Sunday, February 23, 2025
Sunday, February 23, 2025

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

Date:

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ (ದಿನಕರ್) ಅವರನ್ನು ಭಾರತ ಸರಕಾರದ ಕಾನೂನು ಮತ್ತು ನ್ಯಾಯಾಂಗ ಸಚಿವಾಲಯ ನೋಟರಿ ಕಾಯಿದೆ 1952ರಡಿಯಲ್ಲಿ ನೋಟರಿ ಪಬ್ಲಿಕ್‌ ಆಗಿ ನೇಮಕ ಮಾಡಿದೆ.

ಸಮಾಜ ಸೇವಕರೂ ಆಗಿರುವ ಡಿ. ಕೆ. ಶೆಟ್ಟಿಯವರು ಅನೇಕ ಬ್ಯಾಂಕ್‌ಗಳಿಗೆ ಪ್ಯಾನಲ್ ವಕೀಲರಾಗಿ ಮತ್ತು ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಂಬೇ ಬಂಟ್ಸ್‌ ಅಸೋಸಿಯೇಶನ್‌ನ ಉಪಾಧ್ಯಕ್ಷರಾಗಿ, ಬಂಟ್ಸ್‌ ಲಾ ಫಾರಂನ ಮಾಜಿ ಅಧ್ಯಕ್ಷರಾಗಿ, ವಿಜಯ ಬ್ಯಾಂಕ್‌ನ ನಿವೃತ್ತ ಅಧಿಕಾರಿಗಳ ಎಸೋಸಿಯೇಶನ್‌ನ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಡ್ವಕೇಟ್ ಡಿ. ಕೆ. ಶೆಟ್ಟಿಯವರು ತಾನು ಪ್ರಾಥಮಿಕ ಶಿಕ್ಷಣ ಪಡೆದ ಕಾರ್ಕಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಯಾ ಹಾಗು ಹೈಸ್ಕೂಲು ಶಿಕ್ಷಣ ಪಡೆದ ಸರಕಾರಿ ಹೈಸ್ಕೂಲು ಬೆಳ್ಮಣ್ಣುವಿನ ಅಭಿವೃದ್ಧಿಗೆ ಗಣನೀಯ ಕೊಡುಗೆಯನ್ನು ನೀಡಿದ್ದಾರೆ.

ಅವರು ಅಂಧೇರಿ ಪಶ್ಚಿಮದ ನಿವಾಸಿ. ಮೂಲತಃ ಬೋಳ ಪರ್ತಿಮಾರುಗುತ್ತು (ಬಲ್ಯಾರುದಡ್ಡು)ವಿನ ಮುಂಬಯಿಯ ಹಿರಿಯ ಹೊಟೇಲು ಉದ್ಯಮಿ, ದಿವಂಗತ ಕಾಡ್ಯ ಎಮ್. ಶೆಟ್ಟಿ ಮತ್ತು ಸುರತ್ಕಲ್ ಮಧ್ಯ ಕುಂಜರಬಾಳಿಕೆ ದಿವಂಗತ ಭವಾನಿ ಕೆ. ಶೆಟ್ಟಿ ದಂಪತಿ ಪುತ್ರ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!