Saturday, January 17, 2026
Saturday, January 17, 2026

ಬಿ. ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಸಂಚಿಕೆ ‘ಶಿಖರ’ ಅನಾವರಣ

ಬಿ. ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಸಂಚಿಕೆ ‘ಶಿಖರ’ ಅನಾವರಣ

Date:

ಕುಂದಾಪುರ, ಡಿ.14: ಮಂಗಳೂರು ವಿಶ್ವವಿದ್ಯಾನಿಲಯ ಅಂತರ್-ಕಾಲೇಜು ಮಟ್ಟದ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಗಮನ ಸೆಳೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2024-25ನೇ ಸಾಲಿನ ವಾರ್ಷಿಕ ಸಂಚಿಕೆ ‘ಶಿಖರ’ ಅನಾವರಣ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಡಯಟ್ ಉಡುಪಿ ಇದರ ಪ್ರಾಂಶುಪಾಲರಾದ ಡಾ. ಅಶೋಕ್ ಕಾಮತ್ ರವರು ಶಿಖರ ಸಂಚಿಕೆಯನ್ನು ಅನಾವರಣಗೊಳಿಸಿ ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಸುಧೀರ್ ಕುಮಾರ್ ಸ್ವಾಗತಿಸಿದರು. ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕಿ ರವಿನಾ ಸಿ. ಪೂಜಾರಿ ಅತಿಥಿಗಳನ್ನು ಪರಿಚಯಿಸಿದರು. ಶಿಖರ ವಾರ್ಷಿಕ ಸಂಚಿಕೆಯ ನಿರ್ವಾಹಕ ಸಂಪಾದಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು. ಕಾಲೇಜಿನ ಸಿ.ಎ., ಸಿ.ಎಸ್. ಹಾಗೂ ಸಿ.ಎಮ್.ಎ. ಸಾಧಕ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಪಲ್ಲವಿ ಪ್ರಾರ್ಥಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!