Tuesday, September 8, 2026
Tuesday, September 8, 2026

ತೆಂಕನಿಡಿಯೂರು ಕಾಲೇಜು: ಸಂವಿಧಾನ ದಿನಾಚರಣೆ

ತೆಂಕನಿಡಿಯೂರು ಕಾಲೇಜು: ಸಂವಿಧಾನ ದಿನಾಚರಣೆ

Date:

ಮಲ್ಪೆ, ನ.26: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಐಕ್ಯೂಎಸಿ, ರಾಜಕೀಯಶಾಸ್ತ್ರ ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಕ್ಲಬ್ ಇವರ ಜಂಟಿ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸರಕಾರಿ ಪದವಿಪೂರ್ವ ಕಾಲೇಜು ತೆಂಕನಿಡಿಯೂರು ಇಲ್ಲಿನ ರಾಜಕೀಯಶಾಸ್ತ್ರ ಉಪನ್ಯಾಸಕ ವಾಸು ಮೊಗೇರ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ, ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಎದುರಾಗುವ ಅಪಾಯಗಳನ್ನು ಎದುರಿಸುವ ಪ್ರಜ್ಞಾವಂತಿಕೆಯನ್ನು ಪ್ರಜೆಗಳು ಬೆಳೆಸಿಕೊಂಡಾಗ ಮಾತ್ರ ಸಂವಿಧಾನದ ಆಶಯಗಳು ಸಾಕಾರಗೊಳ್ಳಲು ಸಾಧ್ಯ ಎಂದರು.

ಮುಖ್ಯ ಅತಿಥಿಗಳಾಗಿ ತೆಂಕನಿಡಿಯೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ಕರಬ ಸಂವಿಧಾನ ಸಾರುವ ಮೌಲ್ಯಗಳೆಲ್ಲವೂ ಮಾನವೀಯ ಮೌಲ್ಯಗಳಾಗಿರುವುದರಿಂದ ಅದು ನಮ್ಮ ಬದುಕಿನ ಮೌಲ್ಯಗಳು ಮತ್ತು ಗೌರವಿಸುವುದು ನಮ್ಮ ನಾಗರಿಕ ಜವಾಬ್ದಾರಿ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವ್ಕರ್ ಸಂವಿಧಾನದ ಮೌಲ್ಯಗಳನ್ನು ಯುವಜನತೆ ಹೆಚ್ಚಾಗಿ ಅರಿತುಕೊಳ್ಳುವ ಅವಶ್ಯಕತೆ ಇದೆ ಎಂದರು.

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರಶಾಂತ್ ನೀಲಾವರ ಕಾರ್ಯಕ್ರಮದ ಔಚಿತ್ಯವನ್ನು ತಿಳಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಾಜ್ ಕುಮಾರ್, ಸಂದೇಶ್, ಐಕ್ಯೂಎಸಿ ಸಂಚಾಲಕರಾದ ಡಾ. ವಿಷ್ಣುಮೂರ್ತಿ ಪ್ರಭು, ರಾಜ್ಯಶಾಸ್ತ್ರ ಉಪನ್ಯಾಸಕರಾದ ಆರತಿ ಜಿ., ಹಾಗೂ ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ, ಬೋಧಕ -ಬೋಧಕೇತರ ವೃಂದದವರು ಕಾರ್ಯಕ್ರಮದಲ್ಲಿ ಭಾಗಿಯಾದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!