Sunday, February 2, 2025
Sunday, February 2, 2025

ಮಧ್ಯಮ ವರ್ಗದವರಿಗೆ ಸಂತೃಪ್ತಿ ತಂದ ಬಜೆಟ್

ಮಧ್ಯಮ ವರ್ಗದವರಿಗೆ ಸಂತೃಪ್ತಿ ತಂದ ಬಜೆಟ್

Date:

ಬಾರಿಯ ಕೇಂದ್ರ ಸರ್ಕಾರ ಮಂಡಿಸಿದ ಆಯ ವ್ಯಯ ಲೆಕ್ಕಾಚಾರ ಬಹುಮುಖ್ಯವಾಗಿ ಮಧ್ಯಮ ವರ್ಗದವರನ್ನು ಖುಷಿಪಡಿಸಿದೆ ಅನ್ನುವುದು ಬಜೆಟ್ ನ ಮೇಲ್ನೋಟಕ್ಕೆ ವ್ಯಕ್ತವಾಗುತ್ತದೆ. ಬಹುಮುಖ್ಯವಾಗಿ ವೇತನ ಪಡೆಯುವವರಿಗೆ ಆದಾಯ ತೆರಿಗೆ ಮಿತಿಯನ್ನು 12 ಲಕ್ಷಕ್ಕೆ ಏರಿಸಿರುವುದು ಸಂತಸ ತಂದಿದೆ. ಆದರೆ ಇಡಿ ಬಜೆಟ್ ನಲ್ಲಿ ಬಿಹಾರಕ್ಕೆ ಹೆಚ್ಚಿನ ಒತ್ತು ಕೊಟ್ಟಿರುವುದು ಎದ್ದು ಕಾಣುತ್ತದೆ. ಇದು ಪ್ರಾದೇಶಿಕ ಅಸಮತೇೂಲನ ಭಾವ ಸೃಷ್ಟಿ ಮಾಡುತ್ತದೆ. ಐ.ಐ.ಟಿ., ಗ್ರೀನ್ ಫಿಲ್ಡ್ ಏರ್ ಫೇೂರ್ಟ್ ವಿಸ್ತರಣೆ, 50ಸಾವಿರ ಹೆಕ್ಟೇರ್ ಭೂಮಿಗೆ ನೀರಾವರಿ ಸೌಕರ್ಯ ಇವೆಲ್ಲವೂ ಕೇಂದ್ರ ಸರ್ಕಾರದಲ್ಲಿ ನಿತೀಶ್ ಕುಮಾರ್ ರವರ ಪ್ರಭಾವ ಎಷ್ಟಿದೆ ಅನ್ನುವುದಕ್ಕೆ ನಿದರ್ಶನವೆಂದೇ ಕರೆಯಬೇಕು. ಹಾಗಾಗಿ ಪ್ರಾದೇಶಿಕ ಅಸಮತೇೂಲನ ಬಜೆಟ್ ಹಂಚಿಕೆಯಲ್ಲಿ ಎದ್ದು ಕಾಣುತ್ತಿದೆ.

ಅಗತ್ಯ ಔಷಧಿ ಉಪಕರಣಗಳ ತೆರಿಗೆ ವಿನಾಯಿತಿ ಶ್ಲಾಘನೀಯ. ಅಂಗನವಾಡಿ ಪರಿಸರ ಪರಿಕರಗಳ ಬಗ್ಗೆ ಒತ್ತು ಕೊಡಲಾಗಿದೆ ಹೊರತು ಅಂಗನವಾಡಿ ಕಾರ್ಯಕರ್ತರ ಬದುಕಿನ ಬಗ್ಗೆ ಎಲ್ಲೂ ಕೂಡಾ ಉಲ್ಲೇಖವೇ ಇಲ್ಲ. ಮಕ್ಕಳ ಆಟಿಕೆಗಳ ಉತ್ಪಾದನೆಯಲ್ಲಿ ಮೇಕ್ ಇನ್ ಇಂಡಿಯಾಕ್ಕೆ ಹೆಚ್ಚಿನ ಆದ್ಯತೆ ನೀಡಿರುವುದು ಶ್ಲಾಘನೀಯ, ಆದರೆ ಗುಣಮಟ್ಟದ ಸುಧಾರಣೆಗೆ ಯಾವುದೇ ಮಹತ್ವ ಕಾಣಲಿಲ್ಲ. ಹಿರಿಯ ನಾಗರಿಕರ ಟಿ.ಡಿ.ಎಸ್.ಮಿತಿಯನ್ನು ಒಂದು ಲಕ್ಷಕ್ಕೆ ಏರಿಸಿರುವುದು ಹಿರಿಯ ಹೆಚ್ಚಿನ ನೆಮ್ಮದಿ ತಂದಿದೆ. ಒಟ್ಟಿನಲ್ಲಿ ಸಮಿಶ್ರ ಸರಕಾರದ ಬಜೆಟ್ ಸಮಿಶ್ರವಾದ ಸಂತೃಪ್ತಿ ತಂದಿದೆ.

ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಉಡುಪಿ

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಅವಧಿ ಮುಗಿದಿರುವ ಬ್ಯಾನರ್ /ಕಟೌಟ್‌ಗಳ ತೆರವಿಗೆ ಸೂಚನೆ

ಉಡುಪಿ, ಫೆ.1: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಖಾಯಂ ಜಾಹೀರಾತು ಫಲಕಗಳಲ್ಲಿ...

ವಿಕಸಿತ ಭಾರತದ ಸದೃಢ ಆರ್ಥಿಕತೆಗೆ ಮುನ್ನುಡಿ ಬರೆಯಲಿರುವ ಬಜೆಟ್: ಯಶ್ಪಾಲ್ ಸುವರ್ಣ

ಉಡುಪಿ, ಫೆ.1: ಕಳೆದ ಹತ್ತು ವರ್ಷಗಳಿಂದ ನಿರಂತರ ಪ್ರಗತಿ ಸಾಧಿಸುತ್ತಾ ವಿಶ್ವದ...

ಬಜೆಟ್ ನಲ್ಲಿ ರಾಜ್ಯವನ್ನು ನಿರ್ಲಕ್ಷಿಸಲಾಗಿದೆ: ಉಡುಪಿ ಬ್ಲಾಕ್ ಕಾಂಗ್ರೆಸ್

ಉಡುಪಿ, ಫೆ.1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ...

ಆತ್ಮವಿಶ್ವಾಸದಿಂದ ಮುನ್ನಡೆದರೆ ಯಾವುದೂ ಅಸಾಧ್ಯವಲ್ಲ: ಗೌತಮ್ ನಾವಡ

ಬಂಟಕಲ್, ಫೆ.1: ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ...
error: Content is protected !!