Saturday, October 12, 2024
Saturday, October 12, 2024

ಶ್ರೀಕೃಷ್ಣ ಮಠದಲ್ಲಿ ಕದಿರು ಹಬ್ಬ

ಶ್ರೀಕೃಷ್ಣ ಮಠದಲ್ಲಿ ಕದಿರು ಹಬ್ಬ

Date:

ಉಡುಪಿ, ಅ.12: ವರ್ಷಂಪ್ರತಿಯಂತೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಕದಿರು ಕಟ್ಟುವ ಹಬ್ಬ ಶನಿವಾರ ನೆರವೇರಿತು. ಮಠದ ಪುರೋಹಿತರು ಸಮೀಪದ ಗದ್ದೆಯಲ್ಲಿ ನೂತನವಾಗಿ ಬೆಳೆದ ಭತ್ತದ ಕದಿರಿಗೆ ಪೂಜೆ ಸಲ್ಲಿಸಿದ ಬಳಿಕ ರಥಬೀದಿಗೆ ತಂದು ಸ್ವರ್ಣ ಪಲ್ಲಕ್ಕಿಯಲ್ಲಿಟ್ಟು ವಾದ್ಯ, ಮಂತ್ರಘೋಷ ಸಹಿತ ಸಾಂಪ್ರದಾಯಿಕ ಬಿರುದಾವಳಿಗಳೊಂದಿಗೆ ಮೆರವಣಿಗೆಯಲ್ಲಿ ಕೃಷ್ಣಮಠಕ್ಕೆ ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಗಳು ಆಸ್ಥಾನ ಪುರೋಹಿತರ ತರಲಾಯಿತು.

ವರ್ಷಕ್ಕೆರಡು ಬಾರಿ ತೆರೆಯುವ ಗರ್ಭಗುಡಿಯ ಮೂಡಣ ದ್ವಾರ: ಕದಿರನ್ನು ಶ್ರೀಕೃಷ್ಣನ ಗರ್ಭಗುಡಿಯ ಮೂಡಣದ್ವಾರದ ಮೂಲಕವೇ ಒಳ ತಂದು ಕೃಷ್ಣನ ಮುಂದಿಟ್ಟು ಶ್ರೀಗಳು ಮಂಗಳಾರತಿ ಬೆಳಗಿದರು. ವಿಶೇಷವೆಂದರೆ ಹೊಸ್ತಿಲು ಹುಣ್ಣಿಮೆಯ ದಿನ ಮತ್ತು ಕದಿರಾರೋಹಣದ ದಿನಗಳ ಎರಡು ದಿನಗಳಂದು ಮಾತ್ರ ಗರ್ಭಗುಡಿಯ ಮೂಡಣ ದ್ವಾರ ತೆರೆಯಲಾಗುತ್ತದೆ. ಅಲ್ಲಿಂದ ಕದಿರನ್ನು ಧಾನ್ಯ ಸಂಗ್ರಹಾಗಾರವಿರುವ ಬಡಗುಮಾಳಿಗೆಗೆ ತಂದು ಆರತಿ ಬೆಳಗಲಾಯಿತು. ಉಡುಪಿಯ ಅಷ್ಟ ಮಠಗಳು ಇತರೆ ಮಠಗಳು ಹಾಗೂ ಆಸುಪಾಸಿನ ನೂರಾರು ಮನೆಗಳ ಭಕ್ತರಿಗೆ ಭತ್ತದ ತೆನೆಗಳನ್ನು ಪ್ರಸಾದವಾಗಿ ವಿತರಿಸಲಾಯಿತು. ದಿವಾನರುಗಳಾದ ನಾಗರಾಜ ಆಚಾರ್ಯ, ಪ್ರಸನ್ನಾಚಾರ್ಯ, ವಿದ್ವಾಂಸರುಗಳಾದ ಮಧ್ವರಮಾನಾಚಾರ್ಯ, ಗೋಪಾಲಾಚಾರ್ಯ, ವೇದವ್ಯಾಸ ಪುರಾಣಿಕ, ಪುರೋಹಿತರಾದ ರಾಘವೇಂದ್ರ ಕೊಡಂಚ, ಕೊಟ್ಟಾರಿ ರಾಮ ಕೊಡಂಚ, ನಾಗರಾಜ ತಂತ್ರಿ ಮೊದಲಾದವರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೋಟ ಅಮೃತೇಶ್ವರಿ ದೇಗುಲದಲ್ಲಿ ವೈಭವದ ಶರನ್ನವರಾತ್ರಿ ಸಂಪನ್ನ

ಕೋಟ, ಅ.12: ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ...

ಪಾಂಡೇಶ್ವರ ಶಾರದೋತ್ಸವ: ಸಾಧಕರಿಗೆ ಸಮ್ಮಾನ

ಕೋಟ, ಅ.12: ಶರನ್ನವರಾತ್ರಿ ಉತ್ಸವದ ಮೂಲಕ ಧಾರ್ಮಿಕತೆಯ ಕೇಂದ್ರವಾಗಿಸಿಕೊಂಡು ಪ್ರಕೃತಿಯನ್ನು ಆರಾಧಿಸುವ...

ಶಿವರಾಮ ಕಾರಂತರ ಜನ್ಮದಿನಾಚರಣೆ ಕಾರ್ಯಕ್ರಮ

ಕೋಟ, ಅ.12: ಕಾರಂತರ ಬದುಕೆ ವಿಸ್ಮಯ. ಅವರ ನೇರ ನಡೆ ನುಡಿ...

ಬಾಂಗ್ಲಾದೇಶ ಅಕ್ರಮ ವಲಸಿಗರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ: ಯಶ್ಪಾಲ್ ಸುವರ್ಣ

ಉಡುಪಿ, ಅ.12: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು...
error: Content is protected !!