Saturday, July 25, 2026
Saturday, July 25, 2026

ಬಜೆಟ್ ವಿಶ್ಲೇಷಣೆ

ಬಜೆಟ್ ವಿಶ್ಲೇಷಣೆ

Date:

ಗರ ಪ್ರದೇಶಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ನೀಡಿರುವುದು ಸ್ವಾಗತಾರ್ಹ. ಹೈ ಸ್ಪೀಡ್ ರೈಲ್ವೆ ಕಾರಿಡಾರ್ ಬೆಂಗಳೂರಿಗೂ ವಿಸ್ತರಣೆ ಮಾಡಿರುವುದು ಶ್ಲಾಘನೀಯ. ಟ್ಯೂರಿಸಂ ಬೆಳವಣಿಗೆಗೆ ಪೂರಕವಾಗಿ ಮೆಡಿಕಲ್‌ ಟ್ಯುಾರಿಸಂ ಹೆಸರಿನಲ್ಲಿ ಐದು ಪ್ರದೇಶದಲ್ಲಿ ಮೆಡಿಕಲ್‌ ಹಬ್ ಸ್ಥಾಪನೆಗೆ ಮುಂದಾಗಿರುವುದು ಉದ್ಯೋಗ ಸೃಷ್ಟಿಗೆ ಸಹಾಯಕವಾಗಬಹುದು ಅನ್ನುವುದು ಸರ್ಕಾರದ ನಿರೀಕ್ಷೆ. ಪಶು ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಹೆಚ್ಚಿನ ಅನುದಾನದ ಭರವಸೆ ಆಶಾದಾಯಕ. ಸಣ್ಣ ಕೈಗಾರಿಕೆ ಮತ್ತು ಖಾದಿ ಗುಡಿಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ಉತ್ತೇಜನ ಕ್ರಮ ಸ್ವಾಗತಾರ್ಹ.

ಕರಾವಳಿ ಪ್ರದೇಶದ ಮೀನುಗಾರರ ಸಹಕಾರಿ ಸಂಸ್ಥೆ ಸ್ಥಾಪನೆ ಬಗ್ಗೆ ಬಜೆಟ್ ನಲ್ಲಿ ಒತ್ತು ನೀಡಿರುವುದು ಬಜೆಟ್ ನಲ್ಲಿ ಕಾಣುವ ಉತ್ತಮ ಅಂಶ. ಜಿ.ಎಸ್.ಟಿ ಸರಳೀಕೃತ ನಿರ್ಧಾರ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಸಮಾಧಾನಕರ ಬಜೆಟ್. ಕ್ಯಾನ್ಸರ್‌ ನಂತಹ ಪ್ರಮುಖ ಖಾಯಿಲೆಗಳ ಔಷಧಿಗಳಿಗೆ ತೆರಿಗೆ ವಿನಾಯಿತಿ ತೇೂರಿರುವುದು ಬಜೆಟ್ ನಲ್ಲಿ ಕಾಣುವ ಇನ್ನೊಂದು ಪ್ರಮುಖ ಅಂಶ. 2047 ತನಕ ಭಾರತದಲ್ಲಿ ವಿದೇಶಿ ಕಂಪನಿಗಳ ಬಂಡವಾಳ ಹೂಡಿಕೆಗೆ ತೆರಿಗೆ ವಿನಾಯಿತಿ ನೀಡಿರುವುದರಿಂದ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಬಹುದು.

ಒಟ್ಟಿನಲ್ಲಿ ವಿತ್ತ ಸಚಿವರು ಮಂಡಿಸಿದ ಬಜೆಟ್ ಅಭಿವೃದ್ಧಿ ಜನಪರ ಯೇೂಗಕ್ಷೇಮದ ದೃಷ್ಟಿಯಿಂದ ಹೊಸದೊಂದು ಕನಸು ಮೂಡಿಸಿದೆ. ಆದರೆ ಜನಸಾಮಾನ್ಯರ ಮುಂದಿರುವ ಬಹುದೊಡ್ಡ ಪ್ರಶ್ನೆ ಅಂದರೆ ಕಳೆದ ಆರ್ಥಿಕ ವರ್ಷದಲ್ಲಿ ಮಂಡಿಸಿದ ಬಜೆಟ್ ಎಷ್ಟರ ಮಟ್ಟಿಗೆ ಅನುಷ್ಠಾನಗೊಂಡಿದೆ ಅನ್ನುವ ಲೆಕ್ಕಾಚಾರ ಪ್ರಸ್ತುತ ಬಜೆಟ್ ನಲ್ಲಿ ಎಲ್ಲಿಯೂ ಉಲ್ಲೇಖಿಸದೇ ಇರುವುದು ವಿಷಾದನೀಯ. ಜನಸಾಮಾನ್ಯರಿಗೆ ಯಾವುದೇ ಬಜೆಟ್ ಮೇಲೆ ವಿಶ್ವಾಸಾರ್ಹತೆ ಮೂಡಿಬರಬೇಕಾದರೆ ಹಿಂದಿನ ಬಜೆಟ್ ಮೇಲಿನ ಪ್ರಗತಿಯ ಕುರಿತಾಗಿ ಸದನಕ್ಕೆ ಮಾಹಿತಿ ನೀಡುವ ಕಾರ್ಯ ನಡೆಯಲೇಬೇಕು ಅನ್ನುವುದು ನನ್ನ ಸ್ವಷ್ಟ ಅಭಿಪ್ರಾಯ.

ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಉಡುಪಿ (ನಿವೃತ್ತ ರಾಜ್ಯಶಾಸ್ತ್ರ ಪ್ರಾಧ್ಯಾಪಕ)

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!