Saturday, October 19, 2024
Saturday, October 19, 2024

ಆಸಕ್ತಿಯ ಕೇಂದ್ರಬಿಂದು ನಮ್ಮ ಸೂರ್ಯ

ಆಸಕ್ತಿಯ ಕೇಂದ್ರಬಿಂದು ನಮ್ಮ ಸೂರ್ಯ

Date:

ಮ್ಮ ಅನ್ನದಾತ, ಜ್ಞಾನದಾತ ಸೂರ್ಯನ ಬಗ್ಗೆ ಹೆಚ್ಚೇನೂ ಗೊತ್ತಿಲ್ಲ. ಇಳಿದು ನೋಡಿದವರಿಲ್ಲ! ನಮ್ಮ ಭೂಮಿಯ ಲಕ್ಷ ಲಕ್ಷ ಸಸ್ಯಗಳು, ಪ್ರಾಣಿಗಳು, ಇಡೀ ಮನುಕುಲದ ಸೃಷ್ಟಿ, ಸ್ಥಿತಿ ಲಯಕ್ಕೂ ಕಾರಣೀಕರ್ತ ನಮ್ಮ ಸೂರ್ಯ. ಸೌರವ್ಯೂಹದ 8 ಗ್ರಹಗಳು ಸುಮಾರು 182 ಉಪಗ್ರಹಗಳಾದ ಚಂದ್ರರು , ಲಕ್ಷ ಕೋಟಿ ಕಲ್ಲುಂಡೆಗಳು, ಲಕ್ಷ ಲಕ್ಷ ಧೂಮಕೇತುಗಳು ಎಲ್ಲವನ್ನೂ ಅವುಗಳದೇ ಅಕ್ಷಗಳಲ್ಲಿ ತಿರುತಿರುಗಿಸಿ ಕುಣಿಸುವವ ನಮ್ಮ ಸೂರ್ಯ. ಭೂಮಿ ಸೂರ್ಯರ ದೂರ ಸುಮಾರು 15 ಕೋಟಿ ಕಿಮೀ ಆದರೆ ಸೂರ್ಯನ ಗುರುತ್ವ ಹಿಡಿತ ಸುಮಾರು ಇದರ ಲಕ್ಷ ಪಟ್ಟು ದೂರದ ವರೆಗೂ (ಒಂದು ಲಕ್ಷ AU)ವ್ಯಾಪಿಸಿದೆ. ಆದರೆ ನಮ್ಮ ಸೂರ್ಯನಮ್ಮ ಆಕಾಶಗಂಗೆಯ ಅಸಂಖ್ಯ ನಕ್ಷತ್ರಗಳಲ್ಲಿ ಒಂದು ಸಾಮಾನ್ಯ ನಕ್ಷತ್ರ. ಸುಮಾರು ಸಾವಿರ ಕೋಟಿ ವರ್ಷದ ತನ್ನ ಆಯುಷ್ಯದಲ್ಲಿ 460 ಕೋಟಿ ವರ್ಷ ಕ್ರಮಿಸಿ ಈಗ ಮಧ್ಯ ವಯಸ್ಕ, ನಮ್ಮ ಸೂರ್ಯ. ತನ್ನ ಅಂತಿಮ ಹಂತದಲ್ಲಿ ಬೃಹತ್ ನಕ್ಷತ್ರಗಳಂತೆ ಸೂಪರ್ ನೋವಾ ಆಗಲಾರ. ಕಪ್ಪುರಂಧ್ರ ಬ್ಲಾಕ್ ಹೋಲೂ ಆಗಲಾರ. ಇನ್ನು 540 ಕೋಟಿ ವರ್ಷಗಳ ನಂತರ ಶ್ವೇತ ಕುಬ್ಜನಾಗಿ ನಂದಿ ಧೂಳಾಗುವನು.

