Sunday, July 26, 2026
Sunday, July 26, 2026

ಕಾಳಾವರ ವರದರಾಜ ಸರ್ಕಾರಿ ಪದವಿ ಕಾಲೇಜು: ಮಾನವ ಹಕ್ಕುಗಳ ದಿನಾಚರಣೆ

ಕಾಳಾವರ ವರದರಾಜ ಸರ್ಕಾರಿ ಪದವಿ ಕಾಲೇಜು: ಮಾನವ ಹಕ್ಕುಗಳ ದಿನಾಚರಣೆ

Date:

ಕೋಟೇಶ್ವರ, ಡಿ.14: ಮಾನವನು ಮಾನವನನ್ನು ಅರಿತು ಗೌರವಿಸಿ ಸಹಕಾರ ಸೌಹಾರ್ದತೆಯಿಂದ ಇರಲು ಮಾನವ ಹಕ್ಕು ಅತಿ ಅವಶ್ಯಕ. ಮಾನವ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳು. ಈ ಮಾನವೀಯ ಮೌಲ್ಯಗಳು ಇಂದಿಗೂ ಪ್ರಸ್ತುತ ಎಂದು ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ರೋಹಿಣಿ ಹೇಳಿದರು. ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರದ ಐ ಕ್ಯೂ ಎಸಿ ಮಾನವಿಕ ಸಂಘ ಇತಿಹಾಸ ಮತ್ತು ರಾಜ್ಯಶಾಸ್ತ್ರ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮಾನವ ಹಕ್ಕುಗಳ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದರು. ಐ.ಕ್ಯೂ.ಎ.ಸಿ ಸಂಚಾಲಕ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಶೇಖರ್ ಬಿ., ಮಾನವ ಹಕ್ಕುಗಳ ಸಂಘದ ರಕ್ಷಿತಾ ಮತ್ತು ಗಣೇಶ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಗಣೇಶ್ ಪೈ ಎಂ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಭಾಗೀರಥಿ ನಾಯ್ಕ ವಂದಿಸಿದರು. ನಾಗಮ್ಮ ಪ್ರಾರ್ಥಿಸಿ, ಕೃತಿಕಾ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!