Sunday, October 13, 2024
Sunday, October 13, 2024

ಪಾಂಡೇಶ್ವರ ಶಾರದೋತ್ಸವ: ಸಾಧಕರಿಗೆ ಸಮ್ಮಾನ

ಪಾಂಡೇಶ್ವರ ಶಾರದೋತ್ಸವ: ಸಾಧಕರಿಗೆ ಸಮ್ಮಾನ

Date:

ಕೋಟ, ಅ.12: ಶರನ್ನವರಾತ್ರಿ ಉತ್ಸವದ ಮೂಲಕ ಧಾರ್ಮಿಕತೆಯ ಕೇಂದ್ರವಾಗಿಸಿಕೊಂಡು ಪ್ರಕೃತಿಯನ್ನು ಆರಾಧಿಸುವ ಉತ್ಸವವಾಗಿದೆ ಎಂದು ಪಾಂಡೇಶ್ವರದ ಯೋಗಗುರುಕುಲದ ಮುಖ್ಯಸ್ಥ ಡಾ.ವಿದ್ವಾನ್ ವಿಜಯ್ ಮಂಜರ್ ಹೇಳಿದರು. ಶುಕ್ರವಾರ ಪಾಂಡೇಶ್ವರ ಶಾಲಾ ವಠಾರದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಆಶ್ರಯದಲ್ಲಿ ೩೧ನೇ ಶಾರದೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಾರದೋತ್ಸವ ಧಾರ್ಮಿಕ ಕಾರ್ಯದ ಜತೆಗೆ ಸಾಂಸ್ಕೃತಿಕ ಮೆರುಗು ಹೆಚ್ಚಿಸಿ ಜ್ಞಾನದ ಸಂಪತ್ತು ವೃದ್ಧಿಸುತ್ತಿದೆ. ಉತ್ಸವಗಳು ಬರೆ ಹಬ್ಬವಾಗಿರದೆ ಸಮರ್ಪಣಾ ಮನೋಭಾವ ಹೊಸ ಚಿಂತನೆಗಳಿಗೆ ವೇದಿಕೆ ಕಲ್ಪಿಸಿದೆ. ಜತೆಗೆ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಿ ಮಾದರಿಯಾಗಬೇಕು ಎಂದರು.

ಸಾಸ್ತಾನದ ಸಂತ ಅಂತೋನಿ ಚರ್ಚನ ಫಾದರ್ ಸುನೀಲ್ ಡಿಸಿಲ್ವಾ ಶಾರದೋತ್ಸವದ ಮಹತ್ವದ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಇದೇ ವೇಳೆ ಧಾರ್ಮಿಕ ಕ್ಷೇತ್ರದ ಹಿರಿಯರಾದ ಸಾಸ್ತಾನ ಗೋಳಿಗರಡಿ ದೈವಸ್ಥಾನದ ಮುಖ್ಯಸ್ಥ ಜಿ.ವಿಠ್ಠಲ್ ಪೂಜಾರಿ ಪಾಂಡೇಶ್ವರ, ಸಮಾಜ ಸೇವಕ ಪತ್ರಿಕಾ ವಿತರಕ ಚಂದ್ರಶೇಖರ್ ಮಯ್ಯ, ರಂಗಕರ್ಮಿ ದಿ.ಸಂಜೀವ ಕದ್ರಕಟ್ಟು ಇವರ ಪತ್ನಿ ಸೀತಾ ಪೂಜಾರಿ ಇವರುಗಳಿಗೆ ವಿಶೇಷ ಗೌರವ ಸಲ್ಲಿಸಿ ಸಮ್ಮಾನಿಸಲಾಯಿತು. ಶಾರದೋತ್ಸವ ಹಿನ್ನಲ್ಲೆಯಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ನೀಡಲಾಯಿತು. ಅಧ್ಯಕ್ಷತೆಯನ್ನು ಶಾರದೋತ್ಸವ ಸಮಿತಿ ಅಧ್ಯಕ್ಷ ಚಂದ್ರಮೋಹನ್ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಪಾಂಡೇಶ್ವರ ಗ್ರಾ.ಪಂ ಅಧ್ಯಕ್ಷೆ ಸುಶೀಲ ಸದಾನಂದ ಪೂಜಾರಿ, ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ಬಿ.ಎಂ ಭಟ್, ಶಾರದೋತ್ಸವ ಸಮಿತಿ ಗೌರವಾಧ್ಯಕ್ಷ ಪ್ರತಾಪ್ ಶೆಟ್ಟಿ ಸಾಸ್ತಾನ ಉಪಸ್ಥಿತರಿದ್ದರು. ಸಮಿತಿಯ ರಾಘವೇಂದ್ರರಾಜ್ ಸ್ವಾಗತಿಸಿ ಸಮ್ಮಾನ ಪತ್ರ ವಾಚಿಸಿದರು. ಅಭಿಜಿತ್ ಪಾಂಡೇಶ್ವರ ನಿರೂಪಿಸಿದರು. ನಂತರ ರಘು ಪಾಂಡೇಶ್ವರ ನೇತೃತ್ವದಲ್ಲಿ ಸಾಧನಾ ಕಲಾ ತಂಡದ ಕಲಾವಿದರಿಂದ ಕಿತಾಪತಿ ಕಿಟ್ಟ ನಾಟಕ ಪ್ರದರ್ಶನಗೊಂಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಹಿಳಾ ಪೌರ ಕಾರ್ಮಿಕರ ಪಾದಪೂಜೆ

ತುಮಕೂರು, ಅ.12: ತುಮಕೂರಿನ ಚಿಕ್ಕನಾಯಕನಹಳ್ಳಿ ಪಟ್ಟಣದ ಶಕ್ತಿ ಮಾತೆ ಶ್ರೀ ಮಹಾಲಕ್ಷ್ಮೀ...

ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆಗೆ ನೋಂದಣಿ ಆರಂಭ

ನವದೆಹಲಿ, ಅ.12: ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಯೋಜನೆಗಾಗಿ ಶನಿವಾರ ಸಂಜೆ ಆನ್‌ಲೈನ್...

ಮಣಿಪಾಲ ಜ್ಞಾನಸುಧಾ: ಶಾರದಾ ಪೂಜೆ

ಮಣಿಪಾಲ, ಅ.12: ಅಕ್ಟೋಬರ್‌ 12ರಂದು ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದಲ್ಲಿ...

ಕೋಟ ಅಮೃತೇಶ್ವರಿ ದೇಗುಲದಲ್ಲಿ ವೈಭವದ ಶರನ್ನವರಾತ್ರಿ ಸಂಪನ್ನ

ಕೋಟ, ಅ.12: ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ...
error: Content is protected !!