ನಮ್ಮ ಸುರುಳಿ ಗೆಲಾಕ್ಸಿ ಆಕಾಶ ಗಂಗೆಯ ಸುಮಾರು 10 ಸಾವಿರ ಕೋಟಿ ನಕ್ಷತ್ರಗಳಂತೆ ತನ್ನ ಪಾಡಿಗೆ ತಾನು ಗೆಲಾಕ್ಸಿಯ ಕೇಂದ್ರದ ಸುತ್ತ ಸುಮಾರು 28 ಸಾವಿರ ಜ್ಯೋತಿ ವರ್ಷ ದೂರದಲ್ಲಿ ಸುತ್ತುತ್ತಿದ್ದಾನೆ. ಆಶ್ಚರ್ರ್ಯವೆಂದರೆ ನಮ್ಮ ಸೌರವ್ಯೂಹದ ಒಟ್ಟು ದ್ರವ್ಯರಾಶಿಯ 99.86 ಅಂಶ ತನ್ನಲ್ಲೇ ಇರಿಸಿಕೊಂಡಿರುವ ನಮ್ಮ ಸೂರ್ಯನ ದ್ರವ್ಯರಾಶಿ ಭೂಮಿಯ ದ್ರವ್ಯರಾಶಿಗಿಂತ ಸುಮಾರು 3 ಲಕ್ಷದ 33ಸಾವಿರದ 333ಪಟ್ಟು ಹೆಚ್ಚು. ನಮ್ಮ ಭೂಮಿಯ ಗಾತ್ರಕ್ಕಿಂತ 13 ಲಕ್ಷ ಪಟ್ಟು ದೊಡ್ಡದಿರುವ ಸೂರ್ಯ ಹೊಟ್ಟೆ ಮೇಲೆ 108 ಭೂಮಿ ಮಣಿಗಳ ಸರವಿಡಬಹುದು. ಸಕಲ ವಿದ್ಯುತ್ ಕಾಂತೀಯ ಕಿರಣಗಳನ್ನೂ ದಶದಿಶೆಗೆ ಹೊರ ಸೂಸುತ್ತಿರುವ ನಮ್ಮ ಸೂರ್ಯ ಸೌರವ್ಯೂಹದ ಆಧಾರಸ್ತಂಭ. ಅದೇನು ಭೂತಾಯಿಯ ಅದೃಷ್ಟವೋ , ಬೇರೆ ಯಾವ ಗ್ರಹದಲ್ಲೂ ಜೀವ ಜಂತುಗಳಿಗೆ ಬೇಕಾಗುವ ವಾತಾವರಣ ಸೌರವ್ಯೂಹದ ಬೇರಾವ ಗ್ರಹ ಉಪಗ್ರಹಗಳಲ್ಲಿ ಇರಿಸದೇ ನಮ್ಮಸೂರ್ಯ ಭೂತಾಯಿಯನ್ನು ಪ್ರೀತಿಸುವವ.

ನ್ಯೂಕ್ಲಿಯರ್ ಸಮ್ಮಿಲನ ಕ್ರಿಯೆಯಿಂದ ಕೊತಕೊತ ಕುದಿಯುವ ಪ್ಲಾಸ್ಮಾದ ಈ ನಮ್ಮ ಸೂರ್ಯನಲ್ಲಿ ಪ್ರಮುಖವಾಗಿ ಮೂರು ಪದರಗಳು. ಕೇಂದ್ರದ ಕೋರ್, ರೇಡಿಯೇಟಿವ್ ಝೋನ್ ಹಾಗೂ ಕನ್ವಿಕ್ಟಿವ್ ಝೋನ್. ಸುಮಾರು 13 ವಿಲಿಯನ್ ಡಿಗ್ರಿ ಸೆಲ್ಸಿಯಸ್ ನ ಉಷ್ಣತೆಯಲ್ಲಿರುವ ಕೇಂದ್ರ ಕೋರ್ ನ ನಂತರ ತಣಿಯುತ್ತಿರುವ ಇತರ ಪದರಗಳು. ಇವುಗಳ ನಂತರ ಹೊರಭಾಗದ ವಾತಾವರಣದಲ್ಲಿ ಪುನ: ಮೂರುಕವಚಗಳು ಫೋಟೊಸ್ಫಿಯರ್, ಕ್ರೋಮೋಸ್್ಫಿಯರ್ ಹಾಗೂ ಕೊರೋನಾ. ಅತ್ಯಂತ ಪರಮಾಶ್ಚರ್ಯವೆಂದರೆ ಈ ಸೂರ್ಯನ ಹೊರ ಪದರಗಳ ಉಷ್ಣತೆ ತಣಿದ ಹೊರ ಕವಚ ಫೋಟೋಸ್ಫಯರ್ನದ್ದು ಸುಮಾರು 6 ಸಾವಿರ ಡಿಗ್ರಿ. ಆದರೆ ಅದರ ಕೊನೇಯ ಹೊರ ಕವಚ, ಕೊರೋನಾದಲ್ಲಿ 15 ಲಕ್ಷ ಡಿಗ್ರಿಗಿಂತಲೂ ಹೆಚ್ಚು.ಇವುಗಳ ಸೋಜಿಗ ಇನ್ನೂ ಗೊತ್ತಾಗಿಲ್ಲ.

