಯುವರಾಜ್, ದ್ವೀತಿಯ ಸ್ಥಾನ ಪಡೆದ ಹೊನ್ನಾವರ ಠಾಣೆಯ ಸಿಎಸ್‌ಪಿ ವಿನಾಯಕ ನಾಯ್ಕ್ ಹಾಗೂ ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಸುಮನ ಎಮ್ ಗೌಡ ಇವರನ್ನು ಗೌರವಿಸಲಾಯಿತು ಹಾಗೂ ತರಬೇತಿಯಲ್ಲಿ ಭಾಗವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಯೋಗ, ಈಜು, ಬೋಟ್ ಪೆಟ್ರೋಲಿಂಗ್, ಬೋರ್ಡಿಂಗ್ ಆಪರೇಷನ್, ನೇವಲ್ ಬೇಸ್ ಭೇಟಿ, ಕೋಸ್ಟ್ಗಾರ್ಡ್ ಭೇಟಿ ಹಾಗೂ ಉಪನ್ಯಾಸಗಳನ್ನು ಏರ್ಪಡಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಂಪ್ ರೋಪ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಉಡುಪಿ, ಅ.3: ಶಾಲಾ ಶಿಕ಼ಣ ಇಲಾಖೆ ಹಾಗೂ ನ್ಯಾಷನಲ್ ಪದವಿಪೂರ್ವ ಕಾಲೇಜು...

ಅಕ್ಟೋಬರ್ ನಲ್ಲಿ ಧೂಮಕೇತುಗಳ ಮೆರವಣಿಗೆ

ಧೂಮಕೇತು ಸುಚಿನ್ಸಾನ್ ಅಟ್ಲಾಸ್ ಮತ್ತು ಸನ್ಗ್ರೇಸರ್ ಅಟ್ಲಾಸ್ ಈಗ ಸಪ್ಟಂಬರ್ ಅಕ್ಟೋಬರ್...

ಆಳ್ವಾಸ್ ವಿದ್ಯಾರ್ಥಿಗಳಿಂದ ಮಣಿಪಾಲದ ಅಂಗರಚನಾಶಾಸ್ತ್ರ ಪ್ರಯೋಗಾಲಯ ಹಾಗೂ ಉದಯವಾಣಿಯ ಕೇಂದ್ರ ಕಚೇರಿಗೆ ಭೇಟಿ

ಮೂಡುಬಿದಿರೆ, ಅ.3: ಆಳ್ವಾಸ್ ಕಾಲೇಜಿನ ಪದವಿ ಮನೋವಿಜ್ಞಾನ ಮತ್ತು ಪತ್ರಿಕೋದ್ಯಮ ವಿಭಾಗದ...
error: Content is protected !!