Thursday, March 26, 2026
Thursday, March 26, 2026

ಕಾನೂನು ಬದ್ಧ ದತ್ತು ಪ್ರಕ್ರಿಯೆ ಕುರಿತು ಜಾಗೃತಿ ಮತ್ತು ಕಿರು ನಾಟಕ ಪ್ರದರ್ಶನ

ಕಾನೂನು ಬದ್ಧ ದತ್ತು ಪ್ರಕ್ರಿಯೆ ಕುರಿತು ಜಾಗೃತಿ ಮತ್ತು ಕಿರು ನಾಟಕ ಪ್ರದರ್ಶನ

Date:

ಕುಂದಾಪುರ, ನ.27: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇಲ್ಲಿ ‘ರಾಷ್ಟ್ರೀಯ ದತ್ತು ಮಾಸಾಚರಣೆ’ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವುಗಳ ಆಶ್ರಯದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಂಯೋಜನೆಯಲ್ಲಿ ‘ಕಾನೂನು ಬದ್ಧ ದತ್ತು’ ಕುರಿತು ಜಾಗೃತಿ ಮತ್ತು ಕಿರು ನಾಟಕ ಪ್ರದರ್ಶನ ನಡೆಯಿತು.

ಕಾರ್ಯಕ್ರಮವನ್ನು ಸುಜಾತ ವಾಸುದೇವ, ಮಾಜಿ ಉಪಾಧ್ಯಕ್ಷರು, ಜಿಲ್ಲಾ ಪಂಚಾಯತ್ ಉಡುಪಿ ಇವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಾಗರತ್ನ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರು ಕಾನೂನು ಬದ್ಧ ದತ್ತು ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶಾರದಾ ವೈ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ಮತ್ತು ಶ್ರೇಯಸ್, ಯೋಜನಾ ಸಹವರ್ತಿ, ಡಬ್ಲ್ಯೂಎಐಸಿ ಇವರು ಕಾಲೇಜು ವಿದ್ಯಾರ್ಥಿಗಳಿಗೆ ಪೋಕ್ಸೋ, ಬಾಲ್ಯ ವಿವಾಹ, ಮಕ್ಕಳ ಸಾಗಾಣಿಕೆ ಹಾಗೂ ಮಾರಾಟ, ಮಕ್ಕಳ ರಕ್ಷಣೆ ಮತ್ತು ಪೋಷಣೆ ಕುರಿತಾಗಿ ಮಾಹಿತಿ ಮತ್ತು ಕಾನೂನು ಅರಿವು ನೀಡಿದರು. ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಭಿತ್ತಿ ಚಿತ್ರ ಪ್ರದರ್ಶನ ಮತ್ತು ಕಿರು ನಾಟಕದ ಮುಖಾಂತರ ‘ಕಾನೂನು ಬದ್ಧ ದತ್ತು’ ಕುರಿತಾಗಿ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿದ್ಧರು. ಈ ಸಂದರ್ಭದಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಎನ್.ಎಸ್.ಎಸ್. ಕಾರ್ಯಕ್ರಮಧಿಕಾರಿಗಳಾದ ನಿರಂಜನ ಶರ್ಮ ಮತ್ತು ಶೃತಿ ಆಚಾರ್ಯ ಎನ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜುವೇರಿಯಾ ನಿರೂಪಿಸಿದರು. ಅಕ್ಷತಾ ಸ್ವಾಗತಿಸಿದರು, ಅಕ್ಷಯ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ವಿಶೇಷ ಚೇತನ ಮಕ್ಕಳ ದತ್ತು ಪ್ರಕ್ರಿಯೆಯ ಸಂಕಲ್ಪ ಸಂದೇಶವನ್ನು ವಿದ್ಯಾರ್ಥಿನಿ ಶ್ರೀರಕ್ಷಾ ವಾಚಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ್ಞಾನ ವ್ಯಕ್ತಪಡಿಸುವ ಶೈಲಿಯನ್ನು ವಿದ್ಯಾರ್ಥಿಗಳು ಕರಗತ ಮಾಡಿಕೊಂಡರೆ ಮಾತ್ರ ಸಂದರ್ಶನಗಳಲ್ಲಿ ಯಶಸ್ಸು ಗಳಿಸಲು ಸಾಧ್ಯ: ಡಾ. ಗಣೇಶ್ ಪ್ರಸಾದ್ ಜಿ. ನಾಯಕ್

ಬಸ್ರೂರು, ಮಾ.26: ಸಂವಹನ ಕೌಶಲ್ಯಗಳನ್ನು ಚಿಕ್ಕ ವಯಸ್ಸಿನಿಂದಲೇ ಮೈಗೂಡಿಸಿಕೊಂಡರೆ ವಿದ್ಯಾರ್ಥಿ ಜೀವನದಲ್ಲಿ...

ದೇಶಾದ್ಯಂತ ಇಂಧನ ಕೊರತೆ ಇಲ್ಲ: ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ

ನವದೆಹಲಿ, ಮಾ.25: ದೇಶಾದ್ಯಂತ ಇಂಧನ ಕೊರತೆ ಇಲ್ಲ ಎಂದು ಭಾರತ್ ಪೆಟ್ರೋಲಿಯಂ...

ದೇಶವು 26 ಕೋಟಿ ಟನ್ ಕಚ್ಚಾ ತೈಲವನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಹೊಂದಿದೆ: ಸರ್ಕಾರ

ನವದೆಹಲಿ, ಮಾ.25: ದೇಶವು 26 ಕೋಟಿ ಟನ್ ಕಚ್ಚಾ ತೈಲವನ್ನು ಸಂಸ್ಕರಿಸುವ...

ಕ್ಷಯರೋಗದ ಶಾಶ್ವತ ನಿರ್ಮೂಲನೆಗೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿ: ಮನು ಪಟೇಲ್ ಬಿ.ವೈ

ಉಡುಪಿ, ಮಾ.25: ಕ್ಷಯರೋಗವು ಸಾರ್ವಜನಿಕ ಆರೋಗ್ಯ ವಲಯದಲ್ಲಿ ಸವಾಲನ್ನು ಒಡ್ಡುತ್ತಿದ್ದು, ದೇಶದಲ್ಲಿಯೇ...
error: Content is protected !!