ಆಶ್ಚರ್ಯವೆಂದರೆ 62 ಮೂಲವಸ್ತುಗಳನ್ನು ಹೊಂದಿರುವ ನಮ್ಮ ಸೂರ್ಯನಲ್ಲಿ ಸುಮಾರು 75 ಅಂಶ ಹೈಡ್ರೋಜನ್. ಸೂರ್ಯ ನಿರಂತರ ನ್ಯೂಕ್ಲಿಯರ್ ಸಮ್ಮಿಲನ ಕ್ರಿಯೆಗಳ ಹರಿಕಾರ. ಕೇಂದ್ರದಲ್ಲಿ ಹೈಡ್ರೋಜನ್ ನಂತರ ಹೀಲಿಯಂ, ಕಾರ್ಬನ್ ಹೀಗೆ ಹೊರಹೊರಗೆ ನೀರುಳ್ಳಿ ಪದರದಲ್ಲಿರುವಂತೆ ಪದರಪದರಗಳಲ್ಲಿ ನಡೆಯುತ್ತಿರುತ್ತದೆ. ಸಹಸ್ರಾರು ವರ್ಷಗಳಿಂದ ಸೂರ್ಯನನ್ನು ಅರಿಯಲು ಮಾನವ ಪ್ರಯತ್ನ ನಡೆಯುತ್ತಲೇ ಇದೆಯಾದರೂ ಅಧ್ಯಯನ, ಚಿಂತನ ಮಂಥನಗಳಾಗಿದ್ದರೂ ಸಮೀಪಿಸಲು ಆಗದ ಉರಿಗೋಲವಾದುದರಿಂದ ಪ್ರಾಯೋಗಿಕವಾಗಿ ಅರಿಯಲು ಅಸಾಧ್ಯ. ಹಾಗಾಗಿ soho, Parker ಸೋಹೋ, ಪಾರ್ಕರ್ ಮೊದಲಾದ ಅನೇಕ ಕೃತಕ ಉಪಗ್ರಹಗಳು ದೂರದಲ್ಲಿ ನಿಂತು ಅಥವಾ ಸುತ್ತ ತಿರುಗುತ್ತಾ ಅಧ್ಯಯನ ಮಾಡುತ್ತಿವೆ.

ಸೂರ್ಯ ಭೂಮಿ ಜೊತೆಯಾಗಿ ಸೂರ್ಯನನ್ನು ನೆಮ್ಮದಿಯಿಂದ ಅಧ್ಯಯನ ಮಾಡಲು ಒಂದು ಒಳ್ಳೆಯ ಸ್ಥಳ ಮಾಡಿವೆ. ಅದೇ ಎಲ್ 1 ಸ್ಥಳ. ಭೂಮಿ ಸೂರ್ಯರ ಸರಾಸರಿ ದೂರ 15 ಕೋಟಿ ಕಿಮೀ. ಈ ದೂರದ ನಡುವೆ ಭೂಮಿಗೆ ಸಮೀಪ, ಭೂಮಿಯಿಂದ ಸುಮಾರು 15 ಲಕ್ಷ ಕಿಮೀ ದೂರದಲ್ಲಿ ಈ ಎರಡರ ಗುರುತ್ವ ನಮ್ಮ ಕೃತಕ ಉಪಗ್ರಹಕ್ಕೆ ಸಮಾನವಾಗುವುದರಿಂದ ಅಲ್ಲೇ ನಾವು ಹಾರಿಸಿದ ಉಪಗ್ರಹ ಆರಾಮವಾಗಿ ಆ ಜಾಗದಲ್ಲಿ ನೆಲೆಸುತ್ತದೆ.

