Sunday, February 23, 2025
Sunday, February 23, 2025

ವಿಕಾಸಕ್ಕಾಗಿ ಜಾನಪದ

ವಿಕಾಸಕ್ಕಾಗಿ ಜಾನಪದ

Date:

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ಜಾನಪದ ಪರಿಷತ್ ಬೆಂಗಳೂರು ಹಾಗು ಉಡುಪಿ ಜಿಲ್ಲಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ವಿಕಾಸಕ್ಕಾಗಿ ಜಾನಪದ ಎಂಬ ಜಾನಪದ ಸಂಗೀತ ಮತ್ತು ಗೌರವ ಸನ್ಮಾನ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಉದ್ಘಾಟಕರಾದ ಪ್ರಾಂಶುಪಾಲೆ ಪ್ರೊ. ಆಶಾ ಕುಮಾರಿ, ಜಾನಪದ ಭಾಷೆ ಮನಸ್ಸಿನ ಭಾಷೆಯಾಗಿದೆ. ಜಾನಪದ ದೇವರ ಇರುವಿಕೆಯನ್ನು ಮತ್ತು ಪ್ರಕೃತಿಯ ಅಸ್ಮಿತೆಯನ್ನು ತೋರಿಸುತ್ತದೆ ಹಾಗೆಯೇ ಜಾನಪದ ಸಾಹಿತ್ಯ ಭಾವನಾತ್ಮಕವಾಗಿದೇ, ಧಾರ್ಮಿಕ ಲೇಪನವಿದೆ, ಬದುಕಿನ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ತರ ಪಾತ್ರವಿದೆ ಎಂದರು. ಈಗಿನ ಯುವ ಜನತೆ ಜಾನಪದದ ಒಳಹೊಕ್ಕು ಜೀವನ ಶೈಲಿಯನ್ನು ರೂಪಿಸಿಕೊಂಡಲ್ಲಿ ಆರೋಗ್ಯಕರ ಜೀವನ ನಡೆಸಬಹುದು ಎಂದು ಉದಾಹರಣೆ ಮುಖೇನ ವಿವರಿಸಿದರು.

ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಗಣೇಶ್ ಗಂಗೊಳ್ಳಿ ಪ್ರಾಸ್ತಾವಿಕ ನುಡಿಯಲ್ಲಿ ಇನ್ನೊಬ್ಬರ ಒಳತಿಗಾಗಿ ಹಾರೈಸುವ ಸಂಸ್ಕೃತಿ ಜಾನಪದದ್ದಾಗಿದೆ ಎಂದು ವಿವಿಧ ಜಾನಪದ ಗೀತೆಗಳನ್ನು ಹಾಡುವ ಮೂಲಕ ಜಾನಪದದ ಪ್ರಸ್ತುತತೆ ಅರಿವು ಮೂಡಿಸಿದರು. ಕುಂದಾಪುರ ನೇರಳಕಟ್ಟೆ ಯೋಗಗುರು ಪ್ರಸ್ತುತ ವಿಯೆಟ್ನಾಮ್ ನಲ್ಲಿ ಯೋಗ ಶಿಕ್ಷಕರಾಗಿರುವ ದೇವರಾಜ್ ದೇವಾಡಿಗ ಅವರನ್ನು ಉಡುಪಿ ಜಿಲ್ಲಾ ಘಟಕದ ಪರವಾಗಿ ಸನ್ಮಾನಿಸಲಾಯಿತು. ಉಡುಪಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಮಾಯ ಕಾಮತ್, ಪದಾಧಿಕಾರಿ ಪ್ರಭಾ ರಾವ್ ಉಪಸ್ಥಿತರಿದ್ದರು. ಕಾಲೇಜಿನ ವಾಣಿಜ್ಯ ಉಪನ್ಯಾಸಕ ರಾಘವೇಂದ್ರ ಜಿ ಜಿ ವಂದಿಸಿದರು. ಉಡುಪಿ ಜಿಲ್ಲಾ ಪ್ರ. ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಡಾ. ಗಣೇಶ್ ಗಂಗೊಳ್ಳಿ ಅವರಿಂದ ಜಾನಪದ ಸಂಗೀತ ಕಾರ್ಯಕ್ರಮ ನಡೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!