Friday, June 5, 2026
Friday, June 5, 2026

ಜ.3- ಭೂಮಿಗೆ ಸೂರ್ಯ ಚಂದ್ರರ ಬಲು ಅಪರೂಪದ ಸಂಗಮ

ಜ.3- ಭೂಮಿಗೆ ಸೂರ್ಯ ಚಂದ್ರರ ಬಲು ಅಪರೂಪದ ಸಂಗಮ

Date:

ನವರಿ 3 ರಂದು ಭೂಮಿಗೆ ಸೂರ್ಯ ಚಂದ್ರರ ಬಲು ಅಪರೂಪದ ಸಂಗಮ. ಈ ಸಂದರ್ಭ ಅತೀ ವಿರಳ. ಖಗೋಳದಲ್ಲಿ ಇದೊಂದು ವಿಶೇಷ ದಿನ. ಈ ದಿನ ಸೂರ್ಯನೂ ಸುಮಾರು 30 ಲಕ್ಷ ಕಿಮೀ ಭೂಮಿಗೆ ಸಮೀಪ ಬಂದು ದೊಡ್ಡದಾಗಿ ಕಾಣುವುದು., ಚಂದ್ರನೂ ಸುಮಾರು 27ಸಾವಿರ ಕಿಮೀ ಸಮೀಪ ಬಂದು ದೊಡ್ದಾಗಿ ಕಾಣುವುದು . ಈ ಘಟನೆ ನಡೆಯುವುದು ಒಂದೇ ದಿನ, ಅದೇ ವಿಶೇಷ.

ಜನವರಿ 3ರಂದು ಹುಣ್ಣಿಮೆ, ಹಾಗೂ ಸೂಪರ್ ಮೂನ್. ಇದು ಈ ವರ್ಷದ ಪ್ರಥಮ ಸೂಪರ್ ಮೂನ್. ಸೂಪರ್ಮೂನ್ ನಿಂದಾಗಿ ಹುಣ್ಣಿಮೆಯ ಚಂದ್ರ ಭೂಮಿಗೆ ಸುಮಾರು 27000 ಕಿಮೀ ಸಮೀಪ ಬಂದು 14 ಅಂಶ ದೊಡ್ಡದಾಗಿ, ಸುಮಾರು 30 ಅಂಶ ಹೆಚ್ಚಿನ ಹುಣ್ಣಿಮೆಯ ಬೆಳ್ಳಂ ಬೆಳಕಿಂದ ಬೆಳಗುತ್ತದೆ.
ಸೂರ್ಯನಲ್ಲೂ ಇಂದು ವರ್ಷದ ವಿಶೇಷ ದಿನ. ಸೂರ್ಯನ ಸುತ್ತ ತಿರುಗುವ ಭೂಮಿಯ ದೀರ್ಘ ವೃತ್ತದ ಕಾರಣದಿಂದ ಜನವರಿ 3ರಂದು ಸಮೀಪ ದೂರ (ಪೆರಿಜಿಗೆ) ಭೂಮಿ ಬಂದು ಸರಾಸರಿ ದೂರ 15 ಕೋಟಿ ಕಿಮೀ ಕ್ಕಿಂತ 14 ಕೋಟಿ 70 ಲಕ್ಷ ಕಿಮೀ ಗೆ ಬರಲಿದೆ. ಇದರಿಂದ ಸೂರ್ಯ ಮಾಮೂಲಿಗಿಂತ ಭೂಮಿಗೆ ಸಮೀಪ ಬರಲಿದೆ. ಹಾಗಾಗಿ ಸೂರ್ಯ ಮಾಮೂಲಿಗಿಂತ ದೊಡ್ಡದಾಗಿ ಕಾಣುವುದು.

ಈ ವರ್ಷ ಭೂಮಿ ಜನವರಿ 3 ಪೆರಿಜಿಗೆ ಬರುವುದು, ಜುಲೈ 6ರಂದು ಅಪೊಜಿಗೆ ಬರುವುದು. ಸೂರ್ಯ ಸುತ್ತ ತಿರುಗುವ ಭೂಮಿ ಹಾಗೂ ಭೂಮಿಯ ಸುತ್ತ ತಿರುಗುವ ಚಂದ್ರ ಪಥ ವರ್ತುಲವಲ್ಲದೇ ದೀರ್ಘ ವೃತ್ತಾಕಾರವಾಗಿರುವುದೀ ಈ ಎಲ್ಲ ಸುಂದರ ಖಗೋಳ ವಿದ್ಯಾಮಾನಗಳಿಗೆ ಕಾರಣ. ಅದರಲ್ಲೂ ಈ ವರ್ಷ ಜನವರಿ 3 ರಂದು ಹುಣ್ಣಿಮೆ ಬಂದು ಸೂಪರ್ಮೂನ್ ಆಗಿರುವುದು ವಿಶೇಷ.

ಡಾ. ಎ.ಪಿ ಭಟ್ ಉಡುಪಿ

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು, ಜೂ.4: ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ,...

ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು: ಡಾ.ಸುಧಾಕರ್ ಶೆಟ್ಟಿ; ಸೇನೆಗೆ ಒಂದು ಲಕ್ಷ ರೂಪಾಯಿ ಹಸ್ತಾಂತರದ ಮೂಲಕ ಮಾಲಿಕೆ ಪ್ರಾರಂಭ

ಕಾರ್ಕಳ, ಜೂ.4: ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ನಮ್ಮ ವ್ಯಕ್ತಿತ್ವದೊಂದಿಗೆ ಜೋಡಿಸಿಕೊಂಡಾಗ ರಾಷ್ಟ್ರ...

ಶಿರ್ವ: ಜೀವನೋಪಾಯ ಸೇವಾ ಕೇಂದ್ರ ಉದ್ಘಾಟನೆ

ಶಿರ್ವ, ಜೂ.೪: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ, ಜಿಲ್ಲಾ...

ಸಮಾಜ ಸೇವಕ ಗುರುದತ್ ಪ್ರಭು ಅವರಿಂದ ಪೌರ ಕಾರ್ಮಿಕರಿಗೆ ಹಣ್ಣು, ಬಟ್ಟೆ ವಿತರಣೆ

ಬೆಂಗಳೂರು, ಜೂ.4: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಸಮಾಜ ಸೇವಕರು...
error: Content is protected !!