Sunday, February 23, 2025
Sunday, February 23, 2025

ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ ಜಾರಿ

ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ ಜಾರಿ

Date:

ಉಡುಪಿ, ಫೆ.14: ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ದೂರವಾಣಿ ಮೂಲಕ ಸ್ವೀಕೃತವಾಗುತ್ತಿರುತ್ತವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮವಹಿಸುವುದು ಅಗತ್ಯವಾಗಿದ್ದು, ಈ ಸಂಬಂಧ ಸರ್ಕಾರದ ಸುತ್ತೋಲೆ ಸಂ.ಎಫ್.ಇ.ಇ. 128.ಇ.ಪಿ.ಸಿ.2022 ದಿನಾಂಕ:10-05-2022 ರಲ್ಲಿ ನೀಡಲಾದ ಮಾರ್ಗದರ್ಶನಗಳನ್ನು ಸರಿಯಾಗಿ ಕಾರ್ಯಗತಗೊಳಿಸಲು ಹಾಗೂ ಜಿಲ್ಲೆಯ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ನಿಗಧಿಪಡಿಸಿದ ಅವಧಿಯೊಳಗೆ ಸಮಾರಂಭವನ್ನು ಮುಕ್ತಾಯಗೊಳಿಸಬೇಕು. ಅಲ್ಲದೇ ವಿಪರೀತವಾಗಿ ಶಬ್ದ ಮಾಲಿನ್ಯ ಹಾಗೂ ಅಕ್ಕ ಪಕ್ಕದವರೆಗೆ ತೊಂದರೆ ಉಂಟಾಗದಂತೆ ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷೆ ತಯಾರಿಗೆ ಹಾಗೂ ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದಲು ಅಡಚಣೆಯಾಗದಂತೆ ಸಾರ್ವಜನಿಕರು ಸಹಕರಿಸಬೇಕು. ಇದರ ಹೊರತಾಗಿಯೂ ಶಬ್ದ ಮಾಲಿನ್ಯದ ಕುರಿತು ದೂರುಗಳು ಸ್ವೀಕೃತವಾದಲ್ಲಿ ಪರಿಸರ (ಸಂರಕ್ಷಣೆ) ಕಾಯಿದೆ 1986 ನಿಯಮ 15 ರಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!