Monday, February 24, 2025
Monday, February 24, 2025

ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಅನಾವರಣಗೊಳಿಸಿದ ಕಾಂತಾರ

ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಅನಾವರಣಗೊಳಿಸಿದ ಕಾಂತಾರ

Date:

ಕಾಂತಾರ ಚಿತ್ರವನ್ನು ವೀಕ್ಷಿಸಿದೆ. ರಿಷಬ್ ಶೆಟ್ಟಿ ಅವರು ಅದ್ಬುತವಾಗಿ ನಟಿಸಿದ್ದಾರೆ. ಕಾಡಿನ ಜನರ ಅಳಿವು ಉಳಿವಿನ ಹೋರಾಟ ಒಂದೆಡೆಯಾದರೆ, ನಾಡಿನ ಬಂಡವಾಳಶಾಹಿಗಳ ಕರಾಳತೆ ಮತ್ತೊಂದೆಡೆ ಇವೆಲ್ಲವನ್ನೂ ನಿರ್ದೇಶಕರು ಅದ್ಭುತವಾಗಿ ಚಿತ್ರಿಸಿದ್ದಾರೆ.

ಕರಾವಳಿಯ ದೈವಾರಾಧನೆ ಮತ್ತು ಕರ್ನಾಟಕದ ಭವ್ಯ ಸಾಂಸ್ಕೃತಿಕ ಪರಂಪರೆ ಎಂತದ್ದು ಅನ್ನೋದನ್ನು ರಿಷಬ್ ಶೆಟ್ಟಿ ಅವರು ತೀರಾ ಸರಳವಾಗಿ ಅಚ್ಚುಕಟ್ಟಾಗಿ ವಿವರಿಸಿದ್ದಾರೆ. ವಿವಿಧತೆಯಲ್ಲಿ ಏಕತೆಯನ್ನು ಹೊತ್ತು ಸಾಗುತ್ತಿರುವ ಕರ್ನಾಟಕದ ಸಾಂಸ್ಕೃತಿಕ ಪರಂಪರೆ ಭಾರತಕ್ಕೆ ಮಾರ್ಗದರ್ಶನ ನೀಡುತ್ತಿದೆ ಎಂದರೆ ಅತಿಶಯೋಕ್ತಿಯಲ್ಲ.

ಒಟ್ಟಾರೆಯಾಗಿ ಕಾಂತಾರ ಕನ್ನಡ ನಾಡಿನ ಅಸ್ಮಿತೆಯನ್ನು ಬಿಂಬಿಸುವ ಕನ್ನಡದ ಚಿತ್ರ ಎಂದರೆ ತಪ್ಪಾಗಲಾರದು. ವಿವಿಧತೆಯಲ್ಲಿ ಏಕತೆಗೆ ಹೆಸರಾಗಿರುವ ಕರ್ನಾಟಕದಲ್ಲಿ ಇನ್ನೂ ಅದೆಷ್ಟೋ ವಿಭಿನ್ನ ವಿನೂತನ ಸಂಸೃತಿಗಳಿವೆ. ಅವೆಲ್ಲವನ್ನೂ ಕನ್ನಡ ಚಿತ್ರರಂಗ ಬಳಸಿಕೊಂಡು ಚಲನಚಿತ್ರಗಳನ್ನು ರೂಪಿಸಿದರೆ ಕರ್ನಾಟಕದ ಭವ್ಯ ಸಾಂಸ್ಕೃತಿಕ ಪರಂಪರೆ ಇಡೀ ವಿಶ್ವಕ್ಕೆ ಪರಿಚಯವಾಗಲಿದೆ.

ಕಾಂತಾರ ಚಿತ್ರತಂಡದವರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಜೊತೆಗೆ ಚಿತ್ರ ಇನ್ನಷ್ಟು ಯಶಸ್ಸು ಕಂಡು ಜನರ ಮನ್ನಣೆಯನ್ನು ಗಳಿಸಲಿ ಎಂದು ಹಾರೈಸುತ್ತೇನೆ.

-ಪ್ರಜ್ವಲ್ ರೇವಣ್ಣ- ಸಂಸದರು, ಹಾಸನ ಲೋಕಸಭಾ ಕ್ಷೇತ್ರ

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!