Monday, February 24, 2025
Monday, February 24, 2025

ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಗಾತ್ರದ ತ್ಯಾಜ್ಯದ ಮೂಟೆ; ಸಾರ್ವಜನಿಕರ ಆಕ್ರೋಶ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಗಾತ್ರದ ತ್ಯಾಜ್ಯದ ಮೂಟೆ; ಸಾರ್ವಜನಿಕರ ಆಕ್ರೋಶ

Date:

ಕೋಟ, ಫೆ.18: ಕೋಟದ ಮಣೂರು ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಕಿಡಿಗೇಡಿಗಳು ಮೂಟೆಗಟ್ಟಲೆ ತ್ಯಾಜ್ಯ ಎಸೆದ ಘಟನೆ ನಡೆದಿದೆ. ಸೋಮವಾರ ರಾತ್ರಿ ಬೆಳಗಾಗುವದರೊಳಗೆ ಒಂದು ತ್ಯಾಜ್ಯದ ಚೀಲ ಕಾಣಿಸಿಕೊಂಡಿತ್ತು. ಮಂಗಳವಾರ ಮುಂಜಾನೆಯ ಒಳಗೆ ಮತ್ತೆ ಮೂರು ಭಾರೀ ಗಾತ್ರದ ತ್ಯಾಜ್ಯದ ಚೀಲ ಅದೇ ಡಿವೈಡರ್ ಮಧ್ಯದಲ್ಲಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಕೋಟದ ಪಂಚವರ್ಣ ಸಂಘಟನೆ ಅಧ್ಯಕ್ಷ ಮನೋಹರ್ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ರಾಷ್ಟ್ರೀಯ ಹೆದ್ದಾರಿ ನಿರ್ವಹಿಸುತ್ತಿರುವ ಕೆ.ಕೆ ಆರ್ ಕಂಪನಿ ಹಾಗೂ ಕೋಟ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಿದ್ದಾರೆ. ಹೆದ್ದಾರಿಯ ಮಧ್ಯದಲ್ಲಿ ತ್ಯಾಜ್ಯದ ಚೀಲ ಇರಿಸುವ ಕಿಡಿಗೇಡಿಗಳನ್ನು ಕಂಡುಹಿಡಿಯಲು ಸಿಸಿ ಕ್ಯಾಮರ ಅಳವಡಿಸಲು ಸಂಬಂಧಪಟ್ಟ ಸ್ಥಳೀಯಾಡಳಿತ ಅಥವಾ ಕೆ.ಕೆ ಆರ್ ಕಂಪನಿಗೆ ಸ್ಥಳೀಯರು ಮತ್ತು ಸಂಘ ಸಂಸ್ಥೆಗಳು ಆಗ್ರಹಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!