Tuesday, October 22, 2024
Tuesday, October 22, 2024

ಶುಕ್ರ ಗ್ರಹ ಫಳ ಫಳ

ಶುಕ್ರ ಗ್ರಹ ಫಳ ಫಳ

Date:

ಸುಮಾರು 19 ತಿಂಗಳಿಗೊಮ್ಮೆ ಸಂಜೆಯ ಪಶ್ಚಿಮ ಆಕಾಶದಲ್ಲಿ ವಿಜೃಂಭಿಸುವ ಶುಕ್ರ ಮೇ 30 ರಂದು ಅತೀ ಎತ್ತರದಲ್ಲಿ ಸುಮಾರು 43 ಡಿಗ್ರಿ ಎತ್ತರದಲ್ಲಿ ಹೊಳೆಯುತ್ತಿದೆ. ಮೇ 30ರಿಂದ ಜುಲೈ ಅಂತ್ಯದವರೆಗೂ ಹೊಳೆಯುತ್ತಾ ಆಗಸ್ಟ್ ಪ್ರಾರಂಭದಲ್ಲಿ ಕಣ್ಮರೆಯಾಗುತ್ತದೆ. ಆಗಸ್ಟ್ 8 ರಿಂದ ಆಗಸ್ಟ್ 19 ರವರೆಗೆ ಸೂರ್ಯನಿಗೆ ನೇರ ಬಂದು ಕಾಣದಾದಾಗ ‘ಅಸ್ತ’ ಎನ್ನುವರು.

ನಂತರ ಪೂರ್ವ ಆಕಾಶದಲ್ಲಿ ಬೆಳಗಿನ ಜಾವ ಗೋಚರ.
ಈಗ ಮೇ 30 ರಿಂದ ಭೂಮಿಗೆ ಸಮೀಪಿಸುತ್ತಿದ್ದಂತೆ ದಿನದಿಂದ ದಿನಕ್ಕೆ ದಿಗಂತದೆಡೆಗೆ ಕೆಳಗಿಳಿಯುತ್ತಾ ಪ್ರಭೆ ಹೆಚ್ಚಿಸಿಕೊಳ್ಳುತ್ತಾ ಜುಲೈ 7ರಂದು ಅತೀ ಹೆಚ್ಚಿನ ಪ್ರಭೆಯಲ್ಲಿ ಕಂಗೊಳಿಸುತ್ತದೆ. ಶುಕ್ರ ಈಗ ಭೂಮಿಯಿಂದ ಸುಮಾರು 15 ಕೋಟಿ ಕಿಮೀ ದೂರದಿಂದ ಆಗಸ್ಟ್ 8ರ ಹೊತ್ತಿಗೆ 4 ಕೋಟಿ ಕಿಮೀ ಗೆ ಸಮೀಪಿಸುತ್ತದೆ.

ಹೀಗೆ ಶುಕ್ರ ಗ್ರಹ ಕಾಣಿಸಲು ಪ್ರಮುಖ ಕಾರಣ ಶುಕ್ರ, ಬುಧ ಗ್ರಹದಂತೆ ಸೂರ್ಯ ಭೂಮಿ ದೂರಕ್ಕಿಂತ ಕಡಿಮೆ ದೂರದಲ್ಲಿ ಇರುವುದು. ಸೂರ್ಯನಿಂದ ಬುಧ ಸುಮಾರು 6 ಕೋಟಿ , ಶುಕ್ರ 11ಕೋಟಿ ಕಿಮೀ ಯಾದರೆ ಭೂಮಿ 15 ಕೋಟಿ ಕಿಮೀ ದೂರ.

ಹೀಗಾಗಿ ಸೌರವ್ಯೂಹದಲ್ಲಿ ಭೂಮಿಗಿಂತ ಒಳಗಿರುವ ಈ ಎರಡು ಗ್ರಹಗಳು ರಾತ್ರಿ ಇಡೀ ಕಾಣುವುದಿಲ್ಲ, ಕಾಣುವುದೇ ಪಶ್ಚಿಮ ಆಕಾಶದಲ್ಲಿ ಸಂಜೆ ಹಾಗೂ ಪೂರ್ವ ಆಕಾಶದಲ್ಲಿ ಬೆಳಗಿನ ಜಾವ.

ಸಂಜೆ ಆಕಾಶದಲ್ಲಿ ಸೂರ್ಯಾಸ್ತದ ನಂತರ ಕೆಲ ಗಂಟೆ ಹೆಚ್ಚೆಂದರೆ ದಿಗಂತದಿಂದ 47 ಡಿಗ್ರಿ ಎತ್ತರದಲ್ಲಿ ಹಾಗೂಬುಧ 27 ಡಿಗ್ರಿ ಎತ್ತರದಲ್ಲಿ. ಮತ್ತೆ ಕೆಲ ಸಮಯ ಪೂರ್ವ ಆಕಾಶದಲ್ಲಿ ಸೂರ್ಯೋದಯಕ್ಕಿಂತ ಮೊದಲು. ಸೂರ್ಯನಿಂದ ಶುಕ್ರ ಸುಮಾರು 11 ಕೋಟಿ ಒಂದೇ ದೂರದಲ್ಲಿದೆಯಾದರೂ ಭೂಮಿಯಿಂದ ಯಾವಾಗಲೂ ಒಂದೇ ಇರುವುದಿಲ್ಲ. 19 ತಿಂಗಳಿಗೊಮ್ಮೆ ಅತೀ ಸಮೀಪ ದೂರ 4 ಕೋಟಿ (ಆಗಸ್ಟ್ 13 ಇನ್ಫೀರಿಯರ್ ಕಂಜಂಕ್ಷನ್) ನಂತರ ಜನವರಿ 2025 ರಲ್ಲಿ ಅತ್ಯಂತ ದೂರ 26 ಕೋಟಿ ಕಿಮೀ (ಸುಪೀರಿಯರ್ ಕಂಜಂಕ್ಷನ್.)

ಗ್ರಹಗಳಲ್ಲಿ ಬರೀಗಣ್ಣಿಗೆ ಶುಕ್ರನೇ ಚೆಂದ. ಸುಮಾರು 95% ಇಂಗಾಲದ ಆಕ್ಸೈಡುಗಳ ವಾತಾವರಣ ಸ್ವಲ್ಪ ರಂಜಕದ ಡೈಆಕ್ಸೈಡುಗಳಿಂದ ಅತೀ ಹೆಚ್ಚು ಸೂರ್ಯನ ಬೆಳಕನ್ನು ಪ್ರತಿ ಫಲಿಸುವುದರಿಂದ ಶುಕ್ರ ಫಳ ಫಳ. ದೂರದರ್ಶಕದಲ್ಲೀಗ ಶುಕ್ರಗ್ರಹ ಚೌತಿಯ ಚಂದ್ರನಂತೆ ಕಾಣುತ್ತದೆ. ಜುಲೈ ಕೊನೆಯ ವಾರ ಬಿದಿಗೆ ಚಂದ್ರನಿಗಿಂತ ಕ್ಷೀಣ.

– ಡಾ. ಎ.ಪಿ. ಭಟ್ ಉಡುಪಿ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...

ನಾಗರಾಜ್ ಬಲ್ಲಾಳ್ ಇವರಿಗೆ ಉತ್ತಮ ಆಡಳಿತಗಾರ ಪ್ರಶಸ್ತಿ

ಕಟಪಾಡಿ, ಅ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಸಮೂಹ ಶಿಕ್ಷಣ...
error: Content is protected !!