ಶಿರಸಿ, ಫೆ.7: ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ, ಕುಮಟ ರೈಲು ನಿಲ್ದಾಣದಲ್ಲಿ ಎರಡನೇ ಪ್ಲಾಟ್ಫಾರಂ ನಿರ್ಮಿಸಬೇಕು ಹಾಗು ಪ್ಲಾಟ್ಫಾರಂನ ಎತ್ತರವನ್ನು ಎತ್ತರಿಸಬೇಕೆಂದು ಮತ್ತು ಬೆಂಗಳೂರು ಮುರುಡೇಶ್ವರ ರೈಲನ್ನು ವಾಸ್ಕೋವರೆಗೆ ವಿಸ್ತರಿಸುವಂತೆ, ಕಾಚಿಗುಡ ಎಕ್ಸ್ಪ್ರೆಸ್ ನ್ನು ಮುರುಡೇಶ್ವರ ದಿಂದ ಕಾರವಾರದ ವರೆಗೆ ವಿಸ್ತರಿಸಬೇಕು ಹಾಗೂ ಖಾನಾಪುರ ರೈಲ್ವೆ ನಿಲ್ದಾಣದ ಅಭಿವೃದ್ಧಿ ಮತ್ತು ಕೆಳ ಸೇತುವೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮನವಿ ಮಾಡಿದರು. ಮನವಿಗೆ ಸಚಿವರು ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.