Sunday, February 23, 2025
Sunday, February 23, 2025

ಕುಟುಂಬ ಸಂಸಾರದ ನಡುವೆಯೂ ಸಾಧನೆಯ ಬೆನ್ನು ಹತ್ತಿದ ಗ್ರಾಮೀಣ ಮಹಿಳೆ

ಕುಟುಂಬ ಸಂಸಾರದ ನಡುವೆಯೂ ಸಾಧನೆಯ ಬೆನ್ನು ಹತ್ತಿದ ಗ್ರಾಮೀಣ ಮಹಿಳೆ

Date:

ಶಿಕ್ಷಣ ಎಂಬುದು ವ್ಯಕ್ತಿತ್ವ ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣು ಮಕ್ಕಳು ಅನೇಕರು ಶಿಕ್ಷಣದಲ್ಲಿ ಮುಂದೆ ಇದ್ದರೂ ಮದುವೆಯ ನಂತರ ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದ ಅನೇಕ ಹೆಣ್ಣು ಮಕ್ಕಳನ್ನು ನಾವು ಕಾಣಬಹುದಾಗಿದೆ. ಹೀಗಿರವಲ್ಲಿ ಪುತ್ತೂರು ತಾಲೂಕಿನ ಗ್ರಾಮೀಣ ಪ್ರದೇಶದ ಹೆಣ್ಣು ಮಗಳೊಬ್ಬಳು ಶಿಕ್ಷಣ ಪಡೆಯಲು ನಡೆದು ಬಂದ ದಾರಿಯು ಆಶ್ಚರ್ಯಕರವಾಗಿದೆ. ತನ್ನ ಬಾಲ್ಯದಲ್ಲೇ ತನಗೆ ಬುದ್ಧಿ ಶಕ್ತಿ ಬರುವ ಮೊದಲೇ ತಂದೆಯನ್ನು ಕಳೆದುಕೊಂಡಿರುವ ಈಕೆಯ ಹೆಸರು ಆಯಿಷಾ. ತಂದೆ ಧಾರ್ಮಿಕ ಕ್ಷೇತ್ರದಲ್ಲಿ ಗುರುಗಳಾಗಿದ್ದು, ತನ್ನ ಅಣ್ಣ ತಂದೆಯ ಆದರ್ಶದಂತೆ ಧಾರ್ಮಿಕ ಕ್ಷೇತ್ರದಲ್ಲಿ ತೊಡೆದುಕೊಂಡಿದ್ದಾರೆ. ಕಷ್ಟದ ಸಮಯದಲ್ಲಿ ಪಿಯುಸಿ ಶಿಕ್ಷಣವನ್ನು ಪೂರೈಸಿದ ಸಂದರ್ಭದಲ್ಲಿ ಉತ್ತಮ ಸಂಬಂಧ ಮನೆಗೆ ಹುಡುಕಿಕೊಂಡು ಬಂದಾಗ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ ಮನೆಯವರ ಆಶಯದಂತೆ ನೌಫಲ್ ಎಂಬುವರ ಜೊತೆ ವಿವಾಹವಾಗುತ್ತಾರೆ. ನಂತರ ಒಂದು ಮಗುವಿಗೆ ಜನ್ಮ ನೀಡಿ ಸುಖ ಸಂಸಾರದಲ್ಲಿ ಇರುವಾಗ, ಆಯಿಷಾ ಎಂಬ ಹೆಣ್ಣುಮಗಳು ತನ್ನ ಗಂಡ ಹಾಗೂ ಮನೆಯವರಲ್ಲಿ ತನ್ನ ಕಲಿಕೆಯ ಕನಸನ್ನ ಹೇಳುತ್ತಾಳೆ. ಇದಕ್ಕೆ ಗಂಡನಾದ ನೌಫಲ್ ಹಾಗೂ ಅವರ ಕುಟುಂಬದವರು ಸಕಾರಾತ್ಮಕವಾಗಿ ಸ್ಪಂದಿಸಿ ತನ್ನ ಬಾಲ್ಯದ ಕನಸು ಉತ್ತಮ ವಕೀಲೆಯಾಗಬೇಕೆಂಬ ಕನಸಿಗೆ ಚಿಗುರು ಮೂಡುತ್ತದೆ.

ತನ್ನ ಶಿಕ್ಷಣವನ್ನು ಮುಂದುವರಿಸುವ ನಿಟ್ಟಿನಲ್ಲಿ ತನ್ನ 1 ವರ್ಷ 2 ತಿಂಗಳ ಮಗುವಿನ ಜೊತೆಗೆ ವಿವೇಕಾನಂದ ಕಾನೂನು ಕಾಲೇಜು ಪುತ್ತೂರಿನಲ್ಲಿ ಐದು ವರ್ಷದ ಕಾನೂನು ಪದವಿ ಶಿಕ್ಷಣ ಪಡೆಯಲು ಪ್ರವೇಶ ಪಡೆದು ಪ್ರಸ್ತುತ ಐದನೇ ವರ್ಷದ ಕೊನೆಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಹೀಗೆಯೇ ಹಲವಾರು ಹೆಣ್ಣು ಮಕ್ಕಳು ಮದುವೆಯ ನಂತರವೂ ಕೂಡ ತಮ್ಮ ಗುರಿಯನ್ನು ಸಾಧಿಸಲು ಶ್ರಮ ಪಡುತ್ತಿದ್ದಾರೆ. ಯಾವುದೇ ಹೆಣ್ಣುಮಕ್ಕಳು ತಮ್ಮ ಕನಸನ್ನು ಕನಸಾಗಿ ಮಣ್ಣು ಮಾಡುವ ಮೊದಲು ತಮ್ಮ ಹೆತ್ತವರ ಹಾಗೂ ತಮ್ಮ ಗಂಡ ಹಾಗೂ ಅವರ ಮನೆಯವರ ಬಳಿ ವ್ಯಕ್ತಪಡಿಸಿದ್ದಲ್ಲಿ ಇನ್ನೊಂದು ಆಯಿಷಾ ನೀವು ಆಗಬಹುದು.

(ಈ ಲೇಖನದಲ್ಲಿ ವ್ಯಕ್ತಿಗಳ ಹೆಸರನ್ನು ಬದಲಿಸಲಾಗಿದೆ.)

ಮಹಮ್ಮದ್ ಅಸ್ಗರ್, ನ್ಯಾಯವಾದಿ, 9742964416

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!