Saturday, February 7, 2026
Saturday, February 7, 2026

ಎಂ.ಜಿಎಂ. ಸಂಧ್ಯಾ ಕಾಲೇಜು: ‘ಸಾರಥಿ’ ಅನಾವರಣ

ಎಂ.ಜಿಎಂ. ಸಂಧ್ಯಾ ಕಾಲೇಜು: ‘ಸಾರಥಿ’ ಅನಾವರಣ

Date:

ಉಡುಪಿ, ಡಿ.5: ಕಾಲೇಜಿನ ವಾರ್ಷಿಕ ಸಂಚಿಕೆಗಳಿಗೆ ಜೀವಂತಿಕೆ ಇದೆ. ಭಾವನಾತ್ಮಕ ಸಂಬಂಧಗಳನ್ನು ರೂಪಿಸುವ ಹೊತ್ತಿಗೆವೂ ಹೌದು.ಕಾಲೇಜಿನ ಸರ್ವಾಂಗೀಣ ಚಟುವಟಿಕೆಗಳನ್ನು ದಾಖಲಿಸುವುದರ ಜೊತೆಗೆ ವಿದ್ಯಾರ್ಥಿಗಳ ಬಹುಮುಖ ಪ್ರತಿಭೆಗಳನ್ನು ಪ್ರತಿಫಲಿಸುವ ದರ್ಪಣವೆಂದರೆ ಕಾಲೇಜು ವಾರ್ಷಿಕ ಸಂಚಿಕೆಗಳು. ಈ ನಿಟ್ಟಿನಲ್ಲಿ ಉಡುಪಿ ಎಂಜಿಎಂ.ಸಂಧ್ಯಾ ಕಾಲೇಜಿನ ವಾಷಿ೯ಕ ಸಂಚಿಕೆ ಸಾರಥಿ ಅತ್ಯುತ್ತಮ ಕೃತಿಯಾಗಿ ಮೂಡಿ ಬಂದಿದೆ ಎಂದು ಎಂ.ಜಿ.ಎಂ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.

ಅವರು, ಟಿ. ಮೇೂಹನದಾಸ್ ಪೈ ಸ್ಮಾರಕ ಅಮೃತ ಸೌಧ ಸಭಾಂಗಣದಲ್ಲಿ ಹಮ್ಮಿಕೊಂಡ ಎಂಜಿಎಂ.ಸಂಧ್ಯಾ ಕಾಲೇಜಿನ ವಾರ್ಷಿಕ ಸಂಚಿಕೆ ಸಾರಥಿ ಲೇೂಕಾರ್ಪಣೆಗೊಳಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಡಾ.ದೇವಿದಾಸ್ ಎಸ್.ನಾಯ್ಕ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಂಜಿಎಂ.ಕಾಲೇಜಿನ ಉಪ ಪ್ರಾಂಶುಪಾಲ ಡಾ.ಎಂ.ವಿಶ್ವನಾಥ ಪೈ, ವಾಣಿಜ್ಯಶಾಸ್ತ್ರ ವಿಭಾಗದ ಸಂಯೇೂಜಕಿ ಡಾ.ಮಲ್ಲಿಕಾ ಎ.ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉಪನ್ಯಾಸಕಿ ಕೃತಿಕಾ.ಪಿ. ಶೆಣೈ ಸ್ವಾಗತಿಸಿ, ಸಂಪಾದಕೀಯ ಮಂಡಳಿ ಉಪನ್ಯಾಸಕಿ ದೀಪಿಕಾ ಸಂಚಿಕೆಯ ಕುರಿತಾಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಪ್ರತಿನಿಧಿ ಭಾರ್ಗವ ಅತಿಥಿ ಪರಿಚಯ ನೀಡಿದರು. ಉಪನ್ಯಾಸಕ ಮೊಹಮ್ಮದ್ ಯಾಸೀನ್ ಮನ್ನಾ ವಂದಿಸಿದರು. ಶ್ರೀಕರ ಟಿ.ಎಸ್.ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!