ಭಾರತೀಯ ವಿಜ್ಞಾನಿಗಳು ಈ ಪವಿತ್ರ ಸ್ಥಳ ಎಲ್ 1 ನಲ್ಲಿ ನಮ್ಮ ನೆಚ್ಚಿನ ಕೃತಕ ಉಪಗ್ರಹ ಆದಿತ್ಯ ಎಲ್1 ನ್ನು ಇರಿಸಲು ಮುಂದಾಗಿದ್ದಾರೆ. ಸೂರ್ಯನ ಬಗ್ಗೆ ಅನೇಕ ಪ್ರಯೋಗಗಳನ್ನು ಮಾಡಿ ಸೂರ್ಯನನ್ನು ಅರಿಯಲು ಹೊರಟಿದ್ದಾರೆ. ಇದು ಭಾರತದ 140 ಕೋಟಿ ಜನರ ಹೆಮ್ಮೆ. ಸೋಜಿಗಗಳ ಗೂಡಾದ ಸೂರ್ಯನನ್ನು ಅರಿಯಲು 7 ವಿಭಾಗಗಳಲ್ಲಿ ಆದಿತ್ಯ ಎಲ್1 ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಗೆಲೀಲಿಯೋ 1610 ರಲ್ಲಿ ಕಂಡ ಸೂರ್ಯನ ಕಲೆಗಳು ಇವತ್ತಿಗೂ ವಿಸ್ಮಯ. ಜೊತೆ ಜೊತೆ ಯಾಗಿರುವ ಇವುಗಳ ಸಂಖ್ಯೆ ಪ್ರತೀ ವರ್ಷ ಬೇರೆ ಬೇರೆ. 11 ವರ್ಷಕ್ಕೆ ಪುನರಾವರ್ತಿಸುವ ಇವು ಒಂದು ವರ್ಷ ಇರುವುದೇ ಇಲ್ಲ. ಫೋಟೋ ಸ್ಪಿಯರ್ ನಿಂದ ಚಿಮ್ಮುವ ಕ್ಂತೀಯ ಸಮೂಹ ಬಹು ವಿಸ್ಮಯ ಇವುಗಳಿಗೆ ಕಾರಣವೆಂದು ಅಂದಾಜಿಸಲಾಗಿದೆ.

ಸೂರ್ಯನ ಕಾಂತೀಯ ವಿಸ್ಮಯ, ಸೌರ ಕಲೆಗಳು, ಕೊರೋನಾ ವಿಚಿತ್ರ, ಬಿಡಗಡೆಯಾಗಿ ದಶ ದಿಶೆಗಳಿಗೆ ರಾಚುವ ವಿದ್ಯುತ್ಕಾಂತೀಯ ಕಿರಣಗಳ ಸೌರಮಾರುತಗಳ ವೈಭವ, ಕೊರೋನಲ್ ಮಾಸ್ ಇಜೆಕ್ಷನ್ ನ ಶಕ್ತಿಯುತ ಕಣಗಳ ಪ್ರವಾಹಗಳ ಮುನ್ಸೂಚನೆ ಹೀಗೆ ಅನೇಕ ಪ್ರಯೋಗಗಳನ್ನು ಮಾಡಲು ಆದಿತ್ಯ ಎಲ್1 ಅಣಿಯಾಗಿದೆ. ಒಂದು ರೀತಿಯಲ್ಲಿ ನಮ್ಮ ಅರಮನೆಗಳ ಹೊರ ಕೋಟೆಯ ಮೇಲಿರುವ ಕಾವಲುಗಾರನಂತೆ ಸೂರ್ಯನಿಂದ ಬರುವ ಕಣ ಪ್ರವಾಹಗಳ ಮುನ್ನೆಚ್ಚರಿಕೆಯ ಕಾವಲುಗಾರ ನಮ್ಮ ಆದಿತ್ಯ ಎಲ್1. ಈ ಶಕ್ತಿಯುತ ಕಣಗಳು ನಮ್ಮ ವಿದ್ಯುತ್ ವ್ಯವಸ್ಥೆಯನ್ನು ತಲ್ಲಣ ಗೊಳಿಸಿಯಾವು. ಹಾಗೆ ನಮ್ಮ ಸುತ್ತಲ ಆಕಾಶದಲ್ಲಿರುವ ಕೃತಕ ಉಪಗ್ರಹಗಳನ್ನೂ ಹಾಳು ಮಾಡಿಯಾವು. ನಮ್ಮ ಭೂ ವಾತಾವರಣದ ಕಣಗಳನ್ನೂ ತಲ್ಲಣಗೊಳಿಸಿಯಾವು.

ವಿಶ್ವವೇ ಭಾರತದ ವಿಜ್ಞಾನಿಗಳ ಈ ಕುತೂಹಲ ಪ್ರಯೋಗವನ್ನು ನಿಬ್ಬೆರಗಾಗಿ ವೀಕ್ಷಿಸುತ್ತಿವೆ. ನಮ್ಮ ವಿಜ್ಞಾನಿಗಳ ಈ ಪ್ರಾಮಾಣಿಕ ಪ್ಯಯತ್ನಕ್ಕೆ ನಮ್ಮ ಅನ್ನದಾತ ಜ್ಞಾನದಾತ ಆದಿತ್ಯ ಶುಭಹೇಳಲಿ. ನಮ್ಮ ನೆಚ್ಚಿನ ಆದಿತ್ಯ ಎಲ್1 ಗೆ ನಮ್ಮೆಲ್ಲರ ಶುಭಾಶಯಗಳು.

-ಡಾ. ಎ.ಪಿ. ಭಟ್ ಉಡುಪಿ.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!